ಉದ್ಧವ್ ಠಾಕ್ರೆ  
ದೇಶ

ರಾಮ ಮಂದಿರ ದೇಣಿಗೆ ಲೂಟಿ: ಜುಲೈ 5 ರಿಂದ ಮಹಾರಾಷ್ಟ್ರದಲ್ಲಿ 'ರಾಮ ರಕ್ಷಾ' ಪ್ರತಿಭಟನೆ ಘೋಷಿಸಿದ ಉದ್ಧವ್!

ಅಯೋಧ್ಯೆಯ ರಾಮ ಮಂದಿರ ದೇಣಿಗೆ ದುರುಪಯೋಗಕ್ಕೆ ಭಾರತೀಯ ಜನತಾ ಪಕ್ಷವನ್ನು ಹೊಣೆಗಾರರನ್ನಾಗಿ ಮಾಡಲು ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಉದ್ಧವ್ ಠಾಕ್ರೆ ಮನವಿ ಮಾಡಿದ್ದಾರೆ.

ಮುಂಬೈ: ಅಯೋಧ್ಯೆ ರಾಮ ಮಂದಿರ ದೇಣಿಗೆ "ಲೂಟಿ" ಖಂಡಿಸಿ ಶಿವಸೇನೆ-ಉದ್ಧವ್ ಬಾಳಾಸಾಹೇಬ್ ಠಾಕ್ರೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮಹಾರಾಷ್ಟ್ರದಲ್ಲಿ ಜುಲೈ 5 ರಿಂದ 'ರಾಮ ರಕ್ಷಾ' ಪ್ರತಿಭಟನೆ ನಡೆಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ.

ಅಯೋಧ್ಯೆಯ ರಾಮ ಮಂದಿರ ದೇಣಿಗೆ ದುರುಪಯೋಗಕ್ಕೆ ಭಾರತೀಯ ಜನತಾ ಪಕ್ಷವನ್ನು ಹೊಣೆಗಾರರನ್ನಾಗಿ ಮಾಡಲು ಜನ ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಉದ್ಧವ್ ಠಾಕ್ರೆ ಮನವಿ ಮಾಡಿದ್ದಾರೆ.

ಭಾನುವಾರ(ಜುಲೈ 5) ಮಧ್ಯ ಮುಂಬೈನ ದಾದರ್ ನಲ್ಲಿರುವ ಹನುಮಾನ್ ದೇವಾಲಯದಲ್ಲಿ ಸಭೆ ಸೇರಿ, ಹನುಮಾನ್ ಸ್ತೋತ್ರ ಮತ್ತು ಹನುಮಾನ್ ಚಾಲೀಸಾ ಪಠಿಸುವ ಮೂಲಕ ಪ್ರತಿಭಟನೆ ಆರಂಭಿಸುತ್ತೇವೆ. ಅಯೋಧ್ಯೆಯ ರಾಮ ಮಂದಿರದ ದೇಣಿಗೆ 'ಲೂಟಿ' ಹೊಣೆ ಹೊತ್ತುಕೊಳ್ಳುವಂತೆ ಬಿಜೆಪಿ ಮೇಲೆ ಒತ್ತಡ ಹೇರುತ್ತೇವೆ ಎಂದು ಠಾಕ್ರೆ ಹೇಳಿದರು.

"ರಾಮ ದೇವಾಲಯದಲ್ಲಿ ದೊಡ್ಡ ಪ್ರಮಾಣದ ಲೂಟಿ ನಡೆದಿದೆ ಎಂದು ಆರೋಪಿಸಿದ ಠಾಕ್ರೆ, ಎಲ್ಲರೂ ನಮ್ಮೊಂದಿಗೆ ಸೇರಿ ಬಿಜೆಪಿಯನ್ನು ಇದಕ್ಕೆ ಹೊಣೆಗಾರರನ್ನಾಗಿ ಮಾಡಬೇಕೆಂದು ನಾನು ಮನವಿ ಮಾಡುತ್ತೇನೆ" ಎಂದು ಸುದ್ದಿಗಾರರಿಗೆ ತಿಳಿಸಿದರು.

ದೇಶಾದ್ಯಂತ ಜನರು ಹಲವು ಕಷ್ಟಗಳನ್ನು ಎದುರಿಸುತ್ತಿದ್ದಾರೆ. ಕೇಂದ್ರದಲ್ಲಿ ಮತ್ತು ಹಲವಾರು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೂ ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಮತ್ತು 'ಉದಾಸೀನತೆ' ಪ್ರದರ್ಶಿಸುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.

ಅವಿಭಜಿತ ಶಿವಸೇನೆಯ ಸದಸ್ಯರು ಸೇರಿದಂತೆ ಅನೇಕ ಹಿಂದೂಗಳು ರಾಮ ಮಂದಿರ ಚಳವಳಿಯಲ್ಲಿ ಭಾಗವಹಿಸಿದ್ದರು ಮತ್ತು ಕರಸೇವಕರ ಮೇಲಿನ ದೌರ್ಜನ್ಯ, ಗೋಧ್ರಾ ರೈಲು ದುರಂತ, ಅಹಮದಾಬಾದ್ ಗಲಭೆ ಮತ್ತು ಮುಂಬೈ ಸರಣಿ ಬಾಂಬ್ ಸ್ಫೋಟಗಳು ಸೇರಿದಂತೆ ಹಲವು ಸಂಕಷ್ಟಗಳನ್ನು ಎದುರಿಸಿದ್ದಾರೆ. ಆದರೆ ಬಿಜೆಪಿ ಈ ಘಟನೆಗಳನ್ನು ರಾಜಕೀಯ ಬಂಡವಾಳ ಮಾಡಿಕೊಂಡು ಈಗ 'ಅನಿಯಂತ್ರಿತ ಅಧಿಕಾರ'ವನ್ನು ಅನುಭವಿಸುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!

Voter ID, PAN.. ಪೌರತ್ವ ಸಾಬೀತಿಗೆ ಸಲ್ಲಿಸಿದ್ದ 16 ದಾಖಲೆಗಳನ್ನೂ ತಿರಸ್ಕರಿಸಿದ ಹೈಕೋರ್ಟ್: ನ್ಯಾಯಾಧೀಶರು ಹೇಳಿದ್ದೇನು?

Uttar Pradesh: ಟೋಲ್ ಡಿವೈಡರ್ ಗೆ LPG ಟ್ಯಾಂಕರ್ ಢಿಕ್ಕಿ, ಸ್ಫೋಟ ಕನಿಷ್ಠ 4 ಸಜೀವ ದಹನ, Video Viral

ಚಿಕ್ಕಬಳ್ಳಾಪುರ: ಕ್ವಾರಿಯಲ್ಲಿ ಡ್ರಿಲ್ಲಿಂಗ್ ವೇಳೆ ಸ್ಫೋಟ, ಕಾರ್ಮಿಕ ಸಾವು, Video

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!