ಅಜಿತ್ ಪವಾರ್, ಶರದ್ ಪವಾರ್ ಚಿತ್ರ 
ದೇಶ

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

ತನ್ನ ಸೋದರಳಿಯನ ದುರಂತ ಮತ್ತು ಹಠಾತ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ಆತನ ಸಾವಿನಿಂದ ಆಗಿರುವ ನಷ್ಟವನ್ನು ಎಂದಿಗೂ ತುಂಬಲು ಸಾಧ್ಯವಿಲ್ಲ. ಘಟನೆಯಲ್ಲಿ ಯಾವುದೇ ಪಿತೂರಿ ನಡೆದಿಲ್ಲ ಎಂದಿದ್ದಾರೆ.

ಮುಂಬೈ: ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ತನ್ನ ಸೋದರಳಿಯ ಹಾಗೂ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿನ ಕುರಿತು ಹಿರಿಯ ರಾಜಕಾರಣಿ ಮತ್ತು NCP (SP) ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಂಪೂರ್ಣವಾಗಿ ಅಪಘಾತವಾಗಿದ್ದು, ಘಟನೆಯ ಹಿಂದೆ ಯಾವುದೇ ಪಿತೂರಿ ಇಲ್ಲ ಎಂದು ಹೇಳಿದ್ದಾರೆ.

66 ವರ್ಷದ ಅಜಿತ್ ಪವಾರ್ ಮತ್ತಿತರ ನಾಲ್ವರು ಪ್ರಯಾಣಿಸುತ್ತಿದ್ದ ವಿಮಾನ ಇಂದು ಮುಂಜಾನೆ ಪುಣೆ ಜಿಲ್ಲೆಯ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡುವಾಗ ಅಪಘಾತಕ್ಕೀಡಾಗಿತ್ತು. ತನ್ನ ಸೋದರಳಿಯನ ದುರಂತ ಮತ್ತು ಹಠಾತ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ಆತನ ಸಾವಿನಿಂದ ಆಗಿರುವ ನಷ್ಟವನ್ನು ಎಂದಿಗೂ ತುಂಬಲು ಸಾಧ್ಯವಿಲ್ಲ. ಘಟನೆಯಲ್ಲಿ ಯಾವುದೇ ಪಿತೂರಿ ನಡೆದಿಲ್ಲ ಎಂದಿದ್ದಾರೆ.

NDTVಯೊಂದಿಗೆ ಮಾತನಾಡಿದ ಶರದ್ ಪವಾರ್, "ಯಾವುದೇ ಪಿತೂರಿ ನಡೆದಿಲ್ಲ. ಇದು ಸಂಪೂರ್ಣವಾಗಿ ಅಪಘಾತವಾಗಿದೆ. ಅಜಿತ್ ಪವಾರ್ ಅವರ ನಿಧನದಿಂದ ಮಹಾರಾಷ್ಟ್ರಕ್ಕೆ ದೊಡ್ಡ ನಷ್ಟ ಆಗಿದೆ. ಒಬ್ಬ ಸಮರ್ಥ ನಾಯಕ ಇಂದು ನಮ್ಮನ್ನು ಅಗಲಿದ್ದಾರೆ. ಮಹಾರಾಷ್ಟ್ರ ಇಂದು ಶ್ರೇಷ್ಠ ವ್ಯಕ್ತಿಯನ್ನು ಕಳೆದುಕೊಂಡಿದೆ. ಈ ನಷ್ಟವನ್ನು ಎಂದಿಗೂ ತುಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೆಲವು ಘಟನೆಗಳು ರಾಜಕೀಯವನ್ನು ಮೀರಿರುತ್ತವೆ. ಅಜಿತ್ ಪವಾರ್ ನಿಧನದ ನೋವ ಮಹಾರಾಷ್ಟ್ರಕ್ಕೆ ಶಾಶ್ವತವಾಗಿ ಇರಲಿದೆ. ಇದರಲ್ಲಿ ಯಾವುದೇ ರಾಜಕೀಯ ಮಾಡಬೇಡಿ, ಇದನ್ನು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದಿದ್ದಾರೆ.

"ಎಲ್ಲವೂ ನಮ್ಮ ಕೈಯಲ್ಲಿಲ್ಲ. ನಾನು ಅಸಹಾಯಕನಾಗಿದ್ದೇನೆ. ಅಳುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಕೆಲವು ಘಟನೆಗಳ ಹಿಂದೆ ಯಾವುದೇ ರಾಜಕೀಯ ಇರಲ್ಲ. ನಾನು ಈ ಬಗ್ಗೆ ನನ್ನ ನಿಲುವನ್ನು ಸ್ಪಷ್ಟವಾಗಿ ಹೇಳಿದ್ದೇನೆ. ಇದರಲ್ಲಿ ಯಾವುದೇ ಪಿತೂರಿ ಇಲ್ಲ. ಇದು ಸಂಪೂರ್ಣವಾಗಿ ಅಪಘಾತ, ಮಹಾರಾಷ್ಟ್ರ ಮತ್ತು ನಾವೆಲ್ಲರೂ ಇದರ ನೋವನ್ನು ಶಾಶ್ವತವಾಗಿ ಭರಿಸಬೇಕಾಗುತ್ತದೆ. ದಯವಿಟ್ಟು ಇದರಲ್ಲಿ ರಾಜಕೀಯವನ್ನು ತರಬೇಡಿ ಎಂದು ನಾನು ಹೇಳಲು ಬಯಸುತ್ತೇನೆ ಎಂದು ಹೇಳಿದರು.

ಶರದ್ ಪವಾರ್ ಅವರ ಪುತ್ರಿ ಮತ್ತು ಎನ್‌ಸಿಪಿ (ಎಸ್‌ಪಿ) ಯ ಲೋಕಸಭಾ ಸಂಸದೆ ಸುಪ್ರಿಯಾ ಸುಳೆ, ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರೊಂದಿಗೆ ಬಾರಾಮತಿಗೆ ಆಗಮಿಸುತ್ತಿದ್ದಂತೆ ಗೋಳಾಡುವುದು ಕಂಡುಬಂದಿತು.

ಅಜಿತ್ ಪವಾರ್ ಸಾವಿನ ಕುರಿತು ಸುಪ್ರೀಂ ಕೋರ್ಟ್-ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ ಬೆನ್ನಲ್ಲೇ ಶರದ್ ಪವಾರ್ ಈ ಪ್ರತಿಕ್ರಿಯೆ ನೀಡಿದ್ದಾರೆ.

2023 ರಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟಕ್ಕೆ ಸೇರಲು ಶರದ್ ಪವಾರ್ ನೇತೃತ್ವದ ಎನ್‌ಸಿಪಿಯಿಂದ ಹೊರನಡೆದಿದ್ದ ಅಜಿತ್ ಪವಾರ್, ಮತ್ತೆ ತಮ್ಮ ಚಿಕ್ಕಪ್ಪನೊಂದಿಗೆ ಸೇರಲು ಯೋಜಿಸುತ್ತಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಒತ್ತಾಯವನ್ನು ಬೆಂಬಲಿಸಿದ್ದಾರೆ. ವಿಮಾನ ಅಪಘಾತದ ಕುರಿತು ನಿಜವಾದ ಕಾರಣ ತಿಳಿಯಲು ಪಾರದರ್ಶಕ ತನಿಖೆ ನಡೆಯಬೇಕಾಗಿದೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಯುಜಿಸಿ ನಿಯಮಗಳ ವಿವಾದದ ಬಗ್ಗೆ ಪ್ರಧಾನಿಗೆ ರಕ್ತದಲ್ಲಿ ಬರೆದ ವ್ಯಕ್ತಿ

25 ಶಾಸಕರ ನಿಗಮ-ಮಂಡಳಿ ಅಧ್ಯಕ್ಷ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ; ಯಾರೆಲ್ಲಾ ಮುಂದುವರಿಕೆ?

News headlines 28-01-2026 | MUDA: CM ಗೆ ರಿಲೀಫ್; ಸರ್ಕಾರದ ವಿರುದ್ಧ ಬಿಜೆಪಿ ಟೆಲಿಫೋನ್ ಕದ್ದಾಲಿಕೆ ಆರೋಪ; ಮನೆಗೆಲಸದವರಿಂದ 18 ಕೋಟಿ ರೂ ಮೌಲ್ಯದ ಚಿನ್ನ, ಬೆಳ್ಳಿ ದರೋಡೆ

ಮುಡಾ ಹಗರಣ: ಸಿದ್ದರಾಮಯ್ಯ ಹಾಗೂ ಕುಟುಂಬಕ್ಕೆ ಬಿಗ್ ರಿಲೀಫ್; ಲೋಕಾಯುಕ್ತ ಸಲ್ಲಿಸಿದ್ದ 'ಬಿ' ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

SCROLL FOR NEXT