ಸಾಂದರ್ಭಿಕ ಚಿತ್ರ 
ದೇಶ

ಅಸ್ಸಾಂನಲ್ಲಿ ಎರಡೂ ಸಮುದಾಯಗಳ ನಡುವೆ ಘರ್ಷಣೆ: ಓರ್ವ ಸಾವು; ಇಂಟರ್ನೆಟ್ ಸೇವೆ ಸ್ಥಗಿತ

ಮೂವರು ನಿವಾಸಿಗಳ ಮೇಲೆ ಹತ್ತಿರದ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಮತ್ತು ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಗುವಾಹಟಿ: ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಮಂಗಳವಾರ ಬೋಡೋ ಮತ್ತು ಆದಿವಾಸಿ ಸಮುದಾಯಗಳ ನಡುವೆ ಘರ್ಷಣೆ ನಡೆದಿದ್ದು, ಕೊಕ್ರಜಾರ್‌ ಪ್ರದೇಶದಲ್ಲಿ ಉದ್ವಗ್ನತೆ ಭುಗಿಲೆದ್ದಿದೆ. ಸ್ಥಳದಲ್ಲಿ ಕ್ಷಿಪ್ರ ಕಾರ್ಯ ಪಡೆ(RAF) ನಿಯೋಜಿಸಲಾಗಿದ್ದು, ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸೋಮವಾರ ತಡರಾತ್ರಿ ಕರಿಗಾಂವ್ ಪೊಲೀಸ್ ಹೊರಠಾಣೆ ವ್ಯಾಪ್ತಿಯ ಮಾನ್ಸಿಂಗ್ ರಸ್ತೆಯಲ್ಲಿ ಮೂವರು ಬೋಡೋ ಪುರುಷರು ತೆರಳುತ್ತಿದ್ದ ವಾಹನವು ಇಬ್ಬರು ಆದಿವಾಸಿ ವ್ಯಕ್ತಿಗಳಿಗೆ ಡಿಕ್ಕಿ ಹೊಡೆದ ನಂತರ ಹಿಂಸಾಚಾರ ಭುಗಿಲೆದ್ದಿದೆ.

ಮೂವರು ನಿವಾಸಿಗಳ ಮೇಲೆ ಹತ್ತಿರದ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಅಲ್ಲದೆ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ ಮತ್ತು ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಎರಡೂ ಸಮುದಾಯಗಳ ಸದಸ್ಯರು ಕರಿಗಾಂವ್ ಹೊರಠಾಣೆ ಬಳಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು, ಟೈರ್‌ಗಳಿಗೆ ಬೆಂಕಿ ಹಚ್ಚಿ, ಕೆಲವು ಮನೆಗಳಿಗೂ ಬೆಂಕಿ ಹಚ್ಚಿದ್ದರಿಂದ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಯಿತು. ಸರ್ಕಾರಿ ಕಚೇರಿಗೂ ಬೆಂಕಿ ಹಚ್ಚಲಾಯಿತು ಮತ್ತು ಕರಿಗಾಂವ್ ಪೊಲೀಸ್ ಹೊರಠಾಣೆ ಮೇಲೆ ದಾಳಿ ನಡೆಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಮತ್ತಷ್ಟು ಹದಗೆಡದಂತೆ ತಡೆಯಲು ಪ್ರದೇಶದಲ್ಲಿ RAF ಅನ್ನು ನಿಯೋಜಿಸಲಾಗಿದೆ. ರಾಜ್ಯ ಸರ್ಕಾರವು ಕೊಕ್ರಜಾರ್ ಮತ್ತು ಪಕ್ಕದ ಚಿರಾಂಗ್‌ನಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಆದಾಗ್ಯೂ, ಸ್ಥಿರ ದೂರವಾಣಿ ಮಾರ್ಗಗಳ ಮೂಲಕ ಕರೆಗಳು ಮತ್ತು ಬ್ರಾಡ್‌ಬ್ಯಾಂಡ್ ಸೇವೆಗಳು ಈ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತವೆ.

ಜನರು ಸಂಯಮದಿಂದ ವರ್ತಿಸುವಂತೆ ಮತ್ತು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳದಂತೆ ರಾಜ್ಯ ಸರ್ಕಾರ ಮನವಿ ಮಾಡಿದೆ.

ದೂರದ ಸ್ವಿಟ್ಜರ್‌ಲ್ಯಾಂಡ್‌ನಲ್ಲಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಹೇಳಿದ್ದಾರೆ. ಸರ್ಕಾರವು ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳಲು ಜನ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಮದರ್ ಆಫ್ ಆಲ್ ಡೀಲ್': ಅಂತಿಮ ಹಂತ ತಲುಪಿದ ಭಾರತ-ಯುರೋಪಿಯನ್ ಒಕ್ಕೂಟದ FTA ಮಾತುಕತೆ!

ರಾಜ್ಯಗಳ ಮೇಲೆ ಕೇಂದ್ರದ ನಿಯಂತ್ರಣ; ಶೀಘ್ರದಲ್ಲೇ ದಕ್ಷಿಣ ಭಾರತದ ಸಿಎಂಗಳ ಸಮ್ಮೇಳನ: ಸಿದ್ದರಾಮಯ್ಯ

ರಾಯಚೂರು: ಸಿಂಧನೂರು ಬಳಿ ಭೀಕರ ಸರಣಿ ಅಪಘಾತ; ಸ್ಥಳದಲ್ಲೇ ಐವರು ಸಾವು

ಭಟ್ಕಳ: ಮಹಿಳೆಯರಿಗೆ ಅಶ್ಲೀಲ ಸಂದೇಶ, ಬ್ಲಾಕ್‌ಮೇಲ್; 18 ನಕಲಿ ಇಮೇಲ್ ಐಡಿ ಹೊಂದಿದ್ದ ಯುವಕನ ಬಂಧನ!

ಭೋಪಾಲ್‌: ಲಿಫ್ಟ್ ಶಾಫ್ಟ್‌ಗೆ ಬಿದ್ದು ವ್ಯಕ್ತಿಯ ಸಾವು; 10 ದಿನಗಳ ನಂತರ ಮೃತದೇಹ ಪತ್ತೆ

SCROLL FOR NEXT