ಸಾಧ್ವಿ ಪ್ರೇಮ್‌ ಬೈಸಾ  
ದೇಶ

ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ ಸಾಧ್ವಿ ಪ್ರೇಮ್‌ ಬೈಸಾ ನಿಗೂಢ ಸಾವು!

25 ವರ್ಷದ ಸಾಧ್ವಿ ಪ್ರೇಮ್ ಬೈಸಾ ಅವರು ಬುಧವಾರ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿನ ನಾಲ್ಕು ಗಂಟೆಗಳ ನಂತರ ಅವರ ಸೋಶಿಯಲ್‌ ಮೀಡಿಯಾ ಅಕೌಂಟ್‌ನಲ್ಲಿ ನ್ಯಾಯಕ್ಕಾಗಿ ಒತ್ತಾಯಿಸುವ ಪೋಸ್ಟ್ ಪ್ರಕರಣವನ್ನು ಇನ್ನಷ್ಟು ಜಟಿಲಗೊಳಿಸಿದೆ.

ಜೈಪುರ: ರಾಜಸ್ಥಾನದ ಜೋಧ್‌ಪುರದ ಬೋರನಾಡ ಆಶ್ರಮದ ಖ್ಯಾತ ಧಾರ್ಮಿಕ ಪ್ರಚಾರಕಿ ಸಾಧ್ವಿ ಪ್ರೇಮ್ ಬೈಸಾ ಅವರು ಕುಸಿದುಬಿದ್ದು ನಿಗೂಢವಾಗಿ ಸಾವಿಗೀಡಾಗಿದ್ದಾರೆ. ಪ್ರೇಮ್ ಬೈಸಾ ಅವರ ಹಠಾತ್ ಸಾವು ಸಂತ ಸಮುದಾಯ ಮತ್ತು ಅವರ ಅನುಯಾಯಿಗಳಿಗೆ ಆಘಾತ ನೀಡಿದೆ.

25 ವರ್ಷದ ಸಾಧ್ವಿ ಪ್ರೇಮ್ ಬೈಸಾ ಅವರು ಬುಧವಾರ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದು, ಅವರ ಸಾವಿನ ನಾಲ್ಕು ಗಂಟೆಗಳ ನಂತರ ಅವರ ಸೋಶಿಯಲ್‌ ಮೀಡಿಯಾ ಅಕೌಂಟ್‌ನಲ್ಲಿ ನ್ಯಾಯಕ್ಕಾಗಿ ಒತ್ತಾಯಿಸುವ ಪೋಸ್ಟ್ ಪ್ರಕರಣವನ್ನು ಇನ್ನಷ್ಟು ಜಟಿಲಗೊಳಿಸಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ನಿನ್ನೆ ಸಂಜೆ ಸಂಜೆ ಕುಸಿದು ಬಿದ್ದ ಸಾಧ್ವಿ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

"ನಿನ್ನೆ ಸಂಜೆ ಸುಮಾರು 6 ಗಂಟೆಗೆ ಸಾಧ್ವಿಯನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರು ಪರೀಕ್ಷಿಸಿದ ನಂತರ ಆಕೆ ಮೃತಪಟ್ಟಿದ್ದಾಳೆ. ಸಾವಿನ ಕಾರಣವನ್ನು ಖಚಿತಪಡಿಸಿಕೊಳ್ಳಲು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು " ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಸಾಧ್ವಿ ಜ್ವರದಿಂದ ಬಳಲುತ್ತಿದ್ದರು ಮತ್ತು ಆಶ್ರಮದಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ಆಶ್ರಮಕ್ಕೆ ಕರೆಸಲಾಗಿದ್ದ ಕಾಂಪೌಂಡರ್ ನೀಡಿದ ಇಂಜೆಕ್ಷನ್ ನಂತರ ಆಕೆ ಕುಸಿದು ಬಿದ್ದಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆಶ್ರಮದಲ್ಲೇ ಆಕೆಗೆ ಔಷಧೋಪಚಾರ ನೀಡಲಾಗುತ್ತಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಆಶ್ರಮದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆಗೆ ಕಾರಣವಾಗಿದೆ. ಸಾವಿರಾರು ಭಕ್ತರು ಜಮಾಯಿಸಿ, ನ್ಯಾಯಯುತ ಮತ್ತು ಪಾರದರ್ಶಕ ತನಿಖೆಗೆ ಆಗ್ರಹಿಸಿದ್ದಾರೆ.

ಇನ್‌ಸ್ಟಾಗ್ರಾಮ್ ನಲ್ಲಿ ಪೋಸ್ಟ್

ಸಾಧ್ವಿ ಮೃತಪಟ್ಟ ಕೆಲವು ಗಂಟೆಗಳ ನಂತರ ಸಾಧ್ವಿಯ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಒಂದು ಪೋಸ್ಟ್ ಕಾಣಿಸಿಕೊಂಡಿದ್ದು, ಇದು ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪೊಲೀಸರ ಪ್ರಕಾರ, ಈ ಪೋಸ್ಟ್ ಒಂದು ಆತ್ಮಹತ್ಯೆಯ ಪತ್ರವಾಗಿದ್ದು, ಅದರಲ್ಲಿ ಅವರು "ಅಗ್ನಿಪರೀಕ್ಷೆ"ಯ ಬಗ್ಗೆ ಉಲ್ಲೇಖಿಸಿದ್ದಾರೆ. ತನಗೆ ಆ ಅವಕಾಶ ಸಿಗಲಿಲ್ಲ ಎಂದು ಹೇಳಿಕೊಂಡಿರುವ ಆಕೆ, ತಾನು ಮರಣ ಹೊಂದಿದ ನಂತರವಾದರೂ ನ್ಯಾಯ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಸಲೀಲೆ ವಿಡಿಯೋ ವೈರಲ್

ಕಳೆದ ವರ್ಷ ಜುಲೈನಲ್ಲಿ ತನ್ನ ಗುರು ಹಾಗೂ ತಂದೆಗೆ ಸಮಾನವಾದ ಸ್ವಾಮೀಜಿಯನ್ನು ತಬ್ಬಿಕೊಂಡು, ಮುತ್ತುಕೊಡುತ್ತಿರುವ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋ ಹೊರಬಂದ ಬಳಿಕ ಸಾಧ್ವಿಗೆ ಪ್ರತಿದಿನ ಚಿತ್ರಹಿಂಸೆ ನೀಡಲಾಗುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಪ್ರಕರಣವನ್ನೂ ದಾಖಲಿಸಲಾಯಿತು. ನಂತರ ಸಾಧ್ವಿ ತನ್ನ ಮುಗ್ಧತೆಯನ್ನು ಸಾಬೀತುಪಡಿಸಲು ಯಾವುದೇ ಕಠಿಣ ಪರೀಕ್ಷೆಗೆ ಒಳಗಾಗಲು ಸಿದ್ಧನಿದ್ದೇನೆ ಎಂದು ಸಾರ್ವಜನಿಕವಾಗಿ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

'ಅಪಾಯಕಾರಿ ಪರಿಣಾಮಕ್ಕೆ ಕಾರಣ, ಸಮಾಜ ವಿಭಜನೆ': ಜಾತಿ ತಾರತಮ್ಯದ ವಿರುದ್ಧದ ಹೊಸ UGC ನಿಯಮಗಳಿಗೆ ಸುಪ್ರೀಂ ಕೋರ್ಟ್ ತಡೆ!

ಸರ್ಕಾರಿ ವೈದ್ಯರು ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವಂತಿಲ್ಲ: ಸಚಿವ ದಿನೇಶ್ ಗುಂಡೂರಾವ್

ಪ್ರಧಾನಿ ಮೋದಿ ಭೇಟಿಯಾದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ: ಬಜೆಟ್ ಅನುದಾನ ಕುರಿತು ಚರ್ಚೆ!

ಬೆಂಗಳೂರು: 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಕೆ.ಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್‌ ಲೋಕಾಯುಕ್ತ ಬಲೆಗೆ

SCROLL FOR NEXT