ಕಾಲು ಮುರಿದುಕೊಂಡ ಜೋಡಿ 
ದೇಶ

'ನೈತಿಕ ಪೊಲೀಸ್‌ಗಿರಿ' ಭಯ: Hindu ಕಾರ್ಯಕರ್ತರಿಗೆ ಹೆದರಿ 2ನೇ ಮಹಡಿಯಿಂದ ಜಿಗಿದ ಜೋಡಿ!

ಕಾಂಟ್‌ನ ಅಕರ್ರಾ ರಸೂಲ್‌ಪುರ ಗ್ರಾಮದ ಬಳಿಯ ಕೆಫೆಗೆ ಜೋಡಿಗಳು ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದರು. ಆ ಪ್ರವೇಶದಲ್ಲಿ ಪ್ರತಿಭಟನೆ ನಡೆಸಿ ಚಿತ್ರೀಕರಣ ಮಾಡಲು ಪ್ರಾರಂಭಿಸಿದರು.

ಶಹಜಹಾನ್‌ಪುರ: ಕಾಂಟ್‌ನ ಅಕರ್ರಾ ರಸೂಲ್‌ಪುರ ಗ್ರಾಮದ ಬಳಿಯ ಕೆಫೆಗೆ ಜೋಡಿಗಳು ಬರುತ್ತಿದ್ದಾರೆ ಎಂಬ ಮಾಹಿತಿ ಪಡೆದ ಹಿಂದೂ ಸಂಘಟನೆಯ ಕಾರ್ಯಕರ್ತರು ಆಗಮಿಸಿದರು. ಆ ಪ್ರವೇಶದಲ್ಲಿ ಪ್ರತಿಭಟನೆ ನಡೆಸಿ ಚಿತ್ರೀಕರಣ ಮಾಡಲು ಪ್ರಾರಂಭಿಸಿದರು. ಇದರಿಂದ ಆತಂಕಗೊಂಡ ಯುವಕ-ಯುವತಿಯ ಜೋಡಿಯೊಂದು ಎರಡನೇ ಮಹಡಿಯಲ್ಲಿರುವ ಕೋಣೆಯ ಕಿಟಕಿಯಿಂದ ಹಾರಿದ್ದು ಇಬ್ಬರೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬರೇಲಿ ತಿರುವಿನ ಬಳಿಯ ಪಿಜ್ಜಾ ಅಂಗಡಿಯಲ್ಲಿ ಜೋಡಿ ಕುಳಿತಿದ್ದಾಗ, ಹಿಂದುತ್ವ ಸಂಘಟನೆಗೆ ಸೇರಿದ ಏಳರಿಂದ ಎಂಟು ಪುರುಷರು ಒಳಕ್ಕೆ ನುಗ್ಗಿ ತಮ್ಮ ಗುರುತಿನ ಚೀಟಿಗಳನ್ನು ಕೇಳಲು ಪ್ರಾರಂಭಿಸಿದರು. ಈ ವೇಳೆ ಗಾಬರಿಗೊಂಡ ಪುವಾಯನ್ ನಿವಾಸಿ ವಿಶಾಲ್ ಕಟ್ಟಡದಿಂದ ಜಿಗಿದಿದ್ದಾಗಿ ಹೇಳಿದ್ದಾರೆ. ಆ ಗುಂಪು ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದು ಅಲ್ಲದೆ ವೀಡಿಯೊ ಮಾಡಲು ಪ್ರಾರಂಭಿಸಿತ್ತು ಎಂದು ವಿಶಾಲ್ ಆರೋಪಿಸಿದ್ದಾರೆ ಎಂದು ಎಸ್‌ಪಿ ರಾಜೇಶ್ ದ್ವಿವೇದಿ ತಿಳಿಸಿದ್ದಾರೆ.

ಈ ಘಟನೆ ಸಂಬಂಧ ಮೂವರು ವ್ಯಕ್ತಿಗಳು ಮತ್ತು ಐವರು ಅಪರಿಚಿತ ವ್ಯಕ್ತಿಗಳು ಸೇರಿದಂತೆ ಎಂಟು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾರ್ಯಕರ್ತರು ಸೇರುತ್ತಿದ್ದಂತೆ ಗಾಬರಿಗೊಂಡ ಮಾಲೀಕ ಮತ್ತು ನೌಕರರು ಕೆಫೆಗೆ ಬೀಗ ಹಾಕಿ ಪರಾರಿಯಾಗಿದ್ದರು. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ ಅಲ್ಲಿ ಶೂಗಳು ಮತ್ತು ಚಪ್ಪಲಿಗಳು ಬಿದ್ದಿರುವುದು ಕಂಡುಬಂದಿದೆ.

ಕೆಫೆಗಳಲ್ಲಿ ಹಿಂದಿನ ವಿವಾದಗಳು

ಇಲ್ಲಿ ಹೆಚ್ಚಿನ ಸಂಖ್ಯೆಯ ಕೆಫೆಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ ತಿಂಗಳು, ರೋಜಾ ಪ್ರದೇಶದ ಕೆಫೆಯೊಂದರಲ್ಲಿ ಯುವಕರು ಮತ್ತು ಯುವತಿ ಆಕ್ಷೇಪಾರ್ಹ ರೀತಿಯಲ್ಲಿ ವರ್ತಿಸಿದ್ದರು. ಈ ಘಟನೆಯ ವೀಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗಿತ್ತು. ಅಷ್ಟೇ ಅಲ್ಲದೆ, ಚೌಕ್ ಕೊಟ್ವಾಲಿ ಪ್ರದೇಶದ ರೆಸ್ಟೋರೆಂಟ್‌ನಲ್ಲಿ ಯುವತಿಯೊಬ್ಬಳ ಕೊಲೆ ಆಗಿತ್ತು. ಇದೇ ರೀತಿಯ ಹಲವಾರು ಘಟನೆಗಳು ಸಂಭವಿಸಿತ್ತು. ಕೆಫೆಗಳನ್ನು ಜೋಡಿಗಳಿಗೆ ಗಂಟೆಗೆ ಎರಡರಿಂದ ಮೂರು ಸಾವಿರ ರೂಪಾಯಿಗಳಿಗೆ ಬಾಡಿಗೆಗೆ ನೀಡಲಾಗುತ್ತದೆ ಎಂದು ವರದಿಯಾಗಿದೆ. ಇದರಿಂದಾಗಿ ಹಿಂದೂ ಸಂಘಟನೆಯ ಕಾರ್ಯಕರ್ತರು ಇಂದು ಕೆಫೆ ಮೇಲೆ ದಾಳಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT