ಲಿಫ್ಟ್ ನಲ್ಲಿ ದರೋಡೆ ಮಾಡುತ್ತಿರುವ ದೃಶ್ಯ  
ದೇಶ

AIIMS ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ: ನರ್ಸಿಂಗ್ ವಿದ್ಯಾರ್ಥಿಯಿಂದಲೇ ದರೋಡೆ; 45 CCTV ಕ್ಯಾಮೆರಾ ಪರಿಶೀಲನೆ ಬಳಿಕ ಆರೋಪಿ ಬಂಧನ..!

ಇತ್ತೀಚೆಗೆ ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲೇ ಯುವಕನೋರ್ವ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಬ್ಬರ ಚಿನ್ನದ ಕರಿಮಣಿ ಸರವನ್ನು ಕದ್ದು ಪರಾರಿಯಾಗಿದ್ದ. ಆಸ್ಪತ್ರೆಯ ಲಿಫ್ಟ್‌ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿತ್ತು.

ಭೋಪಾಲ್: ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲಿ ವೈದ್ಯಕೀಯ ಸಿಬ್ಬಂದಿಯ ಚಿನ್ನದ ಸರ ಕದ್ದಿದ್ದ ಆರೋಪಿಯನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಇತ್ತೀಚೆಗೆ ಭೋಪಾಲ್‌ನ ಏಮ್ಸ್ ಆಸ್ಪತ್ರೆಯ ಲಿಫ್ಟ್‌ನಲ್ಲೇ ಯುವಕನೋರ್ವ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯೊಬ್ಬರ ಚಿನ್ನದ ಕರಿಮಣಿ ಸರವನ್ನು ಕದ್ದು ಪರಾರಿಯಾಗಿದ್ದ. ಆಸ್ಪತ್ರೆಯ ಲಿಫ್ಟ್‌ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿತ್ತು.

ಕೇವಲ 54 ಸೆಕೆಂಡ್‌ಗಳಲ್ಲಿ ಅರೋಪಿ ಮಹಿಳೆಯ ಚಿನ್ನದ ಸರ ಕಸಿದು ಪರಾರಿಯಾಗಿದ್ದ. ಏಮ್ಸ್ ಆಸ್ಪತ್ರೆಯ ಸ್ತ್ರೀ ರೋಗ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವರ್ಷಾ ಸೋನಿ ಎಂಬುವವರು ಈ ಘಟನೆಯಲ್ಲಿ ಚಿನ್ನದ ಸರವನ್ನು ಕಳೆದುಕೊಂಡಿದ್ದರು. ಲಿಫ್ಟ್‌ನಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಈ ದೃಶ್ಯ ಸೆರೆ ಆಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ನಡುವೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿ ಪತ್ತೆಗೆ 45 ಸಿಸಿ ಕ್ಯಾಮರಾಗಳನ್ನು ತಪಾಸಣೆ ನಡೆಸಿ, ಆರೋಪಿಯನ್ನು ಪತ್ತೆ ಮಾಡಿದ್ದಾರೆ.

ಆರೋಪಿಯನ್ನು 25 ವರ್ಷದ ಸುನೀಲ್ ಮೀನಾ ಎಂದು ಗುರುತಿಸಲಾಗಿದೆ. ಈತ 3ನೇ ವರ್ಷದ ನರ್ಸಿಂಗ್‌ ವಿದ್ಯಾರ್ಥಿಯಾಗಿದ್ದು, ಹಣಕಾಸಿನ ಸಮಸ್ಯೆ ಹಾಗೂ ಐಷಾರಾಮಿ ಜೀವನದ ಆಸೆಗಾಗಿ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ.

ಆನ್‌ಲೈನ್ ಹಣ ವರ್ಗಾವಣೆ ವೇಳೆ ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ಸ್ನೇಹಿತರ ಬಳಿಯೂ ಸಾಲ ಮಾಡಿದ್ದೇನೆ. ಎಲ್ಲರೂ ಸಾಲದ ಹಣ ವಾಪಸ್ ಕೇಳುತ್ತಿದ್ದರು. ಹೀಗಾಗಿ ಹಣಕ್ಕಾಗಿ ಕಳ್ಳತನ ಮಾಡಿದ್ದಾಗಿ ಹೇಳಿದ್ದಾನೆ. ಈತ ಬಹಳ ಲಕ್ಸುರಿ ಜೀವನ ಶೈಲಿ ರೂಪಿಸಿಕೊಂಡಿದ್ದ, ದುಬಾರಿ ಮೊಬೈಲ್, ಕಾರು ಖರೀದಿಸಬೇಕೆಂದು ಬಯಸಿದ್ದ, ಹೀಗೆ ದುಡ್ಡಿಲ್ಲದೆಯೂ ಶೋಕಿ ಮಾಡುತ್ತಿದ್ದು, ಈತನಿಗೆ ಒಬ್ಬಳು ಗರ್ಲ್‌ಫ್ರೆಂಡ್ ಕೂಡ ಇದ್ದಳು ಎಂಬುದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ.

ಆರೋಪಿ ಕದ್ದ ಸರವನ್ನು ಜ್ಯುವೆಲ್ಲರಿ ಶಾಪೊಂದಕ್ಕೆ ಮಾರಾಟ ಮಾಡಿದ್ದು, ಪುಷ್ಪರಾಜ್ ಎಂಬುವವರಿಂದ ಈ ಮಂಗಳಸೂತ್ರವನ್ನು ವಶಕ್ಕೆ ಪಡೆಯಲಾಗಿದೆ. ಇದೀಗ ಪ್ರಕರಣದಲ್ಲಿ ಆತನನ್ನು ಆರೋಪಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump

ಉಪಚುನಾವಣೆ: ಯುಗಾದಿ ಹಬ್ಬದ ದಿನವೇ ಬಾಗಲಕೋಟೆ, ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ ಹೆಚ್ ಮುನಿಯಪ್ಪ

ಯುಗಾದಿ, ರಂಜಾನ್ ರಜೆ: ಬೆಂಗಳೂರಿನಿಂದ ವಿವಿಧೆಡೆ ಸಂಚಾರಕ್ಕೆ ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...

ನಾಡಿನೆಲ್ಲೆಡೆ ಯುಗಾದಿ ಸಂಭ್ರಮ-ಪೂಜೆ, ಹಬ್ಬದೂಟ ತಯಾರಿಯಲ್ಲಿ ಜನತೆ, ವ್ಯಾಪಾರ ಭರಾಟೆ ಜೋರು

SCROLL FOR NEXT