ಚಂದ್ರಿಮಾ ಭಟ್ಟಾಚಾರ್ಯ 
ದೇಶ

ದೀದಿಗೆ ಮತ್ತೊಂದು ಶಾಕ್; ಮಮತಾ ಬಣದ TMC ರಾಜ್ಯಾಧ್ಯಕ್ಷೆ ಸ್ಥಾನಕ್ಕೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ!

ಜೂನ್ 5 ರಂದು ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಹಿರಿಯ ನಾಯಕ ಸುಬ್ರತಾ ಬಕ್ಷಿ ಅವರ ಬದಲಿಗೆ ಭಟ್ಟಾಚಾರ್ಯ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ (TMC) ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, ಪಕ್ಷದ ಬಂಗಾಳ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ಅವರು ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಹೀನಾಯ ಸೋಲನ್ನು ಅನುಭವಿಸಿದ ನಂತರ, ಅವರಿಗೆ ಪ್ರಮುಖ ಸಾಂಸ್ಥಿಕ ಜವಾಬ್ದಾರಿಯನ್ನು ವಹಿಸಿಕೊಟ್ಟ ಒಂದು ತಿಂಗಳಲ್ಲೇ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ತೃಣಮೂಲ ಕಾಂಗ್ರೆಸ್ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ಭಟ್ಟಾಚಾರ್ಯ ಅವರು, ಪಕ್ಷದಲ್ಲಿ ತಾವು ಹೊಂದಿದ್ದ ಇತರ ಎಲ್ಲ ಹುದ್ದೆಗಳಿಗೂ ರಾಜೀನಾಮೆ ನೀಡಿದ್ದಾರೆ. ಇದು ಅವರು ಪಕ್ಷದೊಂದಿಗಿನ ತಮ್ಮ ಸಂಬಂಧವನ್ನು ಕಡಿದುಕೊಂಡಿದ್ದಾರೆಯೇ ಎಂಬ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.

ಮಮತಾ ಬ್ಯಾನರ್ಜಿ ಅವರ ಹಿಂದಿನ ಸರ್ಕಾರದಲ್ಲಿ ಹಣಕಾಸು ಮತ್ತು ಆರೋಗ್ಯದಂತಹ ಪ್ರಮುಖ ಇಲಾಖೆಗಳ ರಾಜ್ಯ ಸಚಿವೆಯಾಗಿದ್ದ ಹಾಗೂ ಪಕ್ಷದ ಮಹಿಳಾ ವಿಭಾಗವನ್ನು ಮುನ್ನಡೆಸಿದ ಭಟ್ಟಾಚಾರ್ಯ ಅವರು, ವಿವಿಧ ಬ್ಯಾಂಕ್‌ಗಳಲ್ಲಿರುವ ಪಕ್ಷದ ಖಾತೆಗಳಿಗೆ ಸಂಬಂಧಿಸಿದ ಅಧಿಕೃತ ಸಹಿದಾರರಾಗಿ ಹಾಗೂ ಚುನಾವಣಾ ಆಯೋಗದ ಮುಂದೆ ಹಾಜರಾಗಲು ಮಮತಾ ಬ್ಯಾನರ್ಜಿ ಅವರ ಅಧಿಕೃತ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸುವ ಜವಾಬ್ದಾರಿಯಿಂದಲೂ ಹಿಂದೆ ಸರಿದಿದ್ದಾರೆ.

ಜೂನ್ 5 ರಂದು ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ, ಹಿರಿಯ ನಾಯಕ ಸುಬ್ರತಾ ಬಕ್ಷಿ ಅವರ ಬದಲಿಗೆ ಭಟ್ಟಾಚಾರ್ಯ ಅವರನ್ನು ರಾಜ್ಯ ಅಧ್ಯಕ್ಷರನ್ನಾಗಿ ನೇಮಿಸಲಾಗಿತ್ತು.

ಮೂರು ಬಾರಿ ಶಾಸಕರಾಗಿದ್ದ ಭಟ್ಟಾಚಾರ್ಯ ಅವರು, 2026ರ ವಿಧಾನಸಭಾ ಚುನಾವಣೆಯಲ್ಲಿ ಡಮ್ ಡಮ್ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿಯ ಸೌರವ್ ಸಿಕ್ದಾರ್ ವಿರುದ್ಧ ಸೋಲು ಕಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸದ್ಯದಲ್ಲೇ ಮೋದಿ ಸಂಪುಟ ಪುನರ್ ರಚನೆ: ಅಮಿತ್ ಶಾಗೆ ಉಪ ಪ್ರಧಾನಿ ಪಟ್ಟ? ವರದಿಗಳು

ಶ್ರೀರಂಗಪಟ್ಟಣದಲ್ಲಿ ಬೃಹತ್ ಭೂ ಹಗರಣ: ಬರೋಬ್ಬರಿ 200 ಎಕರೆ ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ; 9 ಜನರ ಬಂಧನ!

Video: ವಿಶ್ವದ ಹಲವು ದೇಶಗಳು ಯುವಕರಿಗೆ ತರಬೇತಿ ನೀಡಲು RSS ಸಹಕಾರ ಕೇಳುತ್ತಿವೆ: ಮೋಹನ್ ಭಾಗವತ್

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಅಯೋಧ್ಯೆ ರಾಮಮಂದಿರ ಬಳಿಕ ಬದರಿನಾಥ ದೇವಾಲಯದಲ್ಲೂ ದೇಣಿಗೆ ಕಳ್ಳತನ ಆರೋಪ, ತನಿಖೆಗೆ ಆದೇಶ!