ಬಂಧಿತ ಆರೋಪಿಗಳು 
ದೇಶ

ರಾಮನಗರ: ಹೋಂ ಸ್ಟೇ, ರೆಸಾರ್ಟ್‌ ಹೆಸರಲ್ಲಿ ಹೈಟೆಕ್ ಸೆಕ್ಸ್​ ದಂಧೆ; 10 ಯುವತಿಯರ ರಕ್ಷಣೆ, 52 ಜನರ ಬಂಧನ

ರಾಮನಗರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ, ರೆಸಾರ್ಟ್ ನಲ್ಲಿ ಅಪ್ರಾಪ್ತ ಬಾಲಕಿಯರು ಸೇರಿದಂತೆ 10 ಮಹಿಳೆಯರನ್ನು ರಕ್ಷಿಸಿದ್ದಾರೆ ಮತ್ತು 52 ಜನರನ್ನು ಬಂಧಿಸಿ, ರೆಸಾರ್ಟ್ ಅನ್ನು ಸೀಜ್ ಮಾಡಲಾಗಿದೆ.

ರಾಮನಗರ: ವಿಶ್ವವಿಖ್ಯಾತ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಉತ್ತರಾಖಂಡದ ರಾಮನಗರದಲ್ಲಿ ಐಷಾರಾಮಿ ರೆಸಾರ್ಟ್ ಹಾಗೂ ಹೋಂ ಸ್ಟೇ ಹೆಸರಿನಲ್ಲಿ ನಡೆಯುತ್ತಿದ್ದ ಹೈಟೆಕ್​ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬಯಲು ಮಾಡಿದ್ದು, 52 ಜನರನ್ನು ಬಂಧಿಸಿದ್ದಾರೆ.

ಮಾನವ ಕಳ್ಳಸಾಗಣೆ ವಿರೋಧಿ ಘಟಕ(AHTU), ವಿಶೇಷ ಕಾರ್ಯಾಚರಣೆ ಗುಂಪು(SOG) ಮತ್ತು ರಾಮನಗರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ರೆಸಾರ್ಟ್ ಮೇಲೆ ದಾಳಿ ನಡೆಸಿ, ಅಪ್ರಾಪ್ತ ಬಾಲಕಿಯರು ಸೇರಿದಂತೆ 10 ಮಹಿಳೆಯರನ್ನು ರಕ್ಷಿಸಿದ್ದಾರೆ ಮತ್ತು 52 ಜನರನ್ನು ಬಂಧಿಸಿ, ರೆಸಾರ್ಟ್ ಅನ್ನು ಸೀಜ್ ಮಾಡಲಾಗಿದೆ.

ಪೊಲೀಸರ ಪ್ರಕಾರ, ವಿವಿಧ ರಾಜ್ಯಗಳು ಮತ್ತು ವಿದೇಶಗಳಿಂದ ಕರೆತರಲಾದ ಮಹಿಳೆಯರನ್ನು ಒಳಗೊಂಡ ಸಂಘಟಿತ ವೇಶ್ಯಾವಾಟಿಕೆ ಜಾಲವನ್ನು ನಡೆಸಲು ರೆಸಾರ್ಟ್ ಅನ್ನು ಬಳಸಲಾಗುತ್ತಿದೆ ಎಂಬ ಖಚಿತ ಮಾಹಿತಿ ದೊರೆತ ನಂತರ ಈ ದಾಳಿ ನಡೆಸಲಾಗಿದೆ.

ಪೊಲೀಸ್ ತಂಡ ಬಂದಾಗ ಮದ್ಯ ಪಾರ್ಟಿ ನಡೆಯುತ್ತಿತ್ತು, ಅತಿಥಿಗಳು ಮಹಿಳೆಯರ ಮೇಲೆ ನೋಟುಗಳನ್ನು ಎಸೆಯುತ್ತಿದ್ದರು ಮತ್ತು ಅವರಿಗೆ ಅಶ್ಲೀಲ ನೃತ್ಯಗಳನ್ನು ಪ್ರದರ್ಶಿಸಲು ಒತ್ತಾಯಿಸಲಾಗುತ್ತಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಆವರಣದಿಂದ ಆಕ್ಷೇಪಾರ್ಹ ವಸ್ತುಗಳು ಮತ್ತು ಇತರ ಪುರಾವೆಗಳನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಪಾರ್ಟಿಯನ್ನು ಮೀರತ್​ನ ಉದ್ಯಮಿ ಉಮೇಂದ್ರ ಕುಮಾರ್​ ಎಂಬಾತ ಆಯೋಜನೆ ಮಾಡಿದ್ದ ಎಂದು ತಿಳಿದು ಬಂದಿದ್ದು, ಪ್ರತಿ ಮಹಿಳೆಯರಿಗೆ ಹತ್ತು ಸಾವಿರ ರೂಪಾಯಿ ನೀಡಲಾಗಿತ್ತು ಎಂದು ಹೇಳಲಾಗುತ್ತಿದೆ. ಈ ಪಾರ್ಟಿಗೆ ಜುಲೈ 4 ಮತ್ತು 5 ರಂದು ಬುಕ್ಕಿಂಗ್​ ಪ್ರಾರಂಭಿಸಲಾಗಿದ್ದು ಎರಡು ದಿನಗಲ್ಲಿ ಸುಮಾರು 2.25 ಲಕ್ಷ ಕಲೆಕ್ಷನ್​ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 52 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ. ಬಂಧಿತರ ಮೇಲೆ ಅಕ್ರಮ ಮಾನವ ಕಳ್ಳಸಾಗಾಣಿಕೆ, ಪೊಕ್ಸೊ ಹಾಗೂ ಅಬಕಾರಿ ಕಾಯ್ದೆ ಮತ್ತು ಬಾಲ ನ್ಯಾಯ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಾರಗಳ ಹಿಂದಷ್ಟೇ ಉದ್ಘಾಟನೆಯಾಗಿದ್ದ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗ ಕುಸಿತ; ಮಳೆಯಲ್ಲಿ ಕೊಚ್ಚಿಹೋದ 7 ಸಾವಿರ ಕೋಟಿ!

ರಾಮನ ದುಡ್ಡು ಹೊಡೆದಿದ್ದು ತೀವ್ರ ನೋವಾಗಿದೆ: ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನೃತ್ಯ ಗೋಪಾಲ್ ದಾಸ್

ಚಿಕ್ಕಬಳ್ಳಾಪುರ: ಹೆಂಡತಿ ಮನೆಗೆ ಬರಲಿಲ್ಲವೆಂದು ಡಬಲ್‌ ಮರ್ಡರ್‌; ಕತ್ತು ಕೊಯ್ದು ಪತ್ನಿ, ನಾದಿನಿ ಹತ್ಯೆ!

'ಪ್ರಕೃತಿಯ ಮಡಿಲಲ್ಲಿ ಪುಟ್ಟ, ಮುದ್ದಾದ ಮನೆ': ಹೊಸ ಮನೆಯ ವಿಡಿಯೋ ಹಂಚಿಕೊಂಡ ಅಕುಲ್‌ ಬಾಲಾಜಿ!

ರಾಮ ಮಂದಿರ ಟ್ರಸ್ಟ್‌ನಿಂದ ಚಂಪತ್ ರಾಯ್‌ಗೆ ಗೇಟ್ ಪಾಸ್: ಪ್ರಧಾನ ಕಾರ್ಯದರ್ಶಿಯಾಗಿ ಬಜರಂಗ್ ಬಾಗ್ರಾ ನೇಮಕ?