ಮೋದಿ ಅವರಿಗೆ 'ಬಿಂಟಾಂಗ್ ಆದಿಪೂರ್ಣ' ಪ್ರಶಸ್ತಿ ಪ್ರದಾನ ಮಾಡುತ್ತಿರುವ ಇಂಡೋನೇಷ್ಯಾ ಅಧ್ಯಕ್ಷ. 
ದೇಶ

ಪ್ರಧಾನಿ ಮೋದಿಗೆ ಮತ್ತೊಂದು ಅಂತಾರಾಷ್ಟ್ರೀಯ ಗೌರವ; Indonesiaದ ಅತ್ಯುನ್ನತ Bintang Adipurna ನಾಗರಿಕ ಪ್ರಶಸ್ತಿ ಪ್ರದಾನ..!

ರಾಷ್ಟ್ರದ ಏಕತೆ, ಸ್ಥಿರತೆ ಮತ್ತು ಸಮೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡಿದ ವ್ಯಕ್ತಿಗಳಿಗೆ 'ಬಿಂಟಾಂಗ್ ರಿಪಬ್ಲಿಕ್ ಇಂಡೋನೇಷ್ಯಾ ಅದಿಪೂರ್ಣ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ.

ಜಕಾರ್ತಾ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತೊಂದು ಮಹತ್ವದ ಅಂತಾರಾಷ್ಟ್ರೀಯ ಗೌರವ ಲಭಿಸಿದೆ. ಮೂರು ರಾಷ್ಟ್ರಗಳ ಪ್ರವಾಸದ ಅಂಗವಾಗಿ ಇಂಡೋನೇಷ್ಯಾಕ್ಕೆ ಭೇಟಿ ನೀಡಿರುವ ಮೋದಿ ಅವರಿಗೆ, ಅಲ್ಲಿನ ಅತ್ಯುನ್ನತ ನಾಗರಿಕ ಗೌರವವಾದ 'ಬಿಂಟಾಂಗ್ ಆದಿಪೂರ್ಣ' ಪ್ರಶಸ್ತಿ, ನೀಡಿ ಸನ್ಮಾನಿಸಲಾಗಿದೆ.

ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂತೊ ಅವರು ಪ್ರಧಾನಿ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ 'ಬಿಂಟಾಂಗ್ ಆದಿಪೂರ್ಣ' (Bintang Adipurna) ಪ್ರಶಸ್ತಿ ನೀಡಿ, ಸನ್ಮಾನಿಸಿದ್ದಾರೆ.

'ಬಿಂಟಾಂಗ್ ಆದಿಪೂರ್ಣ' ರಿಪಬ್ಲಿಕ್ ಇಂಡೋನೇಷ್ಯಾ' (Star of the Republic of Indonesia) ದೇಶದ ಅತ್ಯುನ್ನತ ಗೌರವಗಳಲ್ಲಿ ಒಂದಾಗಿದ್ದು, ರಾಷ್ಟ್ರ ಹಾಗೂ ಜನರ ಹಿತಕ್ಕಾಗಿ ಅಸಾಧಾರಣ ಸೇವೆ ಸಲ್ಲಿಸಿದ ನಾಗರಿಕರು ಮತ್ತು ಸೇನಾ ಸಿಬ್ಬಂದಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಗೌರವವನ್ನು 1959ರಲ್ಲಿ ಅಧಿಕೃತವಾಗಿ ಸ್ಥಾಪಿಸಲಾಯಿತು.

ರಾಷ್ಟ್ರದ ಏಕತೆ, ಸ್ಥಿರತೆ ಮತ್ತು ಸಮೃದ್ಧಿಗೆ ಅತ್ಯುತ್ತಮ ಕೊಡುಗೆ ನೀಡಿದ ವ್ಯಕ್ತಿಗಳಿಗೆ 'ಬಿಂಟಾಂಗ್ ರಿಪಬ್ಲಿಕ್ ಇಂಡೋನೇಷ್ಯಾ ಅದಿಪೂರ್ಣ' ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತದೆ. ಇದು ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಮತ್ತು ಸೇನಾ ಗೌರವವೆಂದು ಪರಿಗಣಿಸಲಾಗಿದೆ.

ಇದಕ್ಕೂ ಮುನ್ನ ಜಕಾರ್ತಾದ ಇಸ್ತಾನಾ ಮೆರ್ಡೆಕಾ ಅಧ್ಯಕ್ಷೀಯ ಭವನದಲ್ಲಿ ಪ್ರಧಾನಿ ಮೋದಿಗೆ ಅದ್ಧೂರಿ ಔಪಚಾರಿಕ ಸ್ವಾಗತ ನೀಡಲಾಯಿತು. ಬಳಿಕ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪ್ರಬೋವೊ ಸುಬಿಯಾಂತೊ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಿತು.

ಪ್ರಧಾನಿ ಮೋದಿ ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತವಾಗಿ ಸೋಮವಾರ ಇಂಡೋನೇಷ್ಯಾಕ್ಕೆ ಆಗಮಿಸಿದ್ದರು.

ಈ ಭೇಟಿ ಭಾರತದ ಆ್ಯಕ್ಟ್ ಈಸ್ಟ್ ನೀತಿ, MAHASAGAR (Mutual and Holistic Advancement for Security Across the Regions) ದೃಷ್ಟಿಕೋನ ಹಾಗೂ ಮುಕ್ತ, ಮುಕ್ತಾಯಿತ ಮತ್ತು ಎಲ್ಲರನ್ನು ಒಳಗೊಂಡ ಇಂಡೋ-ಪೆಸಿಫಿಕ್ ಪ್ರದೇಶದ ಬದ್ಧತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, "ಇಸ್ತಾನಾ ಮೆರ್ಡೆಕಾದಲ್ಲಿ ನೀಡಿದ ಆತ್ಮೀಯ ಸ್ವಾಗತಕ್ಕೆ ಧನ್ಯವಾದಗಳು" ಎಂದು ಬರೆದುಕೊಂಡಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ರಂದೀರ್ ಜೈಸ್ವಾಲ್ ಅವರ ಪ್ರಕಾರ, ಈ ಭೇಟಿ ಭಾರತ–ಇಂಡೋನೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ಹೆಜ್ಜೆಯಾಗಿದ್ದು, ವಿವಿಧ ಆದ್ಯತೆಯ ಕ್ಷೇತ್ರಗಳಲ್ಲಿ ಹೊಸ ಸಹಕಾರಕ್ಕೆ ದಾರಿ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!