ರೇಣುಕಾ 
ದೇಶ

ಹೈದರಾಬಾದ್‌: ಬಾಯ್​ಫ್ರೆಂಡ್​ಗೆ ವಿಡಿಯೋ ಕಾಲ್ ಮಾಡಿ ಹೋಟೆಲ್‌ನಲ್ಲೇ ವಿವಾಹಿತ ಯುವತಿ ಆತ್ಮಹತ್ಯೆ!

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಅಲ್ವಾಲ್ ನಿವಾಸಿ ರೇಣುಕಾ ಎಂದು ಗುರುತಿಸಲಾಗಿದೆ. ಈ ಯುವತಿ ವಿವಾಹಿತಳಾಗಿದ್ದು, ಆಕೆಗೆ ಒಂದು ಮಗು ಸಹ ಇದೆ.

ಹೈದರಾಬಾದ್: ಹೈದರಾಬಾದ್‌ನ ಹೋಟೆಲ್ ಕೋಣೆಯಲ್ಲಿ 26 ವರ್ಷದ ಯುವತಿಯೊಬ್ಬರು ಶವವಾಗಿ ಪತ್ತೆಯಾಗಿದ್ದು, ಸಾವಿಗೂ ಮುನ್ನ ತನ್ನ ಸ್ನೇಹಿತನಿಗೆ ವಿಡಿಯೋ ಕಾಲ್ ಮಾಡಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಅಲ್ವಾಲ್ ನಿವಾಸಿ ರೇಣುಕಾ ಎಂದು ಗುರುತಿಸಲಾಗಿದೆ. ಈ ಯುವತಿ ವಿವಾಹಿತಳಾಗಿದ್ದು, ಆಕೆಗೆ ಒಂದು ಮಗು ಸಹ ಇದೆ. ನಗರದ ರೆಸ್ಟೋರೆಂಟ್ ಹಾಗೂ ಪಬ್‌ನ ಉದ್ಯೋಗಿಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ತನಿಖಾಧಿಕಾರಿಗಳ ಪ್ರಕಾರ, ರೇಣುಕಾ ಬುಧವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೈದರಾಬಾದ್‌ನ ಲಂಗರ್ ಹೌಜ್ ಪ್ರದೇಶದ ಹೋಟೆಲ್‌ಗೆ ಒಬ್ಬ ವ್ಯಕ್ತಿಯೊಂದಿಗೆ ಬಂದಿದ್ದರು. ಗುರುವಾರ ರಾತ್ರಿ ಸುಮಾರು 10.30ಕ್ಕೆ ಆ ವ್ಯಕ್ತಿ ಹೋಟೆಲ್‌ನಿಂದ ಹೊರಟುಹೋದರೆ, ರೇಣುಕಾ ಆ ಕೋಣೆಯಲ್ಲಿಯೇ ಇದ್ದರು.

ಹೋಟೆಲ್ ದಾಖಲೆಗಳ ಪ್ರಕಾರ, ಯುವತಿ ನಿನ್ನೆ ರಾತ್ರಿ 11.56 ರ ಸುಮಾರಿಗೆ ಊಟಕ್ಕೆ ಆರ್ಡರ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ, ಆಕೆ ತನ್ನ ಸ್ನೇಹಿತನಿಗೆ ವಿಡಿಯೋ ಕಾಲ್ ಮಾಡಿ ಕರೆಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

"ಮಹಿಳೆ ತನ್ನ ಸ್ನೇಹಿತ ಸತ್ಯ ಜೊತೆ ರಾತ್ರಿ 12.24 ರ ಸುಮಾರಿಗೆ ವಿಡಿಯೋ ಕರೆಯಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಬುಧವಾರ ಬೆಳಗ್ಗೆ ಅವರು ಒಬ್ಬ ವ್ಯಕ್ತಿಯೊಂದಿಗೆ ಹೋಟೆಲ್‌ಗೆ ಬಂದಿದ್ದರು" ಎಂದು ಲಂಗರ್ ಹೌಜ್ ಸಬ್-ಇನ್ಸ್‌ಪೆಕ್ಟರ್ (ಎಸ್‌ಐ) ಸೈಯದ್ ಮುನ್ವರ್ ಅಲಿ ತಿಳಿಸಿದ್ದಾರೆ.

ಹೋಟೆಲ್ ಸಿಬ್ಬಂದಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ತಂಡ ಹೋಟೆಲ್‌ಗೆ ಧಾವಿಸಿ, ಪ್ರಾಥಮಿಕ ತಪಾಸಣೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದೆ.

ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಹೋಟೆಲ್‌ನಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸುತ್ತಿದ್ದಾರೆ. ಮಹಿಳೆಯ ಮೊಬೈಲ್ ಫೋನ್ ಅನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಆಕೆಯ ಸಾವಿಗೆ ಕಾರಣವಾದ ಘಟನೆಗಳ ಕುರಿತು ಅವರೊಂದಿಗೆ ಇದ್ದ ವ್ಯಕ್ತಿಯನ್ನು ಪ್ರಶ್ನಿಸುತ್ತಿದ್ದಾರೆ.

"ಪ್ರಕರಣ ದಾಖಲಿಸಲಾಗಿದ್ದು, ನಾವು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದೇವೆ. ಮಹಿಳೆಯ ಸಾವಿನ ಹಿಂದಿನ ನಿಖರವಾದ ಕಾರಣ, ತನಿಖೆ ಪೂರ್ಣಗೊಂಡ ನಂತರವೇ ತಿಳಿಯಲಿದೆ" ಎಂದು ಎಸ್‌ಐ ಅಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಸುಪ್ರೀಂ ಕೋರ್ಟ್ ಶಾಕ್‌; ʻದಾಸʼನಿಗೆ 1 ವರ್ಷ ಜೈಲೇ ಗತಿ!

ಅಕ್ರಮವಾಗಿ ಮಸೀದಿಗಳಲ್ಲಿ SIR: ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು; ವಿಡಿಯೋ ರಿಲೀಸ್‌

ದಾವಣಗೆರೆ: ಕಲ್ಲಿನಿಂದ ತಲೆ ಜಜ್ಜಿ ಬರ್ಬರವಾಗಿ ಪತಿ ಹತ್ಯೆಗೈದ ಪತ್ನಿ; ಸಾಥ್​ ನೀಡಿದ ಪುತ್ರ! ಇಲ್ಲಿದೆ ಕಾರಣ...

ಶಾಂತಿ ಮಾತುಕತೆಗೆ ಅಡ್ಡಿ: Iran ಸಂಧಾನಕಾರರ ಹತ್ಯೆಗೆ Israel ಭಾರೀ ಸಂಚು; ಮಧ್ಯಪ್ರಾಚ್ಯ ರಾಷ್ಟ್ರಗಳ ಮೂಲಕ ಎಚ್ಚರಿಕೆ ರವಾನಿಸಿದ ಅಮೆರಿಕಾ..!

Voter ID, PAN.. ಪೌರತ್ವ ಸಾಬೀತಿಗೆ ಸಲ್ಲಿಸಿದ್ದ 16 ದಾಖಲೆಗಳನ್ನೂ ತಿರಸ್ಕರಿಸಿದ ಹೈಕೋರ್ಟ್: ನ್ಯಾಯಾಧೀಶರು ಹೇಳಿದ್ದೇನು?