ಪ್ರಧಾನಿ ನರೇಂದ್ರ ಮೋದಿ 
ದೇಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಆಯ್ಕೆ: ಅವರೇ ನನ್ನ ಬಾಸ್ ಎಂದ ಪ್ರಧಾನಿ ನರೇಂದ್ರ ಮೋದಿ

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, 45 ವರ್ಷದ ನಬಿನ್ ಅವರನ್ನು ಭಾರತದಲ್ಲಿ ದೊಡ್ಡ ಬದಲಾವಣೆಗೆ ಸಾಕ್ಷಿಯಾದ ಪೀಳಿಗೆಗೆ ಸೇರಿದ "millennial" ವ್ಯಕ್ತಿ ಎಂದು ಬಣ್ಣಿಸಿದ್ದಾರೆ.

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ನಬಿನ್ ಅವರನ್ನು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ ಮತ್ತು ಪಕ್ಷಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಯುವ ನಾಯಕ ತಮ್ಮ ಬಾಸ್ ಆಗಿರುತ್ತಾರೆ ಎಂದು ಘೋಷಿಸಿದ್ದಾರೆ.

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, 45 ವರ್ಷದ ನಬಿನ್ ಅವರನ್ನು ಭಾರತದಲ್ಲಿ ದೊಡ್ಡ ಬದಲಾವಣೆಗೆ ಸಾಕ್ಷಿಯಾದ ಪೀಳಿಗೆಗೆ ಸೇರಿದ "millennial" ವ್ಯಕ್ತಿ ಎಂದು ಬಣ್ಣಿಸಿದ್ದಾರೆ.

ಬೂತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಪಕ್ಷದ ವಿವಿಧ ಹುದ್ದೆಗಳಿಗೆ ಚುನಾವಣೆ ನಡೆದ ಸಂಘಟನ್ ಪರ್ವ್‌ನ ಕೊನೆಯಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ನಬಿನ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಘೋಷಿಸಲಾಯಿತು.

'ಪಕ್ಷದ ವಿಷಯಗಳಿಗೆ ಬಂದಾಗ, ಮಾನನಿಯಾ (ಗೌರವಾನ್ವಿತ) ನಿತಿನ್ ನಬಿನ್ ಜಿ, ನಾನು ಒಬ್ಬ ಕೆಲಸಗಾರ ಮತ್ತು ನೀವು ನನ್ನ ಬಾಸ್' ಎಂದು ಮೋದಿ ಹೇಳಿದರು.

'ಈಗ, ಗೌರವಾನ್ವಿತ ನಿತಿನ್ ನಬಿನ್ ಜಿ ನಮ್ಮೆಲ್ಲರ ಅಧ್ಯಕ್ಷರಾಗಿದ್ದಾರೆ ಮತ್ತು ಅವರ ಜವಾಬ್ದಾರಿ ಬಿಜೆಪಿಯನ್ನು ನಿರ್ವಹಿಸುವುದು ಮಾತ್ರವಲ್ಲ, ಎಲ್ಲ ಎನ್‌ಡಿಎ ಮಿತ್ರಪಕ್ಷಗಳ ನಡುವೆ ಸಮನ್ವಯವನ್ನು ಖಚಿತಪಡಿಸಿಕೊಳ್ಳುವುದು ಕೂಡ ಆಗಿದೆ' ಎಂದರು.

ನಬಿನ್ ಬಾಲ್ಯದಲ್ಲಿರುವಾಗ ಜನರು ರೇಡಿಯೋದಲ್ಲಿ ಸುದ್ದಿಗಳನ್ನು ಕೇಳುತ್ತಿದ್ದರು ಮತ್ತು ಈಗ ಕೃತಕ ಬುದ್ಧಿಮತ್ತೆಯನ್ನು ಬಳಸುವುದರಲ್ಲಿ ಪಾರಂಗತರಾಗಿರುವ ಪೀಳಿಗೆಗೆ ಸೇರಿದವರು. ಅವರಿಗೆ ಯುವ ಶಕ್ತಿ ಮತ್ತು ಅಪಾರ ಅನುಭವವಿದೆ ಎಂದು ಮೋದಿ ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಶಿ ಅವರ ನೇತೃತ್ವದಲ್ಲಿ ಬಿಜೆಪಿ ಶೂನ್ಯದಿಂದ ಶಿಖರಕ್ಕೆ ಪ್ರಯಾಣ ಬೆಳೆಸಿತು. ಈ ಶತಮಾನದಲ್ಲಿ, ಎಂ ವೆಂಕಯ್ಯ ನಾಯ್ಡು ಮತ್ತು ನಿತಿನ್ ಗಡ್ಕರಿ ಅವರಂತಹ ನಾಯಕರು, ನಮ್ಮ ಅನೇಕ ಹಿರಿಯ ಸಹೋದ್ಯೋಗಿಗಳೊಂದಿಗೆ, ಸಂಘಟನೆಯನ್ನು ವಿಸ್ತರಿಸಿದರು. ರಾಜನಾಥ್ ಜಿ ಅವರ ನೇತೃತ್ವದಲ್ಲಿ, ಮೊದಲ ಬಾರಿಗೆ ಬಿಜೆಪಿ ಪೂರ್ಣ ಬಹುಮತ ಪಡೆಯಿತುಸಾಧಿಸಿತು ಎಂದು ತಿಳಿಸಿದರು.

'ನಂತರ, ಅಮಿತ್ ಶಾ ನೇತೃತ್ವದಲ್ಲಿ, ಬಿಜೆಪಿ ಹಲವು ರಾಜ್ಯಗಳಲ್ಲಿ ಸರ್ಕಾರಗಳನ್ನು ರಚಿಸಿತು ಮತ್ತು ಕೇಂದ್ರದಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿತು. ಜೆಪಿ ನಡ್ಡಾ ಅವರ ನೇತೃತ್ವದಲ್ಲಿ, ಬಿಜೆಪಿ ಪಂಚಾಯತ್‌ನಿಂದ ಸಂಸತ್ತಿನವರೆಗೆ ಬಲವಾಗಿ ಬೆಳೆಯಿತು' ಎಂದು ಮೋದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯಗಳ ಮೇಲೆ ಕೇಂದ್ರದ ನಿಯಂತ್ರಣ; ಶೀಘ್ರದಲ್ಲೇ ದಕ್ಷಿಣ ಭಾರತದ ಸಿಎಂಗಳ ಸಮ್ಮೇಳನ: ಸಿದ್ದರಾಮಯ್ಯ

ಹೊಂಡಕ್ಕೆ ಬಿದ್ದು ನೋಯ್ಡಾ ಟೆಕ್ಕಿ ಸಾವು: ನಿರ್ಲಕ್ಷ್ಯದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಡೆವಲಪರ್ ಬಂಧನ

ಬೀದಿ ನಾಯಿ ವಿಷಯ ಸಂಬಂಧ ಮೇನಕಾ ಗಾಂಧಿಗೆ 'ಸುಪ್ರೀಂ' ಛೀಮಾರಿ: ಉಗ್ರ ಕಸಬ್ ಬಗ್ಗೆ ಕೋರ್ಟ್ ಪ್ರಸ್ತಾಪಿಸಿದ್ದೇಕೆ?

Tamil Nadu: ರಾಜ್ಯಪಾಲರಿಗೆ ಸಿಎಂ Stalin ತಿರುಗೇಟು, ವಾರ್ಷಿಕ ಭಾಷಣ ರದ್ದತಿಗೆ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ!

ಕಚೇರಿಯಲ್ಲೇ ರಾಸಲೀಲೆ: DGP ರಾಮಚಂದ್ರ ರಾವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗ ಆಗ್ರಹ

SCROLL FOR NEXT