ಅಮಿತ್ ಶಾ 
ದೇಶ

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಮುಂಗಾರು ಅಧಿವೇಶನಕ್ಕೂ ಮುನ್ನ ಅಂದರೆ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ನವದೆಹಲಿ: ಸದ್ಯದಲ್ಲೇ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪ ಪ್ರಧಾನಿಯಾಗಲಿದ್ದಾರೆ ಎಂದು ವರದಿಯೊಂದು ತಿಳಿಸಿದೆ.

ಮುಂಗಾರು ಅಧಿವೇಶನಕ್ಕೂ ಮುನ್ನ ಅಂದರೆ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಗಮನದಲ್ಲಿಟ್ಟುಕೊಂಡು ಸಚಿವ ಸಂಪುಟ ಪುನರ್ ರಚನೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸಚಿವ ಸಂಪುಟ ಪುನರ್ ರಚನೆ ಪ್ರಕ್ರಿಯೆಯಲ್ಲಿ 'ಆಪರೇಷನ್ ಟೈಗರ್ ' ಯಶಸ್ಸಿನ ಹಿಂದಿನ ನಾಯಕನಿಗೆ ಪದೋನ್ನತಿ ನೀಡುವ ನಿರೀಕ್ಷೆಯಿದೆ ಎಂದು ಮರಾಠಿ ಮಾಧ್ಯಮ ವರದಿ ಮಾಡಿದೆ.

ಎನ್ ಡಿಎ ಸರ್ಕಾರದಲ್ಲಿ ಶಿವಸೇನಾ ಶಿಂಧೆ ಬಣದ ಬಲವನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಶ್ರೀಕಾಂತ್ ಶಿಂಧೆ, ಓಂರಾಜೆ ನಿಂಬಾಳ್ಕರ್ ಮತ್ತು ಸಂಜಯ್ ಬಂದು ಜಾಧವ್ ಅವರಿಗೆ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಪುತ್ರನಾಗಿರುವ ಶ್ರೀಕಾಂತ್ ಶಿಂಧೆ ಆಪರೇಷನ್ ಟೈಗರ್ ಹಿಂದಿನ ಮಾಸ್ಟರ್ ಮೈಂಡ್ ಎನ್ನಲಾಗುತ್ತಿದೆ. ಈ ಕಾರ್ಯಾಚರಣೆಯಲ್ಲಿ ಏಳು ಸಂಸದರು ಉದ್ಧವ್ ಠಾಕ್ರೆ ಬಣ ತೊರೆದು ಎನ್ ಡಿಎ ಮೈತ್ರಿ ಪಕ್ಷವಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾಗೆ ಇತ್ತೀಚಿಗೆ ಸೇರ್ಪಡೆಯಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!