ನಟ ದಳಪತಿ ವಿಜಯ್ 
ದೇಶ

ಕರೂರು ಕಾಲ್ತುಳಿತ ಪ್ರಕರಣ: CBI ಎರಡನೇ ಸುತ್ತಿನ ವಿಚಾರಣೆಗೆ ವಿಜಯ್ ಹಾಜರು

ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್‌ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ವಿಚಾರಣೆಗೆ ಟಿವಿಕೆ ಮುಖ್ಯಸ್ಥ, ನಟ ವಿಜಯ್ ಸಿಬಿಐ ಪ್ರಧಾನ ಕಚೇರಿಗೆ ಹಾಜರಾಗಿದ್ದಾರೆ.

ಇಂದು ಬೆಳಿಗ್ಗೆ ಲೋಧಿ ರಸ್ತೆಯಲ್ಲಿರುವ ಸಿಬಿಐ ಪ್ರಧಾನ ಕಚೇರಿಗೆ ವಿಜಯ್ ಅವರು ಕಾರಿನಲ್ಲಿ ಆಗಮಿಸಿದರು ಎಂದು ಅಧಿಕಾರಿಗಳು ಹೇಳಿದ್ದಾರೆ. ತನಿಖಾ ಸಂಸ್ಥೆಯ ಭ್ರಷ್ಟಾಚಾರ ನಿಗ್ರಹ ಘಟಕದ ಉಪ ಸೂಪರಿಂಟೆಂಡೆಂಟ್ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ವಿಚಾರಣೆ ನಡೆಸಲಿದೆ ಎಂದು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಜನವರಿ 12ರಂದು ಸಿಬಿಐ ಮುಂದೆ ಹಾಜರಾದ ವಿಜಯ್‌ ಅವರನ್ನು ಆರು ಗಂಟೆಗಳಿಗೂ ಹೆಚ್ಚು ಕಾಲ ವಿಚಾರಣೆ ನಡೆಸಲಾಗಿತ್ತು. ಮಂಗಳವಾರ ಮತ್ತೆ ಹಾಜರಾಗುವಂತೆ ಅವರಿಗೆ ಸೂಚಿಸಿದ್ದು, ಪೊಂಗಲ್ ಕಾರಣ ದಿನಾಂಕ ಬದಲಾವಣೆ ಮಾಡುವಂತೆ ಕೋರಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ಪ್ರಕರಣವನ್ನು ಎಸ್‌ಐಟಿಯಿಂದ ಸಿಬಿಐಗೆ ವರ್ಗಾಯಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್ 27ರಂದು ಕರೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 41 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಸಂಬಂಧ ಸಿಬಿಐ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ‌ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video

Commonwealth Games 2026: ಭಾರತಕ್ಕೆ ಡಬಲ್ ಧಮಾಕ; ಬಾಕ್ಸಿಂಗ್‌ನಲ್ಲಿ ಚಿನ್ನ ಗೆದ್ದ ಪ್ರೀತಿ, ಜೈಸ್ಮಿನ್, ಭಾರತಕ್ಕೆ ಒಟ್ಟು 27 ಪದಕ!

ಏರ್ಪೋರ್ಟ್ to ಸೆಮಿಕಂಡಕ್ಟರ್‌, ಆಂಧ್ರಕ್ಕೆ ಬಂಪರ್ ಗಿಫ್ಟ್: ವಿಮಾನ ನಿಲ್ದಾಣ ಉದ್ಘಾಟನೆ ಸೇರಿ 17,900 ಕೋಟಿ ರೂ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಮೈಸೂರಿನಲ್ಲಿ ‘ಗೋ ಬ್ಯಾಕ್ ಮೋದಿ’ ಪ್ರತಿಭಟನೆಗೆ ಯತ್ನ; DSS ಮುಖಂಡರು ಪೊಲೀಸ್ ವಶಕ್ಕೆ