ಉದಯನಿಧಿ ಸ್ಟಾಲಿನ್  
ದೇಶ

ಸನಾತನ ಧರ್ಮ ಕುರಿತ ಉದಯನಿಧಿ ಹೇಳಿಕೆ ದ್ವೇಷ ಭಾಷಣಕ್ಕೆ ಸಮ; ಹಿಂದೂ ಧರ್ಮದ ಮೇಲಿನ ಸ್ಪಷ್ಟ ದಾಳಿ: ಮದ್ರಾಸ್ ಹೈಕೋರ್ಟ್ ತಪರಾಕಿ

100 ವರ್ಷಗಳಲ್ಲಿ ಡಿಎಂಕೆಯಿಂದ "ಹಿಂದೂ ಧರ್ಮದ ಮೇಲೆ ಸ್ಪಷ್ಟ ದಾಳಿ" ನಡೆದಿದೆ ಎಂದು ಹೈಕೋರ್ಟ್‌ನ ಮಧುರೈ ಪೀಠವು ಅಭಿಪ್ರಾಯ ಪಟ್ಟಿದೆ, ಸಚಿವರು ಅದೇ ಸೈದ್ಧಾಂತಿಕ ಕುಟುಂಬಕ್ಕೆ ಸೇರಿದವರು ಎಂದು ನ್ಯಾಯಾಲಯ ಹೇಳಿದೆ.

ಮದ್ರಾಸ್: ಸನಾತನ ಧರ್ಮದ ಕುರಿತು ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಅವರು 2023ರಲ್ಲಿ ನೀಡಿದ್ದ ಹೇಳಿಕೆಗಳು ದ್ವೇಷ ಭಾಷಣಕ್ಕೆ ಸಮವಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ.

100 ವರ್ಷಗಳಲ್ಲಿ ಡಿಎಂಕೆಯಿಂದ "ಹಿಂದೂ ಧರ್ಮದ ಮೇಲೆ ಸ್ಪಷ್ಟ ದಾಳಿ" ನಡೆದಿದೆ ಎಂದು ಹೈಕೋರ್ಟ್‌ನ ಮಧುರೈ ಪೀಠವು ಅಭಿಪ್ರಾಯ ಪಟ್ಟಿದೆ, ಸಚಿವರು ಅದೇ ಸೈದ್ಧಾಂತಿಕ ವಂಶಕ್ಕೆ ಸೇರಿದವರು ಎಂದು ನ್ಯಾಯಾಲಯ ಹೇಳಿದೆ.

ತಮಿಳುನಾಡಿನಲ್ಲಿ ಸಚಿವರ ವಿರುದ್ಧ ದ್ವೇಷ ಭಾಷಣಕ್ಕಾಗಿ ಯಾವುದೇ ಪ್ರಕರಣ ದಾಖಲಾಗಿಲ್ಲ, ಆದರೆ ಇತರ ರಾಜ್ಯಗಳಲ್ಲಿ ಕೆಲವು ಪ್ರಕರಣಗಳು ದಾಖಲಾಗಿವೆ ಎಂದು ಹೈಕೋರ್ಟ್ ಹೇಳಿದೆ. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ನಾಶ ಮಾಡಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ, ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದೇ ರೀತಿ, ನಾವು ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು” ಎಂದು ಉದಯನಿಧಿ ಹೇಳಿಕೆ ನೀಡಿದ್ದರು. ಹೇಳಿಕೆ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ದ್ವೇಷ ಭಾಷಣವನ್ನು ಆರಂಭಿಸುವವರು ಶಿಕ್ಷೆಯಿಂದ ತಪ್ಪಿಸಿಕೊಳ್ಳುತ್ತಿರುವ ಸಂದರ್ಭಗಳಲ್ಲಿ, ಅದಕ್ಕೆ ಪ್ರತಿಕ್ರಿಯಿಸುವವರ ವಿರುದ್ಧ ಮಾತ್ರ ಕಾನೂನು ಕ್ರಮ ಜರುಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ದ್ವೇಷ ಭಾಷಣ ಆರಂಭಿಸಿದವರ ವಿರುದ್ಧ ಕ್ರಮ ಕೈಗೊಳ್ಳದಿರುವುದು ಕಾನೂನು ಜಾರಿಗೆ ಸಂಬಂಧಿಸಿದ ಗಂಭೀರ ಸಮಸ್ಯೆಯಾಗಿದೆ ಎಂದೂ ಪೀಠ ಹೇಳಿದೆ.

ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳನ್ನು ವಿರೂಪಗೊಳಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪದ ಮೇಲೆ ಬಿಜೆಪಿ ನಾಯಕ ಅಮಿತ್ ಮಾಳವೀಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್ ಅನ್ನು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ರದ್ದುಗೊಳಿಸಿದೆ. ಪ್ರಕರಣವನ್ನು ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಪೀಠ ಹೇಳಿದ್ದು, ತಿರುಚಿ ಪೊಲೀಸರಿಗೆ ಎಫ್‌ಐಆರ್ ರದ್ದುಪಡಿಸುವಂತೆ ನಿರ್ದೇಶನ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿಗೆ ಕಾವೇರಿ, ಕನ್ನಡಿಗರಿಗೆ ಮತ್ತೆ ಚೊಂಬು: ನಿತ್ಯ 9,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ!

ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ: JDS ಶಾಸಕ ಹೆಚ್ ಡಿ ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು

ಸೀತಾಪುರದಲ್ಲಿ ವಿಚಿತ್ರ ಪ್ರಕರಣ: ಹಗಲು ಪ್ರೇಮಿ, ರಾತ್ರಿ ಗಂಡ ಬೇಕಂತೆ! ಇಬ್ಬರ ಜತೆ ಸಂಸಾರ ನಡೆಸಲು ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆ! Video

‘ಏನೇನ್ ಮಾಡ್ತಾರೋ ಗೊತ್ತಿಲ್ಲ’: Donald Trump ‘ಅನಿರೀಕ್ಷಿತ ವರ್ತನೆ’ ಬಗ್ಗೆ ಎಚ್ಚರಿಕೆ: ಮೋದಿ ಭೇಟಿ ಬಳಿಕ ಜಂಟಿ ಸುದ್ದಿಗೋಷ್ಠಿಗೆ ಭಾರತ ಹಿಂದೇಟು!

ಪ್ರತಿಪಕ್ಷಗಳ ಪ್ರತಿಭಟನೆ, ಗದ್ದಲದ ನಡುವೆ ಯಾವುದೇ ಚರ್ಚೆಯಿಲ್ಲದೇ ವಿಧಾನ ಪರಿಷತ್ತಿನಲ್ಲಿ ಎರಡು ವಿಧೇಯಕಗಳು ಪಾಸ್