ಬಾಲಿವುಡ್ ನಟ ನದೀಮ್ ಖಾನ್ 
ದೇಶ

ಮನೆಕೆಲಸದವಳಿಗೆ ಲೈಂಗಿಕ ಕಿರುಕುಳ; ‘ಧುರಂದರ್’ ನಟ ನದೀಮ್ ಖಾನ್ ಬಂಧನ

ಕಳೆದ 10 ವರ್ಷಗಳಿಂದ ಮನೆ ಕೆಲಸದಾಕೆಯನ್ನ ನದೀಮ್ ಖಾನ್ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು. ಮದುವೆ ಆಗೋದಾಗಿ ಭರವಸೆ ನೀಡಿದ್ದರು.

ಮುಂಬೈ: ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧುರಂಧರ್ (Dhurandhar) ಸಿನಿಮಾ ಕಲಾವಿದ ನದೀಮ್ ಖಾನ್ ಅವರನ್ನು ಬಂಧಿಸಲಾಗಿದೆ.

ಕಳೆದ 10 ವರ್ಷಗಳಿಂದ ಮನೆ ಕೆಲಸದಾಕೆಯನ್ನ ನದೀಮ್ ಖಾನ್ ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದರು. ಮದುವೆ ಆಗೋದಾಗಿ ಭರವಸೆ ನೀಡಿದ್ದರು. ಆದರೆ ಈಗ ಅವರು ಮೋಸ ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ ಎನ್ನಲಾಗಿದೆ.

41 ವರ್ಷದ ಮಹಿಳೆ ಈ ದೂರನ್ನು ನೀಡಿದ್ದು, 2015ರಲ್ಲಿ ನದೀಮ್ ಖಾನ್ ಅವರನ್ನು ಸಂತ್ರಸ್ತೆ ಭೇಟಿ ಮಾಡಿದರು. ಆಗ ಅವರಿಗೆ 31 ವರ್ಷ. ಮನೆಕೆಲಸದವಳಾಗಿ ಅವರು ಸೇರಿಕೊಂಡರು. ನಂತರ ಇದು ದೈಹಿಕ ಸಂಬಂಧಕ್ಕೆ ತಿರುಗಿತು. ಇಬ್ಬರೂ ಆಪ್ತರಾದರು. ಈ ವೇಳೆ ನದೀಮ್ ಖಾನ್ ಅವರಿಗೆ ಮದುವೆ ಆಗುವ ಭರವಸೆ ನೀಡಿದ್ದು, ಈ ಭರವಸೆ ಮೇಲೆ ಅವರು ದೈಹಿಕ ಸಂಪರ್ಕಕ್ಕೆ ಒಪ್ಪಿದರು.ಇದು 10 ವರ್ಷಗಳ ಕಾಲ ಮುಂದುವರಿಯಿತು. ಈಗ ಅವರು ಮದುವೆ ಆಗಲು ನಿರಾಕರಿಸಿದ್ದಾರೆ ಎನ್ನಲಾಗಿದೆ.

ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದ್ದು, ಹೀಗಾಗಿ, ಪೊಲೀಸರನ್ನು ಸಂಪರ್ಕಿಸಲು ಅವರು ನಿರ್ಧರಿಸಿದರು. ಆರಂಭಿಕ ತನಿಖೆ ನಡೆಸಿ ನದೀಮ್ ಖಾನ್ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ಮುಂದುವರೆದಿದ್ದು, ಅಧಿಕಾರಿಗಳು ಹೆಚ್ಚುವರಿ ಹೇಳಿಕೆಗಳನ್ನು ದಾಖಲಿಸುವ ಮತ್ತು ಆರೋಪಗಳಿಗೆ ಸಂಬಂಧಿಸಿದ ಪುರಾವೆಗಳನ್ನು ಪರಿಶೀಲಿಸುವ ಸಾಧ್ಯತೆ ಇದೆ.

ಯಾರು ಈ ನದೀಮ್ ಖಾನ್?

‘ಧುರಂಧರ್’ ಸಿನಿಮಾದಲ್ಲಿ ಡಕಾಯಿತ್ ರೆಹಮಾನ್ ಮನೆಯ ಬಾಣಸಿಗ ಅಖ್ಲಾಕ್ ಆಗಿ ನದೀಮ್ ಖಾನ್ ಕಾಣಿಸಿಕೊಂಡಿದ್ದರು. ನದೀಮ್ ಖಾನ್ ಅವರನ್ನು ಪೊಲೀಸರು ವಶದಲ್ಲಿ ಇಟ್ಟುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಧುರಂಧರ್ ಸಿನಿಮಾ ಹೊಸ ದಾಖಲೆ ಬರೆದಿದೆ. ಈ ಚಿತ್ರ ವಿಶ್ವಾದ್ಯಂತ 1300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಜನವರಿ 30ರಂದು ಸಿನಿಮಾ ನೆಟ್​​ಫ್ಲಿಕ್ಸ್ ಮೂಲಕ ಪ್ರಸಾರ ಕಾಣಲಿದೆ.

ರಣವೀರ್ ಸಿಂಗ್ ಸಿನಿಮಾದಲ್ಲಿ ನಟಿಸಿದ್ದು, ಈ ಚಿತ್ರದ ಸೀಕ್ವೆಲ್ ಮಾರ್ಚ್ 19ರಂದು ರಿಲೀಸ್ ಆಗುತ್ತಿದೆ. ಕನ್ನಡದ ‘ಟಾಕ್ಸಿಕ್’ ಎದುರು ಸಿನಿಮಾ ತೆರೆಗೆ ಬರುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರೀಕ್ಷೆ ಅಕ್ರಮ; ಜಾರ್ಖಂಡ್ ಸಿಎಂ ಸೊರೇನ್, ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಪ್ರತಿಕೃತಿ ದಹಿಸಿ JPSC-JSSC ಆಕಾಂಕ್ಷಿಗಳ ಪ್ರತಿಭಟನೆ

NLSIU ಘಟಿಕೋತ್ಸವ: NALSAR ಮಾದರಿಯಲ್ಲಿ ಮುಖ್ಯ ನ್ಯಾಯಮೂರ್ತಿಗಳಿಗೆ ಆಹ್ವಾನ ವಿರೋಧಿಸಿದ ಬೆಂಗಳೂರು ಉನ್ನತ ಕಾನೂನು ಕಾಲೇಜು!

ಪಂಜಾಬ್: ತಪ್ಪಿದ ಭಾರಿ ಅನಾಹುತ; ಉಗ್ರ ದಾಳಿ ಸಂಚು ವಿಫಲ, 690 ಗ್ರಾಂ IED ಪೊಲೀಸ್ ವಶಕ್ಕೆ

SIR ಪ್ರಕ್ರಿಯೆ ಯಶಸ್ಸು: ಬಿಹಾರ ಚುನಾವಣೆ ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಮತ್ತು ಜಪಾನ್‌ಗಳನ್ನು ಮೀರಿಸಿದೆ: CEC ಜ್ಞಾನೇಶ್ ಕುಮಾರ್

ಭಾರತದ ಹೊಸ ಶಕ್ತಿ ಪ್ರದರ್ಶನ: ಜೆಟ್ ಚಾಲಿತ ಸ್ವದೇಶಿ 'ದಿವ್ಯಾಸ್ತ್ರ Mk3' ಮೊದಲ ಪರೀಕ್ಷೆ ಯಶಸ್ವಿ! Video