ಮೆಟಾಗೆ ಕೇಂದ್ರ ಸರ್ಕಾರದ ನೋಟಿಸ್ 
ದೇಶ

Instagramನಲ್ಲಿ CSEAM ಜಾಹೀರಾತು ವಿವಾದ: Meta ವಿರುದ್ಧ ಕೇಂದ್ರದ ಕಠಿಣ ಕ್ರಮ, 7 ದಿನಗಳೊಳಗೆ ಉತ್ತರಿಸುವಂತೆ ನೋಟಿಸ್ ಜಾರಿ..!

ಈ ಸಂಬಂಧ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) Metaಗೆ ನೋಟಿಸ್ ಜಾರಿ ಮಾಡಿ, ಏಳು ದಿನಗಳೊಳಗೆ ಸಮಗ್ರ ವಿವರಣೆ ನೀಡುವಂತೆ ಸೂಚಿಸಿದೆ.

ನವದೆಹಲಿ: Instagramನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ (CSEAM) ಸಂಬಂಧಿಸಿದ ವಿಷಯಗಳನ್ನು ಪ್ರಚಾರ ಮಾಡುವ ಪಾವತಿಸಿದ ಜಾಹೀರಾತುಗಳು ಪ್ರಸಾರವಾಗಿವೆ ಎಂಬ ಗಂಭೀರ ಆರೋಪದ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ Meta ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ.

ಈ ಸಂಬಂಧ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) Metaಗೆ ನೋಟಿಸ್ ಜಾರಿ ಮಾಡಿ, ಏಳು ದಿನಗಳೊಳಗೆ ಸಮಗ್ರ ವಿವರಣೆ ನೀಡುವಂತೆ ಸೂಚಿಸಿದೆ.

ಅಲ್ಲದೆ, ಇಂತಹ ಜಾಹೀರಾತುಗಳು ಹೇಗೆ ಅನುಮೋದನೆ ಪಡೆದವು ಮತ್ತು ಅವುಗಳನ್ನು ತಡೆಯಲು ಕಂಪನಿಯು ಯಾವ ಭದ್ರತಾ ವ್ಯವಸ್ಥೆಗಳನ್ನು ಜಾರಿಗೊಳಿಸಿದೆ ಎಂಬ ಬಗ್ಗೆ Meta ಅಧಿಕಾರಿಗಳಿಂದ ಸ್ಪಷ್ಟನೆ ಪಡೆಯಲು ಸಚಿವಾಲಯ ಮುಂದಾಗಿದೆ.

ಅಲ್ಲದೆ, ನೋಟಿಸ್‌ನಲ್ಲಿ Instagramನಲ್ಲಿ ಮಕ್ಕಳ ಲೈಂಗಿಕ ಶೋಷಣೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಚಾರ ಮಾಡುವ ಅಥವಾ ಅಂತಹ ವಿಷಯಗಳಿಗೆ ಪ್ರವೇಶ ಕಲ್ಪಿಸುವ ಎಲ್ಲಾ ಜಾಹೀರಾತುಗಳು ಹಾಗೂ ವಿಷಯಗಳನ್ನು ತಕ್ಷಣವೇ ತೆಗೆದುಹಾಕುವಂತೆ ನಿರ್ದೇಶಿಸಿದೆ.

ಮೂಲಗಳ ಪ್ರಕಾರ, ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು Meta ಅಧಿಕಾರಿಗಳನ್ನು ಸಚಿವಾಲಯದ ಮುಂದೆ ಹಾಜರಾಗುವಂತೆ ಸೂಚಿಸಿದ್ದು, ಇಂತಹ ಜಾಹೀರಾತುಗಳು Instagramನಲ್ಲಿ ಹೇಗೆ ಪ್ರಸಾರವಾದವು ಹಾಗೂ ಇವುಗಳನ್ನು ತಡೆಯಲು ಕಂಪನಿಯು ಯಾವ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ವಿವರಣೆ ನೀಡುವಂತೆ ಆದೇಶಿಸಿದ್ದಾರೆಂದು ತಿಳಿದುಬಂದಿದೆ.

ನೋಟಿಸ್ ಹಿನ್ನೆಲೆಯಲ್ಲಿ Facebook, Instagram ಹಾಗೂ WhatsAppಗೆ ಮಾಲೀಕತ್ವ ಹೊಂದಿರುವ Meta ಸಂಸ್ಥೆಯು, ತನ್ನ ಕಂಟೆಂಟ್ ಮಾಡರೇಷನ್ ವ್ಯವಸ್ಥೆ, ಜಾಹೀರಾತು ಪರಿಶೀಲನಾ ಪ್ರಕ್ರಿಯೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಟೆಂಟ್ ಗಳನ್ನು ಪತ್ತೆಹಚ್ಚಿ, ತೆಗೆದುಹಾಕಲು ಮತ್ತು ತಡೆಯಲು ಅನುಸರಿಸುತ್ತಿರುವ ಕ್ರಮಗಳ ಕುರಿತು ವಿವರಿಸಬೇಕಾಗಿದೆ.

ಇದೇ ವೇಳೆ, ಅಕ್ರಮ ಹಾಗೂ ಹಾನಿಕಾರಕ ಕಟೆಂಟ್ ಗಳ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸಲು ಕಂಪನಿ ಕೈಗೊಂಡಿರುವ ಹೆಚ್ಚುವರಿ ಕ್ರಮಗಳ ಮಾಹಿತಿಯನ್ನೂ ಸಚಿವಾಲಯ ಕೇಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈ ನಡುವೆ Meta ಈ ವಿಷಯದ ಕುರಿತು ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ಈ ಹಿಂದೆ ಭಾರತದಲ್ಲಿ WhatsApp ಬಳಕೆದಾರರ Username ವೈಶಿಷ್ಟ್ಯದ ಜಾರಿಯನ್ನು ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿತ್ತು.

ಈ ಕುರಿತು ಪ್ರತಿಕ್ರಿಯಿಸಿದ್ದ WhatsApp, Username ವೈಶಿಷ್ಟ್ಯವು ಐಚ್ಛಿಕವಾಗಿರಲಿದೆ ಎಂದು ತಿಳಿಸಿದ್ದು, ನಕಲಿ ಗುರುತು ಸೃಷ್ಟಿ (Impersonation), ವಂಚನೆ ಹಾಗೂ ಅನಗತ್ಯ ಸಂಪರ್ಕಗಳನ್ನು ತಡೆಯಲು ಹಲವು ಭದ್ರತಾ ವ್ಯವಸ್ಥೆಗಳನ್ನು ಅಳವಡಿಸಲಾಗಿದೆ ಎಂದು ಹೇಳಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Basmati ಅಕ್ಕಿ ಭಾರತಕ್ಕೆ ಮಾತ್ರ ಸೀಮಿತವಲ್ಲ: ವಿಶೇಷ ಟ್ರೇಡ್‌ಮಾರ್ಕ್ ನೀಡಲು ಆಸ್ಟ್ರೇಲಿಯಾ ಕೋರ್ಟ್ ನಕಾರ, ರಫ್ತುದಾರರಲ್ಲಿ ಹೆಚ್ಚಿದ ಆತಂಕ

ಕೇರಳದ 19 ವರ್ಷದ ವಿದ್ಯಾರ್ಥಿನಿ ಮುಡಿಗೆ 'ಮಿಸ್ ಯೂನಿವರ್ಸ್ ಇಂಡಿಯಾ 2026' ಕಿರೀಟ; ಯಾರು ಈ ಅತಿಲೋಕ ಸುಂದರಿ?

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!