ಟಿಪ್ಪರ್ 
ದೇಶ

ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು - Video

ಮೃತರನ್ನು ಚಂದ್ರಪ್ರಕಾಶ್ ಮತ್ತು ಅವರ ಪುತ್ರರಾದ ರಮೇಶ್ (11), ದೀಪಕ್ (8) ಹಾಗೂ ರತನ್ (10) ಎಂದು ಗುರುತಿಸಲಾಗಿದೆ.

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಮಂಗಳವಾರ ಬೆಳಗ್ಗೆ ಅತೀ ವೇಗವಾಗಿ ಬಂದ ಟಿಪ್ಪರೊಂದು ಫುಟ್‌ಪಾತ್‌ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದಿದ್ದು, ಭೀಕರ ಅಪಘಾತದಲ್ಲಿ ತಂದೆ ಹಾಗೂ ಮೂವರು ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಮಕ್ಕಳ ದೇಹಗಳು ಛಿದ್ರ ಛಿದ್ರವಾಗಿವೆ.

ಇಂದು ಬೆಳಗ್ಗೆ ಶ್ಯಾಮ್ ನಗರ ಪೊಲೀಸ್ ಠಾಣೆ ಪ್ರದೇಶದ 200 ಅಡಿ ಬೈಪಾಸ್‌ನಲ್ಲಿರುವ ಕಮಲಾ ನೆಹರು ನಗರದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಚಂದ್ರಪ್ರಕಾಶ್ ಮತ್ತು ಅವರ ಪುತ್ರರಾದ ರಮೇಶ್ (11), ದೀಪಕ್ (8) ಹಾಗೂ ರತನ್ (10) ಎಂದು ಗುರುತಿಸಲಾಗಿದೆ.

ಚಂದ್ರಪ್ರಕಾಶ್ ಅವರ ಪತ್ನಿ ಕೈಲಾಶಿ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಎಸ್‌ಎಂಎಸ್ ಆಸ್ಪತ್ರೆಯ ಆಘಾತ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜೈತ್ಪುರಕ್ಕೆ ಹೋಗುವ ವಾಹನಕ್ಕಾಗಿ ಈ ಕುಟುಂಬ ಕಾಯುತ್ತಿದ್ದಾಗ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರೇಲರ್(ಟಿಪ್ಪರ್) ಚಾಲಕನ ನಿಯಂತ್ರಣ ತಪ್ಪಿ ಐವರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ನಂತರ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಶ್ಯಾಮ್ ನಗರ ಪೊಲೀಸ್ ಠಾಣೆಯ ಪೊಲೀಸರು, ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

E20 ಪೆಟ್ರೋಲ್‌ನಿಂದಾಗಿ ಎಂಜಿನ್‌ ಹಾಳಾದ ಒಂದೇ ಒಂದು ಕಾರನ್ನು ತೋರಿಸಿ: ಗಡ್ಕರಿ ಬಹಿರಂಗ ಸವಾಲು

ವಯನಾಡು ಭೂಕುಸಿತ 'ಮಾನವ ನಿರ್ಮಿತ'; ಮಣ್ಣು ತೆರವುಗೊಳಿಸಲು ಗುತ್ತಿಗೆದಾರರಿಗೆ ಸರ್ಕಾರ ಸೂಚಿಸಿದ್ರೂ ನಿರ್ಲಕ್ಷ್ಯ!

ರಾಜ್ಯದಲ್ಲಿ SIR ತಾತ್ಕಾಲಿಕ ತಡೆಗೆ ಎನ್‌ಡಿಎ ಪಟ್ಟು; ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು!

ಚಲಿಸುವ ರೈಲಿನಲ್ಲಿ ಸುರಕ್ಷಿತವಾಗಿ ತುರ್ತು ಹೆರಿಗೆ ಮಾಡಿಸಿದ ಹಾಸನದ SDM ಆರ್ಯುವೇದ ಕಾಲೇಜಿನ ಪಿಜಿ ವಿದ್ಯಾರ್ಥಿಗಳು!

Varanasi Movie: ವಾರಣಾಸಿ ಚಿತ್ರದಲ್ಲಿ ಶ್ರೀರಾಮನಾಗಿ ಮಹೇಶ್ ಬಾಬು! ವೈರಲ್ ಆಗಿರುವ ಫೋಟೋ ರಿಯಾಲಿಟಿ ಏನು?