ಟ್ರಕ್'ಗೆ ಡಿಕ್ಕಿ ಹೊಡೆದ ರೈಲು 
ದೇಶ

ಹಳಿಗೆ ಅಡ್ಡಲಾಗಿ ನಿಂತಿದ್ದ ಟ್ರಕ್​ಗೆ ರೈಲು ಡಿಕ್ಕಿ; Video ವೈರಲ್, ಬೇಜವಾಬ್ದಾರಿ ವರ್ತನೆ ವಿರುದ್ಧ ಟೀಕೆ..!

ಗೊಂಡಾ-ಅಸನ್ಸೋಲ್ ಎಕ್ಸ್‌ಪ್ರೆಸ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತಿತ್ತು. ರೈಲು ಬರುವ ಮಾಹಿತಿ ಬಂದ ನಂತರ ರೋಹಿಣಿ-ನವಾಡಿಹ್ ರೈಲ್ವೆ ಗೇಟ್ ಮುಚ್ಚಲಾಗುತ್ತಿತ್ತು. ಆದರೆ, ವಾಹನ ಸವಾರರು ವಾಹನಗಳನ್ನು ನಿಲ್ಲಿಸದೇ ಕ್ರಾಸಿಂಗ್ ಮಾಡಲು ಹೋಗಿದ್ದಾರೆ.

ಜಾರ್ಖಂಡ್: ರೈಲು ಬರುತ್ತಿದ್ದರೂ ಕ್ರಾಸಿಂಗ್ ಮಾಡಲು ಹೋದ ಟ್ರಕ್ ಗೆ ರೈಲೊಂದು ಡಿಕ್ಕಿ ಹೊಡೆದ ಘಟನೆ ಗುರುವಾರ ಜಾರ್ಖಂಡ್‌ನ ದಿಯೋಘರ್‌ನಲ್ಲಿ ರೈಲ್ವೆ ಕ್ರಾಸಿಂಗ್‌ನಲ್ಲಿ ಸಂಭವಿಸಿದೆ.

ಗೊಂಡಾ-ಅಸನ್ಸೋಲ್ ಎಕ್ಸ್‌ಪ್ರೆಸ್ ಕ್ರಾಸಿಂಗ್ ಮೂಲಕ ಹಾದುಹೋಗುತ್ತಿತ್ತು. ರೈಲು ಬರುವ ಮಾಹಿತಿ ಬಂದ ನಂತರ ರೋಹಿಣಿ-ನವಾಡಿಹ್ ರೈಲ್ವೆ ಗೇಟ್ ಮುಚ್ಚಲಾಗುತ್ತಿತ್ತು. ಆದರೆ, ವಾಹನ ಸವಾರರು ವಾಹನಗಳನ್ನು ನಿಲ್ಲಿಸದೇ ಕ್ರಾಸಿಂಗ್ ಮಾಡಲು ಹೋಗಿದ್ದಾರೆ.

ಇದರಂತೆ ಟ್ರಕ್ ಚಾಲಕ ಕೂಡ ಗಾಡಿ ನುಗ್ಗಿಸಿದ್ದಾನೆ. ಈ ವೇಳೆ ಜಸಿದಿಹ್‌ನಿಂದ ಅಸನ್ಸೋಲ್‌ ಗೆ ಹೋಗುತ್ತಿದ್ದ ಗೊಂಡಾ-ಅಸನ್ಸೋಲ್ ಪ್ಯಾಸೆಂಜರ್ ರೈಲು ಬಂದಿದೆ. ರೈಲು ಬರುವುದನ್ನು ನೋಡಿ ಟ್ರಕ್ ಚಾಲಕ ಟ್ರಕ್ ಅನ್ನು ಟ್ರ್ಯಾಕ್ ನಿಂದ ಮುಂದೆ ಕೊಂಡೊಯ್ಯಲು ಪ್ರಯತ್ನಿಸಿದ್ದಾನೆ. ಆದರೆ ಅಷ್ಟರಲ್ಲೇ ರೈಲು ಡಿಕ್ಕಿಯಾಗಿದೆ.

ಡಿಕ್ಕಿಯ ತೀವ್ರತೆಗೆ ರೈಲಿನ ಎಂಜಿನ್‌ನ ಮುಂಭಾಗ ಸಂಪೂರ್ಣವಾಗಿ ಹಾನಿಗೊಂಡಿದೆ. ಅಪಘಾತದ ವೇಳೆ ಕ್ರಾಸಿಂಗ್ ಬಳಿ ಇದ್ದ ಎರಡು ಬೈಕ್‌ ಹಾಗೂ ಟ್ರಕ್ ಜಖಂಗೊಂಡಿವೆ. ಘಟನೆ ವೇಳೆ ಟ್ರಕ್ ಚಾಲಕ ಹಾಗೂ ಬೈಕ್ ಸವಾರರು ವಾಹನ ಬಿಟ್ಟು ಓಡಿದ ಹಿನ್ನೆಲೆಯಲ್ಲಿ ಯಾವುದೇ ಸಾವುಗಳು ಸಂಭವಿಸಿಲ್ಲ. ಘಟನೆಯ ವಿಡಿಯೋ ವೈರಲ್ ಆಗಿದ್ದು, ಟ್ರಕ್ ಚಾಲಕ ಹಾಗೂ ಜನರ ಬೇಜವಾಬ್ದಾರಿ ವರ್ತನೆ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ.

ಅಪಘಾತದ ನಂತರ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆ ನಡೆದ ಜಸಿದಿಹ್–ಅಸನ್ಸೋಲ್ ಮುಖ್ಯ ರೈಲು ಮಾರ್ಗದಲ್ಲಿ ಸುಮಾರು ಎರಡು ಗಂಟೆಗಳ ಕಾಲ ರೈಲು ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.

ಬಳಿಕ ರೈಲ್ವೆ ಸಿಬ್ಬಂದಿ ಹಾಗೂ ಸ್ಥಳೀಯ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಟ್ರಕ್ ಮತ್ತು ಹಳಿಗೆ ಅಡ್ಡಿಯಾದ ಅವಶೇಷಗಳನ್ನು ತೆರವುಗೊಳಿಸಿದರು. ನಂತರ ರೈಲು ಸಂಚಾರವನ್ನು ಪುನರಾರಂಭಿಸಿದರು.

ಈ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ನಡುವೆ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೆ ಇಲಾಖೆ,ಈ ಘಟನೆ ಕುರಿತು ತನಿಖೆ ಆರಂಭಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!

ಅಭಿಮನ್ಯು ಇಲ್ಲದ ದಸರಾ; ಈ ಬಾರಿ ಹೊರೋದ್ಯಾರು ಅಂಬಾರಿ?