ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಒಂದು ತಿಂಗಳಿಂದ ಪ್ರತಿಭಟನೆ; ಇಬ್ಬರು ಬಿಸಿಯೂಟ ಸಿಬ್ಬಂದಿ ಸಾವು

ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಬಾಲೋಡ್: ಛತ್ತೀಸ್‌ಗಢದಲ್ಲಿ ಗೌರವಧನ ಹೆಚ್ಚಳಕ್ಕೆ ಒತ್ತಾಯಿಸಿ ಬಿಸಿಯೂಟದ ಸಿಬ್ಬಂದಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು, ಧರಣಿನಿರತ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ಸಂಘ ಮತ್ತು ಕುಟುಂಬ ಸದಸ್ಯರು ಬುಧವಾರ ತಿಳಿಸಿದ್ದಾರೆ.

ಮಧ್ಯಾಹ್ನದ ಬಿಸಿಯೂಟ ತಯಾರಕರ ಪ್ರತಿಭಟನೆ ಇಂದು 31ನೇ ದಿನಕ್ಕೆ ಕಾಲಿಟ್ಟಿದ್ದು, ಈ ಸಾವುಗಳಿಗೂ, ಸರ್ಕಾರಕ್ಕೂ ನೇರ ಸಂಬಂಧವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಬಾಲೋಡ್ ಜಿಲ್ಲೆಯ ಮಧ್ಯಾಹ್ನದ ಬಿಸಿಯೂಟ ಅಡುಗೆಯವರು ಜನವರಿ 26 ರಂದು ಪಕ್ಕದ ರಾಜನಂದಗಾಂವ್ ಜಿಲ್ಲೆಯ ಆಸ್ಪತ್ರೆಯಲ್ಲಿ ನಿಧನರಾದರೆ, ಸರ್ಕಾರ ನಡೆಸುವ ಆಹಾರ ಯೋಜನೆಯಡಿ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಮಹಿಳೆ ಬೆಮೆತಾರಾ ಜಿಲ್ಲೆಯ ನಿವಾಸಿ ದುಲಾರಿ ಬಾಯಿ ಯಾದವ್ ಅದೇ ದಿನ ಬೆಳಗಿನ ಜಾವ ದುರ್ಗ್ ಜಿಲ್ಲೆಯ ಭಿಲೈ ಪಟ್ಟಣದ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಅವರ ಕುಟುಂಬ ಸದಸ್ಯರು ಮತ್ತು ಪ್ರತಿಭಟನಾಕಾರರನ್ನು ಪ್ರತಿನಿಧಿಸುವ ಸಂಘ ತಿಳಿಸಿದೆ.

ಡಿಸೆಂಬರ್ 29 ರಿಂದ, ಸಾವಿರಾರು ಮಧ್ಯಾಹ್ನದ ಬಿಸಿಯೂಟದ ಸಿಬ್ಬಂದಿ, ಹೆಚ್ಚಾಗಿ ಮಹಿಳೆಯರು, ನವ ರಾಯ್‌ಪುರ್ ಅಟಲ್ ನಗರದ ತುಟಾ ಧರ್ನಾ ಸ್ಥಳದಲ್ಲಿ ತಮ್ಮ ದೈನಂದಿನ ವೇತನವನ್ನು 66 ರೂ.ಗಳಿಂದ 400 ರೂ.ಗಳಿಗೆ ಹೆಚ್ಚಿಸಬೇಕೆಂದು ಒತ್ತಾಯಿಸಿ ಧರಣಿ ನಡೆಸುತ್ತಿದ್ದಾರೆ.

ಸರ್ಕಾರದ ಮಹತ್ವಾಕಾಂಕ್ಷೆಯ ಪೌಷ್ಟಿಕ ಆಹಾರ ಯೋಜನೆಗಳಲ್ಲಿ ಒಂದಾದ ಮಧ್ಯಾಹ್ನದ ಬಿಸಿಯೂಟದ ಹಿಂದಿನ ಪ್ರಮುಖ ಕಾರ್ಯಪಡೆಯಾಗಿರುವ ಈ ಅಡುಗೆಯವರು 'ಛತ್ತೀಸ್‌ಗಢ ಶಾಲಾ ಮಧ್ಯಾನ್ಹ ಭೋಜನ ರಸೋಯ ಸಂಯುಕ್ತ ಸಂಘ' (CSMBRSS) ಬ್ಯಾನರ್ ಅಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಯೋಜನೆಯಡಿಯಲ್ಲಿ, ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ತರಗತಿಗಳಲ್ಲಿ ಓದುತ್ತಿರುವ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಉಚಿತ, ಬಿಸಿ ಊಟವನ್ನು ನೀಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...

4ನೇ ಟಿ20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಸರ್... ಹಾವಾಡಿಗರಿಗೆ ನಿಮ್ಮ ದೇಶಪ್ರೇಮ ಸಾಬೀತು ಮಾಡುವ ಅಗತ್ಯ ಇಲ್ಲ: ನಟ ಕಿಶೋರ್

ಚಿಕ್ಕಮಗಳೂರು: ಹೋಂ ಸ್ಟೇನಲ್ಲಿ ವಿಧವೆ ಜೊತೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಟಿ ರವಿ ಆಪ್ತನ ಮೇಲೆ ಹಲ್ಲೆ, Video Viral

'ಮಹಾ' ಡಿಸಿಎಂ ಅಜಿತ್ ಪವಾರ್ ದುರಂತ ಸಾವು ಬೆನ್ನಲ್ಲೇ ಬಾರಾಮತಿಯಲ್ಲಿ ತುರ್ತು ATC ತಂಡ ನಿಯೋಜಿಸಿದ IAF

SCROLL FOR NEXT