ನಟ ದಳಪತಿ ವಿಜಯ್ 
ದೇಶ

ಕರೂರ್ ಕಾಲ್ತುಳಿತ ಪ್ರಕರಣ: ಜನವರಿ 19 ರಂದು ಮತ್ತೆ ದಳಪತಿ ವಿಜಯ್ ಗೆ ವಿಚಾರಣೆ, CBI ಸಮನ್ಸ್!

ಸೋಮವಾರ ಸಿಬಿಐ ಕೇಂದ್ರ ಕಚೇರಿಯಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಗಾದ ವಿಜಯ್ ಗೆ ಮಂಗಳವಾರ ಮತ್ತೆ ಬರುವಂತೆ ಸೂಚಿಸಲಾಗಿದೆ. ಆದರೆ ಪೊಂಗಲ್ ಹಬ್ಬವನ್ನು ಉಲ್ಲೇಖಿಸಿ ಮತ್ತೊಂದು ದಿನಾಂಕಕ್ಕೆ ವಿಜಯ್ ಮನವಿ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಕರೂರ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ವಿಚಾರಣೆ ಎದುರಿಸಿದ ಟಿವಿಕೆ ಮುಖ್ಯಸ್ಥ ಮತ್ತು ನಟ ವಿಜಯ್ ಅವರಿಗೆ ಮತ್ತೆ ಜನವರಿ 19 ರಂದು 2ನೇ ಸುತ್ತಿನ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ಇಲ್ಲಿನ ಸಿಬಿಐ ಕೇಂದ್ರ ಕಚೇರಿಯಲ್ಲಿ ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆಗೆ ಒಳಗಾದ ವಿಜಯ್ ಗೆ ಮಂಗಳವಾರ ಮತ್ತೆ ಬರುವಂತೆ ಸೂಚಿಸಲಾಗಿದೆ. ಆದರೆ ಪೊಂಗಲ್ ಹಬ್ಬವನ್ನು ಉಲ್ಲೇಖಿಸಿ ಮತ್ತೊಂದು ದಿನಾಂಕಕ್ಕೆ ವಿಜಯ್ ಮನವಿ ಮಾಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

ಈ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಎಸ್ ಡೇವಿಡ್ಸನ್ ದೇವಾಶಿರ್ವತಂ ಅವರನ್ನು ಕೂಡ ಸಿಬಿಐ ಸೋಮವಾರ ವಿಚಾರಣೆಗೆ ಒಳಪಡಿಸಿದೆ. ಸಿಬಿಐ ಇದುವರೆಗೆ ಹಲವಾರು ಟಿವಿಕೆ ಪದಾಧಿಕಾರಿಗಳು, ವಿಜಯ್ ಅವರ ಚಾಲಕ ಮತ್ತು ಕೆಲವು ಪೊಲೀಸ್ ಅಧಿಕಾರಿಗಳನ್ನು ತನಿಖೆಗೆ ಒಳಪಡಿಸಿದೆ.

ಸುಪ್ರೀಂ ಕೋರ್ಟ್ ಆದೇಶದ ನಂತರ ಸಿಬಿಐ ಎಸ್‌ಐಟಿಯಿಂದ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ತಮಿಳುನಾಡಿನ ಕರೂರ್‌ನಲ್ಲಿ ಕಳೆದ ವರ್ಷ ಸೆಪ್ಟೆಂಬರ್ 27 ರಂದು ಸಂಭವಿಸಿದ್ದ ಕಾಲ್ತುಳಿತದಲ್ಲಿ 41 ಜನರು ಸಾವನ್ನಪ್ಪಿದ್ದರು. 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ತನಿಖೆಯನ್ನು ವಹಿಸಿಕೊಳ್ಳಲು ಹಿರಿಯ ಅಧಿಕಾರಿಯನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐ ನಿರ್ದೇಶಕರಿಗೆ ಸೂಚಿಸಿತ್ತು. ಸಿಬಿಐ ತನಿಖೆಯ ಮೇಲ್ವಿಚಾರಣೆಗಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಅಜಯ್ ರಸ್ತೋಗಿ ನೇತೃತ್ವದ ಮೂರು ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ಸಹ ನ್ಯಾಯಾಲಯ ರಚಿಸಿದೆ.

ಕಾಲ್ತುಳಿತವು ದೇಶಾದ್ಯಂತ ನಾಗರಿಕರ ಮನಸ್ಸಿನಲ್ಲಿ ಆತಂಕ ಮೂಡಿಸಿದೆ ಎಂದು ನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ಎನ್ ವಿ ಅಂಜಾರಿಯಾ ಅವರನ್ನೊಳಗೊಂಡ ನ್ಯಾಯ ಪೀಠ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

'ಕರ್ನಾಟಕದ ಹಿತಕ್ಕಿಂತ, ಹೈಕಮಾಂಡ್ ಹಂಗೇ ಹೆಚ್ಚಾಯಿತೇ? ಜರ್ಮನಿ ಚಾನ್ಸೆಲರ್ ಸ್ವಾಗತಿಸದ CM, DCM, ವಿರುದ್ಧ ಬಿಜೆಪಿ ಕಿಡಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್‌ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

SCROLL FOR NEXT