ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಎನ್‌ಕೌಂಟರ್: ಉಗ್ರರ ಸುತ್ತುವರಿದ ಸೇನಾಪಡೆ; ಗುಂಡಿನ ಚಕಮಕಿ, 8 ಯೋಧರಿಗೆ ಗಾಯ; Video

ಶೋಧ ಕಾರ್ಯಾಚರಣೆಯ ಸಮಯದಲ್ಲಿ ಕಿಶ್ತ್ವಾರ್ ಜಿಲ್ಲೆಯ ಛಾತ್ರುವಿನ ಈಶಾನ್ಯದಲ್ಲಿರುವ ಸಾಮಾನ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದು ಖಚಿತವಾಗಿತ್ತು. ಈ ವೇಳೆ ಭದ್ರತಾಪಡೆಗಳು ಸ್ಥಳವನ್ನು ಸುತ್ತುವರೆದು ಎನ್ಕೌಂಟರ್ ಆರಂಭಿಸಿದ್ದರು.

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಸಿಂಗ್‌ಪೋರಾ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ಆರಂಭಿಸಿದ್ದು, ಸ್ಥಳದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ಪಾಕಿಸ್ತಾನ ಬೆಂಬಲಿತ ಜೈಶ್-ಇ-ಮೊಹಮ್ಮದ್ (Jaish-e-Mohammad) ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರು ಅಡಗಿಕುಳಿತಿದ್ದು, ಉಗ್ರರನ್ನು ಭದ್ರತಾ ಪಡೆಗಳು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದಾರೆ.ಈ ನಡುವೆ ಯೋಧರ ಮೇಲೆ ಉಗ್ರರು ಗ್ರೆನೇಡ್‌ಗಳನ್ನು ಎಸೆದಿದ್ದು, ಪರಿಣಾಮ 8 ಮಂದಿ ಸೈನಿಕರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.

ಭದ್ರತಾ ಪಡೆಗಳು ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಸ್ಥಳದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸುತ್ತಿತ್ತು. ಶೋಧ ಕಾರ್ಯಾಚರಣೆಯ ಸಮಯದಲ್ಲಿ ಕಿಶ್ತ್ವಾರ್ ಜಿಲ್ಲೆಯ ಛಾತ್ರುವಿನ ಈಶಾನ್ಯದಲ್ಲಿರುವ ಸಾಮಾನ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದು ಖಚಿತವಾಗಿತ್ತು. ಈ ವೇಳೆ ಭದ್ರತಾಪಡೆಗಳು ಸ್ಥಳವನ್ನು ಸುತ್ತುವರೆದು ಎನ್ಕೌಂಟರ್ ಆರಂಭಿಸಿತು.

ಹಲವಾರು ಗಂಟೆಗಳ ಕಾಲ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ನಂತರ ಉಗ್ರರು ಯೋಧರ ಬಳಿಕೆ ಗ್ರೆನೇಡ್ ಎಸೆದಿದ್ದಾರೆಂದು ತಿಳಿದುಬಂದಿದೆ.

ಸ್ಥಳದಲ್ಲಿ ಪಾಕಿಸ್ತಾನ ಮೂಲದ ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೋರಿ 2-3 ವಿದೇಶಿ ಉಗ್ರರ ಗುಂಪು ಇರುವುದು ಖಚಿತವಾಗಿದ್ದು, ಇದೀಗ ಹೆಚ್ಚುವರಿ ಭದ್ರತಾಪಡೆಗಳು ಸ್ಥಳಕ್ಕೆ ತೆರಳಿ ಉಗ್ರರಿಗೆ ದಿಟ್ಟ ಉತ್ತರ ನೀಡುತ್ತಿದ್ದಾರೆ. ಇನ್ನು ಗಾಯಗೊಂಡಿರುವ ಯೋಧರನ್ನು ಸೈನಿಕರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!

ಮಹಾ ದುರಂತಕ್ಕೆ ರೋಚಕ ಟ್ವಿಸ್ಟ್: ಐಫೋನ್​ EMI ಅನ್ನೋದೇ ಕಟ್ಟು ಕಥೆ; ಬೆಟ್ಟದಿಂದ ಬಿದ್ದು ಪ್ರಾಣಬಿಟ್ಟ ಮೂವರ ಬಗ್ಗೆ ಸಂಬಂಧಿ ಸ್ಫೋಟಕ ಹೇಳಿಕೆ!

ಮಾತು ತಪ್ಪಿದ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ದೊಡ್ಡ ಹೋರಾಟಕ್ಕೆ CJP ಸಜ್ಜು; ಸೆಪ್ಟೆಂಬರ್ 5 ರಂದು ದೆಹಲಿಯಲ್ಲಿ ಬೃಹತ್ ಮೆರವಣಿಗೆ