ನಟ ದಳಪತಿ ವಿಜಯ್ 
ದೇಶ

ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು

ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್‌ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದಾರೆ.

ಇಂದು ಬೆಳಿಗ್ಗೆ ಲೋಧಿ ರಸ್ತೆಯಲ್ಲಿರುವ ಸಿಬಿಐ ಪ್ರಧಾನ ಕಚೇರಿಗೆ ವಿಜಯ್ ಅವರು ಕಾರಿನಲ್ಲಿ ಆಗಮಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ತನಿಖಾ ಸಂಸ್ಥೆಯ ಭ್ರಷ್ಟಾಚಾರ ನಿಗ್ರಹ ಘಟಕದ ಉಪ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್‌ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಮಂಗಳವಾರ ಮತ್ತೆ ಹಾಜರಾಗುವಂತೆ ಅವರಿಗೆ ಸೂಚಿಸಿದ್ದು, ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ಪ್ರಕರಣವನ್ನು ಎಸ್‌ಐಟಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಸಿಬಿಐ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಿ 7 ಸಭೆ: ಸಂಬಂಧಗಳಲ್ಲಿನ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ-ಡೊನಾಲ್ಡ್ ಟ್ರಂಪ್ ಪರಸ್ಪರ ಶುಭಾಶಯ ವಿನಿಮಯ; ಜೂ.17 ರಂದು ದ್ವಿಪಕ್ಷೀಯ ಸಭೆ

'ನಾನಿಲ್ಲದಿದ್ದರೆ ಇಸ್ರೇಲ್ ಇರುತ್ತಿರಲಿಲ್ಲ': ನೆತನ್ಯಾಹು ವಿರುದ್ಧ ಟ್ರಂಪ್ ಅಸಮಾಧಾನ; 'ಅವರಿಗೆ' ಸಾಧ್ಯವಾಗದಿದ್ದರೆ ಹಿಜ್ಬೊಲ್ಲಾನ ಸಿರಿಯಾ ನೋಡಿಕೊಳ್ಳುತ್ತೆ; Video

ಸಿಎಂ ಡಿಕೆ ಶಿವಕುಮಾರ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಬಿ.ಎಸ್. ಶ್ರೀಧರ್ ನೇಮಕ

'ಭಾರತದ ಡಿಜಿಟಲ್ ಪಾವತಿ ವ್ಯವಸ್ಥೆ ಹಲವು ವರ್ಷಗಳಷ್ಟು ಮುಂದಿದೆ': ಸ್ಲೋವೇನಿಯಾದ ಪ್ರವಾಸಿ ಮಹಿಳೆ ಮೆಚ್ಚುಗೆ

ಶ್ವೇತಭವನದ UFC ಕಾರ್ಯಕ್ರಮದ ಮೇಲೆ ಯೋಜಿತ ದಾಳಿ ಸಂಚು ವಿಫಲ, ತಪ್ಪಿದ ಭಾರಿ ಅನಾಹುತ: ಐವರ ಬಂಧನ

SCROLL FOR NEXT