ನಿತೀಶ್ ಕುಮಾರ್ 
ದೇಶ

ಸಂಪುಟ ಪುನಾರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ: ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ?

ನಿತೀಶ್ ಕುಮಾರ್ ಅವರ ದೀರ್ಘಾವಧಿಯ ಆಡಳಿತ ಮತ್ತು ಅನುಭವವನ್ನು ಗಮನದಲ್ಲಿಟ್ಟುಕೊಂಡು, ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತಂದು ಉಪ ಪ್ರಧಾನಿ ಪಟ್ಟ ನೀಡಬೇಕೆಂಬ ಕೂಗು ಹೆಚ್ಚಾಗಿದೆ.

ನವದೆಹಲಿ: ಕೇಂದ್ರ ಸಂಪುಟ ವಿಸ್ತರಣೆ ವದಂತಿ ನಡುವೆಯೇ ಬಿಹಾರ ಮಾಜಿ ಸಿಎಂ ನಿತೀಶ್‌ ಕುಮಾರ್‌ ಉಪ­ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂಬ ವರದಿಗಳೂ ಹರಿದಾಡುತ್ತಿವೆ.

ಅದರಂತೆ ಜೆಡಿಯು ಅಷ್ಟೇ ಅಲ್ಲದೇ ಬಿಹಾರದ ವಿಪಕ್ಷ ಆರ್‌ಜೆಡಿ ಸಹ ನಿತೀಶ್‌ ಉಪಪ್ರಧಾನಿ ಆಗಲಿ ಎಂದು ಆಗ್ರಹಿಸಿದೆ. ಈ ಬಗ್ಗೆ ಮಾತನಾಡಿರುವ ಜೆಡಿಯು ಶಾಸಕ ಪಂಕಜ್ ಮಿಶ್ರಾ, ನಿತೀಶ್‌ ಈಗಾಗಲೇ ಕೇಂದ್ರದಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಹಾಗಾಗಿ ಅವರಿಗೆ ಉಪಪ್ರಧಾನಿ ಹುದ್ದೆಯನ್ನು ನೀಡಬೇಕು. ಅದು ಅವರಿಗೆ ನೀಡುವ ಸರಿಯಾದ ಗೌರವವಾಗಿದೆ ಎಂದು ಹೇಳಿದ್ದಾರೆ. ನಿತೀಶ್ ಕುಮಾರ್ ಅವರ ದೀರ್ಘಾವಧಿಯ ಆಡಳಿತ ಮತ್ತು ಅನುಭವವನ್ನು ಗಮನದಲ್ಲಿಟ್ಟುಕೊಂಡು, ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತಂದು ಉಪ ಪ್ರಧಾನಿ ಪಟ್ಟ ನೀಡಬೇಕೆಂಬ ಕೂಗು ಹೆಚ್ಚಾಗಿದೆ.

ಆರ್‌ಜೆಡಿ ನಾಯಕ ಮುಕೇಶ್ ರೋಷನ್ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಸಹ ನಿತೀಶ್ ಕುಮಾರ್ ಅವರಿಗೆ ಈ ಸ್ಥಾನ ನೀಡಬೇಕೆಂದು ಒತ್ತಾಯಿಸಿದ್ದಾರೆ. ಆದರೆ, ಆಡಳಿತಾರೂಢ ಬಿಜೆಪಿಯ ನಾಯಕರು ಇದುವರೆಗೂ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.

ನಿತೀಶ್ ಕುಮಾರ್ ಅವರನ್ನು ಉಪ ಪ್ರಧಾನಿಯಾಗಿ ನೇಮಿಸಬೇಕು. ಬಿಹಾರದ ಜನರು ಸಹ ಇದನ್ನು ಬೆಂಬಲಿಸುತ್ತಾರೆ ಎಂದು ಅವರು ಪ್ರತಿಪಾದಿಸಿದ್ದಾರೆ. ನಿತೀಶ್ ಕುಮಾರ್ ಸುಮಾರು ಎರಡು ದಶಕಗಳ ಕಾಲ ಬಿಹಾರ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯವನ್ನು ಮುನ್ನಡೆಸುವ ಮೊದಲು ಕೇಂದ್ರ ಸಚಿವರಾಗಿಯೂ ಕೆಲಸ ಮಾಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗುಡ್‌ನ್ಯೂಸ್: Fuel surcharge ಇಳಿಸಿದ Air India; ವಿಮಾನ ಟಿಕೆಟ್ ದರವೂ ಇಳಿಕೆ ಸಾಧ್ಯತೆ..!

ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?

ಅಮೆರಿಕವೇ ಹೆಚ್ಚು ಖರ್ಚು ಮಾಡುತ್ತಿದ್ದರೂ ಕಷ್ಟದ ಸಮಯದಲ್ಲಿ ಕೈಕೊಟ್ಟರು: ಏಕಪಕ್ಷೀಯ ಸಂಬಂಧ ಮುಂದುವರಿಸುವುದು ಹಾಸ್ಯಾಸ್ಪದ: NATO ವಿರುದ್ಧ ಟ್ರಂಪ್‌ ಆಕ್ರೋಶ

'ಇರಾನ್ ಸಂಪೂರ್ಣ ಮಣಿದಿದೆ', 'ನಮಗೆ ಬೇಕಿದ್ದ ಬಹುತೇಕ ಎಲ್ಲ ಷರತ್ತುಗಳಿಗೆ ಒಪ್ಪಿದೆ': ಟ್ರಂಪ್‌ ಮಹತ್ವದ ಹೇಳಿಕೆ

ಜುಲೈ 4ರಿಂದ ಅಲಿ ಖಮೇನಿ ಅಂತಿಮ ವಿಧಿವಿಧಾನ: ಲಕ್ಷಾಂತರ ಜನರು ಭಾಗವಹಿಸುವ ನಿರೀಕ್ಷೆ, ಭದ್ರತಾ ಕಾರಣಕ್ಕೆ ಪುತ್ರ ಮೊಜ್ತಬಾ ಗೈರು..!