ಕವಿತಾ 
ದೇಶ

ತೆಲಂಗಾಣದಲ್ಲಿ ಕವಿತಾ ಹೊಸ ಪಕ್ಷ ಸ್ಥಾಪನೆ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಪ್ರಶಾಂತ್ ಕಿಶೋರ್ ಇತ್ತೀಚಿಗೆ ಐದು ದಿನಗಳ ಕಾಲ ಹೈದರಾಬಾದ್ ನಲ್ಲಿದ್ದರು. ಈ ವೇಳೆಯಲ್ಲಿ ಅವರೊಂದಿಗೆ ಕವಿತಾ ಮಾತುಕತೆ ನಡೆಸಿದ್ದಾರೆ. ಹೊಸ ಪಕ್ಷ ಸ್ಥಾಪನೆ, ಅದಕ್ಕೆ ತೆಲಂಗಾಣದಲ್ಲಿ ರಾಜಕೀಯ ನೆಲೆ, ಮತ್ತಿತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.

ಹೈದರಾಬಾದ್: ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪಿಸಲು ಮುಂದಾಗಿರುವ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತೆಲಂಗಾಣ ಜಾಗೃತಿ ಮೂಲಗಳು ಸೋಮವಾರ ತಿಳಿಸಿವೆ. ಕವಿತಾ ತೆಲಂಗಾಣ ಜಾಗೃತಿ, ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಪ್ರಶಾಂತ್ ಕಿಶೋರ್ ಇತ್ತೀಚಿಗೆ ಐದು ದಿನಗಳ ಕಾಲ ಹೈದರಾಬಾದ್ ನಲ್ಲಿದ್ದರು. ಈ ವೇಳೆಯಲ್ಲಿ ಅವರೊಂದಿಗೆ ಕವಿತಾ ಮಾತುಕತೆ ನಡೆಸಿದ್ದಾರೆ. ಹೊಸ ಪಕ್ಷ ಸ್ಥಾಪನೆ, ಅದಕ್ಕೆ ತೆಲಂಗಾಣದಲ್ಲಿ ರಾಜಕೀಯ ನೆಲೆ, ಮತ್ತಿತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಆರ್‌ಎಸ್ ಸಂಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ರಾವ್ ಅವರ ಪುತ್ರಿ ಕವಿತಾ ಅವರನ್ನು ಸೆಪ್ಟೆಂಬರ್, 2025 ರಲ್ಲಿ ಪಕ್ಷದಿಂದ ಉಚ್ಛಾಟಿಸಲಾಗಿತ್ತು.

ಆಗಿನಿಂದಲೂ ತೆಲಂಗಾಣ ಜಾಗೃತಿ, ಸಾಂಸ್ಕೃತಿಕ ಸಂಘಟನೆಯಡಿ ಸಾರ್ವಜನಿಕ ಸಮಸ್ಯೆಗಳ ಮೇಲೆ ಕವಿತಾ ಗಮನ ಕೇಂದ್ರೀಕರಿಸಿದ್ದಾರೆ. ಇತ್ತೀಚಿಗೆ ಅವರು ವಿಧಾನಪರಿಷತ್ ಸದಸ್ಯತ್ವಕ್ಕೆ ಸಲ್ಲಿಸಿದ ರಾಜೀನಾಮೆಯನ್ನು ಸಭಾಪತಿ ಗುತಾ ಸುಖೇಂದರ್ ರೆಡ್ಡಿ ಅವರು ಅಂಗೀಕರಿಸಿದ್ದಾರೆ.

ಕಳೆದ ವರ್ಷ ಬಿಆರ್ ಎಸ್ ಹಾಗೂ ಆಡಳಿತಾರೂಢ ಕಾಂಗ್ರೆಸ್ ಎರಡೂ ಭ್ರಷ್ಟಾಚಾರ ಪಕ್ಷಗಳೆಂದು ಆರೋಪಿಸಿದ್ದ ಕವಿತಾ, ಮುಂದೊಂದು ದಿನ ಮುಖ್ಯಮಂತ್ರಿಯಾಗುತ್ತೇನೆ ಮತ್ತು 2014 ರಲ್ಲಿ ತೆಲಂಗಾಣ ರಚನೆಯಾದ ನಂತರ ನಡೆದ ಎಲ್ಲಾ "ಅನ್ಯಾಯ"ಗಳ ಬಗ್ಗೆ ತನಿಖೆ ನಡೆಸುತ್ತೇನೆ ಎಂದು ಹೇಳಿದ್ದರು.

ಈ ತಿಂಗಳ ಆರಂಭದಲ್ಲಿ ಬಿಆರ್ ಎಸ್ ಆಡಳಿತ ಅವಧಿಯಲ್ಲಿನ ಭ್ರಷ್ಟಾಚಾರ ಪ್ರಸ್ತಾಪಿಸಿ ವಾಗ್ದಾಳಿ ನಡೆಸಿದ್ದ ಕವಿತಾ ಬಿಆರ್‌ಎಸ್ ಸಂವಿಧಾನವನ್ನು "ಜೋಕ್" ಎಂದೂ ಕರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ