ವ್ಯಕ್ತಿಯೊಬ್ಬರ ಜೀವ ಕಾಪಾಡಿದ ನರ್ಸ್ ಗಳು 
ದೇಶ

ಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!

ಬೆಂಗಳೂರಿನ ನರ್ಸಿಂಗ್ ವಿದ್ಯಾರ್ಥಿನಿ ಆರ್ದ್ರಾ ರಾಜ್ ಮತ್ತು ಅಂಗಮಾಲಿಯ ಎಲ್‌ಎಫ್ ಆಸ್ಪತ್ರೆಯ ಸ್ಟಾಫ್ ನರ್ಸ್ ಅಂಜಲಿ ಬೈಜು ಅವರು ಬಸ್ ನಿಂದ ಜಿಗಿದು ಸಿಪಿಆರ್ ಮಾಡುವ ಮೂಲಕ 43 ವರ್ಷದ ವ್ಯಕ್ತಿಯ ಪ್ರಾಣವನ್ನು ರಕ್ಷಿಸಿದ್ದಾರೆ.

ಎರ್ನಾಕುಲಂ: ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು ಹೃದಯಾಘಾತದಿಂದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯೊಬ್ಬನ ಜೀವ ಕಾಪಾಡಿರುವ ಘಟನೆ ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರಿನ ನರ್ಸಿಂಗ್ ವಿದ್ಯಾರ್ಥಿನಿ ಆರ್ದ್ರಾ ರಾಜ್ ಮತ್ತು ಅಂಗಮಾಲಿಯ ಎಲ್‌ಎಫ್ ಆಸ್ಪತ್ರೆಯ ಸ್ಟಾಫ್ ನರ್ಸ್ ಅಂಜಲಿ ಬೈಜು ಅವರು ಬಸ್ ನಿಂದ ಜಿಗಿದು ಸಿಪಿಆರ್ ಮಾಡುವ ಮೂಲಕ 43 ವರ್ಷದ ವ್ಯಕ್ತಿಯ ಪ್ರಾಣವನ್ನು ರಕ್ಷಿಸಿದ್ದಾರೆ.

ಬುಧವಾರ ಬೆಳಿಗ್ಗೆ ಕಾಲಡಿ ಸೇತುವೆಯ ಬಳಿಯ ಎಂಸಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಒಕ್ಕಲ್ ಬಳಿಯ ತನ್ನಿಪುಳದಲ್ಲಿ ಲಾಟರಿ ಅಂಗಡಿ ನಡೆಸುತ್ತಿರುವ ಸಿನೋಜ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ತಾನೇ ಕಾರು ಚಲಾಯಿಸಿಕೊಂಡು ಆಸ್ಪತ್ರೆಗೆ ತೆರಳುತ್ತಿದ್ದಾಗ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ ಕಾರಿನ ಒಳಗಡೆ ಕುಸಿದು ಬಿದಿದ್ದಾರೆ. ಇದನ್ನು ನೋಡಿದ ಬಸ್ ನಲ್ಲಿದ್ದ ನರ್ಸ್ ಗಳು, ಕೂಡಲೇ ಜಿಗಿದು ಕಾರಿನ ಬಳಿ ಧಾವಿಸಿ CPR ಮಾಡಿದ್ದಾರೆ.

ಸಿನೋಜ್ ಅಂಗಮಾಲಿಯ ಆಸ್ಪತ್ರೆಗೆ ತಲುಪುವವರೆಗೂ ಇಬ್ಬರೂ ಕಾರಿನೊಳಗೆ ಸಿಪಿಆರ್ ಮುಂದುವರೆಸಿದ್ದಾರೆ. ಹೀಗಾಗಿ ಅವರು ಆಸ್ಪತ್ರೆಗೆ ಬರುವಷ್ಟರಲ್ಲಿ ಚೇತರಿಸಿಕೊಂಡಿದ್ದರು ಎಂದು ವೈದ್ಯರು ಹೇಳಿದ್ದಾರೆ. ಪರೀಕ್ಷೆಯ ನಂತರ ಅಪಧಮನಿ (coronary artery) ಬ್ಲಾಕ್ ಆಗಿರುವುದು ಕಂಡುಬಂದಿತು. ಕೂಡಲೇ ಅವರಿಗೆಆಂಜಿಯೋಪ್ಲ್ಯಾಸ್ಟಿ ಮಾಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಉನ್ನತ ವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸುವ ನಿರೀಕ್ಷೆಯಿದೆ.

ಸ್ಥಳೀಯ ನಿವಾಸಿಗಳಿಂದಲೂ ರಕ್ಷಣೆ ಸಾಧ್ಯವಾಯಿತು. ಸಿನೋಜ್ ಎದೆ ನೋವಿನಿಂದ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ ಎಂದು ತಿಳಿದ ನಂತರ ಪ್ರಯಾಣಿಕರೊಬ್ಬರು ಕಾರನ್ನು ಚಲಾಯಿಸಿದ್ದರೆ ಇತರರು ಆಂಬ್ಯುಲೆನ್ಸ್ ವ್ಯವಸ್ಥೆಗೆ ನೆರವಾಗಿದ್ದಾರೆ.

ನರ್ಸ್ ಗಳ ಸಕಾಲಿಕ ನೆರವು ವ್ಯಾಪಕ ಮೆಚ್ಚುಗೆಯನ್ನು ಗಳಿಸಿದೆ. ವ್ಯಕ್ತಿಯ ಪ್ರಾಣ ಉಳಿಸಿದ್ದಕ್ಕಾಗಿ ಅವರ ತ್ವರಿತ ಪ್ರತಿಕ್ರಿಯೆಯನ್ನು ಅನೇಕರು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ರಜಾಸೇವೆ ಇಲಾಖೆ ಆರಂಭ; ಕಲಬುರಗಿಯಲ್ಲಿ ಜವಳಿ, ದೇವನಳ್ಳಿಯಲ್ಲಿ ಏರೋ ಪಾರ್ಕ್ ಸ್ಥಾಪ​ಗೆ ಸಚಿವ ಸಂಪುಟ ಅಸ್ತು

ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಹೊಸ ಮಾರ್ಗಸೂಚಿ, ಅನಧಿಕೃತ ಮಾಹಿತಿ ಸೋರಿಕೆಗೆ ತಡೆ- ಪ್ರಿಯಾಂಕ್ ಖರ್ಗೆ

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ವೇತನ ಪರಿಷ್ಕರಣೆ ಈ ತಿಂಗಳಿನಿಂದಲೇ ಖಾತೆಗೆ ಜಮೆ!

ಬೇನಾಮಿ ಗುತ್ತಿಗೆದಾರರಿಗೆ ಲಾಭ ಆರೋಪ, ಲೋಕಾಯುಕ್ತಕ್ಕೆ ದೂರು: ನಿಷ್ಪಕ್ಷಪಾತ ತನಿಖೆಗೆ MLA ಎಸ್ ಸುರೇಶ್ ಕುಮಾರ್ ಆಗ್ರಹ!

ಸಂಸದರು, ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಿಢೀರ್ ದಾಳಿ: 2,700 ಕೋಟಿ ಮೌಲ್ಯದ ಚಿನ್ನ, ನಗದು ಪತ್ತೆ, ರಾಶಿ ರಾಶಿ ಹಣ ಕಂಡು ಅಧಿಕಾರಿಗಳೇ ದಂಗು!