ಕಾಲು ಮುರಿದುಕೊಂಡ ಜೋಡಿ 
ದೇಶ

'ನೈತಿಕ ಪೊಲೀಸ್‌ಗಿರಿ' ಭಯ: Hindu ಕಾರ್ಯಕರ್ತರಿಗೆ ಹೆದರಿ 2ನೇ ಮಹಡಿಯಿಂದ ಜಿಗಿದ ಜೋಡಿ!

ಕಾಂಟ್‌ನ ಅಕರ್ರಾ ರಸೂಲ್‌ಪುರ ಗ್ರಾಮದ ಬಳಿಯ ಕೆಫೆಗೆ ಜೋಡಿಗಳು ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದರು. ಆ ಪ್ರವೇಶದಲ್ಲಿ ಪ್ರತಿಭಟನೆ ನಡೆಸಿ ಚಿತ್ರೀಕರಣ ಮಾಡಲು ಪ್ರಾರಂಭಿಸಿದರು.

ಶಹಜಹಾನ್‌ಪುರ: ಕಾಂಟ್‌ನ ಅಕರ್ರಾ ರಸೂಲ್‌ಪುರ ಗ್ರಾಮದ ಬಳಿಯ ಕೆಫೆಗೆ ಜೋಡಿಗಳು ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದರು. ಆ ಪ್ರವೇಶದಲ್ಲಿ ಪ್ರತಿಭಟನೆ ನಡೆಸಿ ಚಿತ್ರೀಕರಣ ಮಾಡಲು ಪ್ರಾರಂಭಿಸಿದರು. ಇದರಿಂದ ಆತಂಕಗೊಂಡ ಯುವಕ-ಯುವತಿಯ ಜೋಡಿಯೊಂದು ಎರಡನೇ ಮಹಡಿಯಲ್ಲಿರುವ ಕೋಣೆಯ ಕಿಟಕಿಯಿಂದ ಹಾರಿದ್ದು ಇಬ್ಬರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬರೇಲಿ ತಿರುವಿನ ಬಳಿಯ ಪಿಜ್ಜಾ ಅಂಗಡಿಯಲ್ಲಿ ಜೋಡಿ ಕುಳಿತಿದ್ದಾಗ, ಹಿಂದುತ್ವ ಸಂಘಟನೆಗೆ ಸೇರಿದ ಏಳರಿಂದ ಎಂಟು ಪುರುಷರು ಒಳಕ್ಕೆ ನುಗ್ಗಿ ತಮ್ಮ ಗುರುತಿನ ಚೀಟಿಗಳನ್ನು ಕೇಳಲು ಪ್ರಾರಂಭಿಸಿದರು. ಈ ವೇಳೆ ಗಾಬರಿಗೊಂಡ ಪುವಾಯನ್ ನಿವಾಸಿ ವಿಶಾಲ್ ಕಟ್ಟಡದಿಂದ ಜಿಗಿದಿದ್ದಾಗಿ ಹೇಳಿದ್ದಾರೆ. ಆ ಗುಂಪು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದು ಅಲ್ಲದೆ ವೀಡಿಯೊ ಮಾಡಲು ಪ್ರಾರಂಭಿಸಿತ್ತು ಎಂದು ವಿಶಾಲ್ ಆರೋಪಿಸಿದ್ದಾರೆ ಎಂದು ಎಸ್‌ಪಿ ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಮೂವರು ವ್ಯಕ್ತಿಗಳು ಮತ್ತು ಐವರು ಅಪರಿಚಿತ ವ್ಯಕ್ತಿಗಳು ಸೇರಿದಂತೆ ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾರ್ಯಕರ್ತರು ಸೇರುತ್ತಿದ್ದಂತೆ ಗಾಬರಿಗೊಂಡ ಮಾಲೀಕ ಮತ್ತು ನೌಕರರು ಕೆಫೆಗೆ ಬೀಗ ಹಾಕಿ ಪರಾರಿಯಾಗಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ ಅಲ್ಲಿ ಶೂಗಳು ಮತ್ತು ಚಪ್ಪಲಿಗಳು ಬಿದ್ದಿರುವುದು ಕಂಡುಬಂದಿದೆ.

ಕೆಫೆಗಳಲ್ಲಿ ಹಿಂದಿನ ವಿವಾದಗಳು

ಇಲ್ಲಿ ಹೆಚ್ಚಿನ ಸಂಖ್ಯೆಯ ಕೆಫೆಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ ತಿಂಗಳು, ರೋಜಾ ಪ್ರದೇಶದ ಕೆಫೆಯೊಂದರಲ್ಲಿ ಯುವಕರು ಮತ್ತು ಯುವತಿ ಆಕ್ಷೇಪಾರ್ಹ ರೀತಿಯಲ್ಲಿ ವರ್ತಿಸಿದ್ದರು. ಈ ಘಟನೆಯ ವೀಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಅಷ್ಟೇ ಅಲ್ಲದೆ, ಚೌಕ್ ಕೊಟ್ವಾಲಿ ಪ್ರದೇಶದ ರೆಸ್ಟೋರೆಂಟ್‌ನಲ್ಲಿ ಯುವತಿಯೊಬ್ಬಳ ಕೊಲೆ ಆಗಿತ್ತು. ಇದೇ ರೀತಿಯ ಹಲವಾರು ಘಟನೆಗಳು ಸಂಭವಿಸಿತ್ತು. ಕೆಫೆಗಳನ್ನು ಜೋಡಿಗಳಿಗೆ ಗಂಟೆಗೆ ಎರಡರಿಂದ ಮೂರು ಸಾವಿರ ರೂಪಾಯಿಗಳಿಗೆ ಬಾಡಿಗೆಗೆ ನೀಡಲಾಗುತ್ತದೆ ಎಂದು ವರದಿಯಾಗಿದೆ. ಇದರಿಂದಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರು ಇಂದು ಕೆಫೆ ಮೇಲೆ ದಾಳಿ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video