ಆಕಾಶ ವಿಮಾನಯಾನ ಸಂಸ್ಥೆ 
ದೇಶ

ಟೇಕಾಫ್​ಗೆ ಸಿದ್ಧವಾಗಿದ್ದ ಪುಣೆ-ಬೆಂಗಳೂರು ಆಕಾಶ ಏರ್ ವಿಮಾನದಲ್ಲಿ ತಾಂತ್ರಿಕ ದೋಷ!

"ಪ್ರಯಾಣಿಕರು ವಿಮಾನ ಹತ್ತಿದ್ದರು ಮತ್ತು ವಿಮಾನವು ನಿರ್ಗಮನಕ್ಕೆ ಸಿದ್ಧವಾಗುತ್ತಿದ್ದಾಗ ಕೊನೆಯ ಕ್ಷಣದಲ್ಲಿ ವಿಮಾನದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ವರದಿಯಾಗಿದೆ. ನಂತರ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು".

ಮುಂಬೈ: ಪುಣೆ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ಆಕಾಶ ಏರ್ ವಿಮಾನಯಾನ ಸಂಸ್ಥೆಯ ಬೋಯಿಂಗ್ 737 ಮ್ಯಾಕ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಕಾರಣ ಬೆಂಗಳೂರಿಗೆ ಹೊರಟಿದ್ದ ಎಲ್ಲಾ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಯಾಣಿಕರು ಬೋಯಿಂಗ್ 737 ಮ್ಯಾಕ್ಸ್ ವಿಮಾನದಲ್ಲಿ ಸುಮಾರು ಒಂದೂವರೆ ಗಂಟೆಗಳ ಕಾಲ ಕುಳಿತಿದ್ದರು, ನಂತರ ಅವರನ್ನು ಕೆಳಗಿಳಿಸಲಾಯಿತು ಎಂದು ವಿಮಾನದಲ್ಲಿದ್ದ ಪ್ರಯಾಣಿಕರಲ್ಲಿ ಒಬ್ಬರು ಪಿಟಿಐಗೆ ತಿಳಿಸಿದ್ದಾರೆ.

ವಿಮಾನವು ಇಂದು ಬೆಳಗ್ಗೆ 8.50ಕ್ಕೆ ಪುಣೆಯಿಂದ ಹೊರಡಬೇಕಿತ್ತು ಮತ್ತು ಬೆಳಗ್ಗೆ 8.10 ರ ಸುಮಾರಿಗೆ ಪ್ರಯಾಣಿಕರು ವಿಮಾನ ಹತ್ತಿದ್ದರು.

"ಜನವರಿ 13 ರಂದು ಪುಣೆಯಿಂದ ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್ ವಿಮಾನ - QP1312 - ಪುಣೆ ವಿಮಾನ ನಿಲ್ದಾಣದಲ್ಲಿಯೇ ನಿಂತಿದೆ.

"ಪ್ರಯಾಣಿಕರು ವಿಮಾನ ಹತ್ತಿದ್ದರು ಮತ್ತು ವಿಮಾನವು ನಿರ್ಗಮನಕ್ಕೆ ಸಿದ್ಧವಾಗುತ್ತಿದ್ದಾಗ ಕೊನೆಯ ಕ್ಷಣದಲ್ಲಿ ವಿಮಾನದಲ್ಲಿ ಕೆಲವು ತಾಂತ್ರಿಕ ಸಮಸ್ಯೆ ವರದಿಯಾಗಿದೆ. ನಂತರ, ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಲಾಯಿತು" ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.

ಆಕಾಸಾ ಏರ್ ವಿಮಾನವು ಕಾರ್ಯಾಚರಣೆಯ ಕಾರಣಗಳಿಂದ QIP 1312 ವಿಮಾನ ವಿಳಂಬವಾಗಿದೆ ಎಂದು ಪ್ರಯಾಣಿಕರಿಗೆ ನೀಡಿದ ಸಂವಹನದಲ್ಲಿ ತಿಳಿಸಿದೆ ಮತ್ತು ವಿಮಾನವು ಈಗ ಮಧ್ಯಾಹ್ನ 1.15 ಕ್ಕೆ ಹೊರಡಲಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಎಚ್ಚರಿಕೆಗೆ ತಲೆಬಾಗದ ಇರಾನ್​: ಸೌದಿ ನೆಲೆಯಲ್ಲಿ ಕ್ಷಿಪಣಿ ದಾಳಿ; ಅಮೆರಿಕಾದ 5 ಟ್ಯಾಂಕರ್ ವಿಮಾನಗಳಿಗೆ ಹಾನಿ..!

West Asia conflict effect: LPG ಕೊರತೆ ತೀವ್ರ; ಮನೆಗಳಲ್ಲಿ PNG, ಹೋಟೆಲ್ ಗಳು ಕಲ್ಲಿದ್ದಲು ಬಳಕೆ ಮಾಡುವಂತೆ ಕೇಂದ್ರ ಸರ್ಕಾರ ಸಲಹೆ

ಒಡಿಶಾ 'ಕೈ' ಶಾಸಕರಿಗೆ' ಟ್ರಬಲ್ ಶೂಟರ್ ಡಿಕೆಶಿ ಆತಿಥ್ಯ: 'ಆಪರೇಷನ್ ಕಮಲ' ತಡೆಗೆ ಕೈಗೊಂಡ ಮುನ್ನೆಚ್ಚರಿಕಾ ಕ್ರಮ; ಕಾಂಗ್ರೆಸ್ ಸಮರ್ಥನೆ

ಒಂದೇ ಸೂರಿನಡಿ ರಾಮ್-ರಹೀಮ್: ದ್ವೇಷ ಹರಡುವವರ ಮಧ್ಯೆ ಮುಸ್ಲಿಮರಿಗಾಗಿ ‘ಇಫ್ತಾರ್ ಕೂಟ’ ಆಯೋಜಿಸುತ್ತಿರುವ ಹಿಂದೂ ಮಹಿಳೆ..!

Strait of Hormuz: 'ಹೌದು.. ನಮ್ಮ ಆಪ್ತ ರಾಷ್ಟ್ರ'... ಭಾರತದ ನೌಕೆಗಳಿಗೆ ಅನುಮತಿ ಕುರಿತು ಇರಾನ್ ರಾಯಭಾರಿ ಹೇಳಿಕೆ!

SCROLL FOR NEXT