ಕಾಜಿರಂಗ ಕಾರಿಡಾರ್‌ಗೆ ಪ್ರಧಾನಿ ಶಂಕುಸ್ಥಾಪನೆ 
ದೇಶ

ಅಸ್ಸಾಂ: 6,957 ಕೋಟಿ ರೂ ವೆಚ್ಚದ ಕಾಜಿರಂಗ ಕಾರಿಡಾರ್‌ಗೆ ಪ್ರಧಾನಿ ಶಂಕುಸ್ಥಾಪನೆ; Video

ಎರಡು ದಿನಗಳ ರಾಜ್ಯ ಭೇಟಿಯ ಕೊನೆಯ ಹಂತದಲ್ಲಿ ಗುವಾಹಟಿಯಿಂದ ಇಲ್ಲಿಗೆ ಆಗಮಿಸಿದ ಮೋದಿ, ಕಾಜಿರಂಗ ಯೋಜನೆಗೆ 'ಭೂಮಿ ಪೂಜೆ' ನೆರವೇರಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾನುವಾರ 6,957 ಕೋಟಿ ರೂಪಾಯಿ ವೆಚ್ಚದ ಕಾಜಿರಂಗ ಎಲಿವೇಟೆಡ್ ಕಾರಿಡಾರ್‌ಗೆ (Kaziranga Corridor Project) ಶಂಕುಸ್ಥಾಪನೆ ನೆರವೇರಿಸಿದರು. ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಎರಡು ಅಮೃತ್ ಭಾರತ್ ರೈಲುಗಳಿಗೆ ಪ್ರಾಯೋಗಿಕವಾಗಿ ಚಾಲನೆ ನೀಡಿದರು.

ಎರಡು ದಿನಗಳ ರಾಜ್ಯ ಭೇಟಿಯ ಕೊನೆಯ ಹಂತದಲ್ಲಿ ಗುವಾಹಟಿಯಿಂದ ಇಲ್ಲಿಗೆ ಆಗಮಿಸಿದ ಮೋದಿ, ಕಾಜಿರಂಗ ಯೋಜನೆಗೆ 'ಭೂಮಿ ಪೂಜೆ' ನೆರವೇರಿಸಿದರು.

ಈ ಕಾರಿಡಾರ್ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಹುಲಿ ಮೀಸಲು ಪ್ರದೇಶದಾದ್ಯಂತ ಸುರಕ್ಷಿತ ವನ್ಯಜೀವಿ ಸಂಚಾರವನ್ನು ಖಚಿತಪಡಿಸುವುದು, ರಾಷ್ಟ್ರೀಯ ಹೆದ್ದಾರಿ -715 ರಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವುದು ಮತ್ತು ಪರಿಸರ ಪ್ರವಾಸೋದ್ಯಮವನ್ನು ಹೆಚ್ಚಿಸುವುದು ಮತ್ತು ಸ್ಥಳೀಯ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ.

ಇದು NH -715 ರ ಕಲಿಯಾಬೋರ್-ನುಮಲಿಗಢ ವಿಭಾಗದ ಚತುಷ್ಪಥದ ಭಾಗವಾಗಿದೆ ಮತ್ತು ಜಖಲಬಂಧ ಮತ್ತು ಬೊಕಾಖಾಟ್‌ನಲ್ಲಿ ಬೈಪಾಸ್‌ಗಳ ಜೊತೆಗೆ ಸುಮಾರು 34.45 ಕಿ.ಮೀ ಎತ್ತರದ ವನ್ಯಜೀವಿ ಸ್ನೇಹಿ ಕಾರಿಡಾರ್‌ಗಳನ್ನು ಒಳಗೊಂಡಿದೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಕಾಜಿರಂಗ ಎಲಿವೇಟೆಡ್ ಕಾರಿಡಾರ್‌ನ ಮಾದರಿಯನ್ನು ಸಹ ಪರಿಶೀಲಿಸಿದರು.

ಪ್ರಧಾನ ಮಂತ್ರಿಯವರು ದಿಬ್ರುಗಢ-ಗೋಮತಿ ನಗರ (ಲಕ್ನೋ) ಮತ್ತು ಕಾಮಾಖ್ಯ-ರೋಹ್ಟಕ್ ಎಂಬ ಎರಡು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರಿದರು.

ಈ ರೈಲುಗಳು ಅಸ್ಸಾಂ ಮತ್ತು ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ದೆಹಲಿ ಮತ್ತು ಹರಿಯಾಣ ಸೇರಿದಂತೆ ಹಲವು ರಾಜ್ಯಗಳ ನಡುವಿನ ದೀರ್ಘ-ದೂರ ರೈಲು ಸಂಪರ್ಕವನ್ನು ಹೆಚ್ಚಿಸುತ್ತವೆ. ಪ್ರಯಾಣದ ಸಮಯವನ್ನು ಕಡಿಮೆ ಮಾಡಿ ಆಧುನಿಕ ಪ್ರಯಾಣಿಕರ ಸೌಲಭ್ಯಗಳನ್ನು ಒದಗಿಸುತ್ತವೆ ಎಂದು ಅಧಿಕಾರಿಗಳು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಭಾರತದಲ್ಲಿ ಫುಡ್‌ ಕಂಪನಿಗಳ ಲಾಬಿ: ಚಿಪ್ಸ್ ಮತ್ತು ಕೂಲ್ ಡ್ರಿಂಕ್ಸ್ ಮೇಲೆ ‘ರೆಡ್‌ ಅಲರ್ಟ್’ ಪ್ರಸ್ತಾವ ಕೈಬಿಟ್ಟ FSSAI, ಆಗಿದ್ದೇನು?

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!