ಅಪರಾಧ online desk
ದೇಶ

50 ರವರೆಗೆ ಸಂಖ್ಯೆ ಬರೆಯಲು ವಿಫಲವಾದ ಮಗಳನ್ನು ಕೊಂದ ತಂದೆ!

ಜನವರಿ 21 ರಂದು ಈ ಘಟನೆ ನಡೆದಿತ್ತು. ಪೊಲೀಸರ ಪ್ರಕಾರ, ಜೈಸ್ವಾಲ್ ಮಗುವಿಗೆ ಒಂದರಿಂದ 50 ರವರೆಗೆ ಸಂಖ್ಯೆಗಳನ್ನು ಬರೆಯಲು ಹೇಳಿದ್ದ.

ಹರ್ಯಾಣ: ತನ್ನ ನಾಲ್ಕು ವರ್ಷದ ಮಗಳಿಗೆ ಮನೆ ಪಾಠ ಹೇಳಲು ತಂದೆಯೊಬ್ಬ ಮಾಡಿದ ಪ್ರಯತ್ನ ಮಾರಕವಾಗಿ ಪರಿಣಮಿಸಿದೆ.

ಹರ್ಯಾಣದಲ್ಲಿ ಈ ಘಟನೆ ನಡೆದಿದ್ದು, 50 ರವರೆಗಿನ ಸಂಖ್ಯೆಗಳನ್ನು ಬರೆಯಲು ವಿಫಲವಾದ ಕಾರಣಕ್ಕಾಗಿ ಮಗುವನ್ನು ಹೊಡೆದು ಕೊಂದಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸೆಕ್ಟರ್ 58 ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರಿನ ನಂತರ ಆರೋಪಿ ಕೃಷ್ಣ ಜೈಸ್ವಾಲ್ (31) ಅವರನ್ನು ಬಂಧಿಸಲಾಗಿದೆ. ಶುಕ್ರವಾರ ಅವರನ್ನು ನಗರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಒಂದು ದಿನದ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಉತ್ತರ ಪ್ರದೇಶದ ಸೋನ್‌ಭದ್ರ ಜಿಲ್ಲೆಯ ಖೇರತಿಯಾ ಗ್ರಾಮದ ನಿವಾಸಿ ಜೈಸ್ವಾಲ್, ಫರಿದಾಬಾದ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.

ಜೈಸ್ವಾಲ್ ಮತ್ತು ಅವರ ಪತ್ನಿ ಇಬ್ಬರೂ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ತಾಯಿ ಹಗಲಿನಲ್ಲಿ ಕೆಲಸ ಮಾಡುತ್ತಿದ್ದರೆ, ಮಕ್ಕಳನ್ನು ನೋಡಿಕೊಳ್ಳಲು ಮತ್ತು ಮಗಳ ಪಾಠಗಳನ್ನು ಮೇಲ್ವಿಚಾರಣೆ ಮಾಡಲು ಜೈಸ್ವಾಲ್ ಮನೆಯಲ್ಲಿಯೇ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜನವರಿ 21 ರಂದು ಈ ಘಟನೆ ನಡೆದಿತ್ತು. ಪೊಲೀಸರ ಪ್ರಕಾರ, ಜೈಸ್ವಾಲ್ ಮಗುವಿಗೆ ಒಂದರಿಂದ 50 ರವರೆಗೆ ಸಂಖ್ಯೆಗಳನ್ನು ಬರೆಯಲು ಹೇಳಿದ್ದ.

ಆಕೆ ಕೆಲಸವನ್ನು ಪೂರ್ಣಗೊಳಿಸಲು ಸಾಧ್ಯವಾಗದಿದ್ದಾಗ, ಅವನು ಹಿಂಸಾತ್ಮಕವಾಗಿ ವರ್ತಿಸಿ ಅವಳನ್ನು ಥಳಿಸಿ, ಆಕೆಯ ಸಾವಿಗೆ ಕಾರಣನಾಗಿದ್ದಾನೆ. ಸಂಜೆ ತಾಯಿ ಕೆಲಸದಿಂದ ಹಿಂತಿರುಗಿದಾಗ ಹುಡುಗಿ ಮೃತಪಟ್ಟಿರುವುದನ್ನು ಕಂಡಾಗ ವಿಷಯ ಬೆಳಕಿಗೆ ಬಂದಿತು. ಅವರು ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳೀಯ ಪೊಲೀಸ್ ಠಾಣೆಯ ತಂಡ ಸ್ಥಳಕ್ಕೆ ತಲುಪಿ ಶವವನ್ನು ವಶಕ್ಕೆ ಪಡೆದರು. "ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ" ಎಂದು ಫರಿದಾಬಾದ್ ಪೊಲೀಸರ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದಲ್ಲಿ 'ಪ್ರಜಾಪ್ರಭುತ್ವ ಗಡಿಪಾರು'; ಚುನಾವಣೆ ಮುಕ್ತವಾಗಿರುವುದಿಲ್ಲ: ಯೂನಸ್ ವಿರುದ್ಧ ಮಾಜಿ ಪ್ರಧಾನಿ ಹಸೀನಾ ವಾಗ್ದಾಳಿ

IND vs NZ 2nd T20: ಭಾರತಕ್ಕೆ 7 ವಿಕೆಟ್‌ ಗೆಲುವು

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

'ವಿಬಿ ಜಿ ರಾಮ್ ಜಿ' ಕಾಯ್ದೆ ಜಾರಿ ಬಗ್ಗೆ NDA ಮಿತ್ರ ಪಕ್ಷ ಆತಂಕ: ರಾಜಕೀಯವಾಗಿ ಮಹತ್ವದ್ದು ಎಂದ ಸಿದ್ದರಾಮಯ್ಯ!

ಮಹಾರಾಷ್ಟ್ರ ರಾಜಕಾರಣದಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್! BMC ಯಲ್ಲಿ ಬದ್ಧವೈರಿಗಳು ಒಂದಾಗುವ ಸಾಧ್ಯತೆ?

SCROLL FOR NEXT