ಶಶಿ ತರೂರ್ 
ದೇಶ

ರಾಹುಲ್ ಭೇಟಿ ಬೆನ್ನಲ್ಲೇ ತರೂರ್ 'ಸ್ಟಾರ್ ಪ್ರಚಾರಕ' ಎಂದು ಹೆಸರಿಸಿದ ಕಾಂಗ್ರೆಸ್!

ಕೊಚ್ಚಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ನನ್ನ ಹೆಸರು ಕರೆಯಲಿಲ್ಲ ಎಂದು ಅಸಮಾಧಾನಗೊಂಡಿದ್ದ ಶಶಿ ತರೂರ್ ಕೇರಳದ ಚುನಾವಣಾ ಕಾರ್ಯತಂತ್ರದ ಸಭೆಯಿಂದ ದೂರು ಉಳಿದಿದ್ದರು.

ತಿರುವನಂತಪುರಂ: ಕೆಲವು ದಿನಗಳಿಂದ ಕಾಂಗ್ರೆಸ್ ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರ್ತಾರೆ ಎನ್ನಲಾಗುತ್ತಿದ್ದ ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ UDF ನ ಸ್ಟಾರ್ ಪ್ರಚಾರಕ ಎಂದು ಹೆಸರಿಸಲಾಗಿದೆ.

ಶಶಿ ತರೂರ್ ಕುರಿತ ಪ್ರಶ್ನೆಗೆ ಉತ್ತರಿಸಿದ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್, ಅವರು (ತರೂರ್) ಕೇರಳದಲ್ಲಿ ಯುಡಿಎಫ್ ಚುನಾವಣಾ ಪ್ರಚಾರದಲ್ಲಿ ಮೊದಲ ಸಾಲಿನಲ್ಲಿರುತ್ತಾರೆ ಎಂದರು.

ತರೂರ್ ವಿಶ್ವ ಮಟ್ಟದಲ್ಲೂ ಪ್ರಸಿದ್ಧರಾಗಿದ್ದು, ಹೆಸರಾಂತ ಬರಹಗಾರರಾಗಿದ್ದು, ಜನರೊಂದಿಗೆ ಹೆಚ್ಚಿನ ಸಂಪರ್ಕವನ್ನು ಹೊಂದಿದ್ದಾರೆ. ಹಾಗಾಗಿ ಅವರು ಚುನಾವಣಾ ಪ್ರಚಾರದಲ್ಲಿ ಮುಂಚೂಣಿಯಲ್ಲಿರುತ್ತಾರೆ ಎಂದು ತಿಳಿಸಿದರು.

ಕೇರಳ ಕಾಂಗ್ರೆಸ್ ಪಕ್ಷದ ಭಾಗವಾಗಿರುವ ಅವರು ಚುನಾವಣೆಯ ಕಾರಣ ರಾಜ್ಯದಲ್ಲಿಯೂ ಹೆಚ್ಚು ಸಕ್ರಿಯರಾಗುತ್ತಾರೆ. ಮುಂದಿನ ಎರಡು ತಿಂಗಳು ಅವರು ಇಲ್ಲಿಯೇ ಇರುತ್ತಾರೆ. ಕೇರಳದ ಎಲ್ಲಾ 140 ವಿಧಾನಸಭಾ ಕ್ಷೇತ್ರಗಳಿಗೆ ಅವರನ್ನು ಕರೆದುಕೊಂಡು ಹೋಗಲು ಪಕ್ಷ ಯೋಜಿಸುತ್ತಿದೆ ಎಂದು ಅವರು ಹೇಳಿದರು.

ಕೊಚ್ಚಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ನನ್ನ ಹೆಸರು ಕರೆಯಲಿಲ್ಲ ಎಂದು ಅಸಮಾಧಾನಗೊಂಡಿದ್ದ ಶಶಿ ತರೂರ್ ಕೇರಳದ ಚುನಾವಣಾ ಕಾರ್ಯತಂತ್ರದ ಸಭೆಯಿಂದ ದೂರು ಉಳಿದಿದ್ದರು. ಭಾರತ-ಪಾಕಿಸ್ತಾನದ ಉದ್ವಿಗ್ನತೆಗಳ ಕುರಿತಾದ ಟೀಕೆಗಳಿಂದ ಕಳೆದ ವರ್ಷ ಟೀಕೆಗಳನ್ನು ಎದುರಿಸಿದ್ದರು.

ಆದರೂ ಪಕ್ಷದೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹೊಂದಿಸಿಕೊಂಡು ಉಭಯಪಕ್ಷೀಯ ವಿದೇಶಾಂಗ ನೀತಿಯನ್ನು ಬೆಂಬಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್