ಟಿಪ್ಪರ್ 
ದೇಶ

ಭಯಾನಕ ಅಪಘಾತ: ಫುಟ್​ಪಾತ್​ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದ ಟಿಪ್ಪರ್; ತಂದೆ, ಮೂವರು ಮಕ್ಕಳು ಸ್ಥಳದಲ್ಲೇ ಸಾವು; Video

ಮೃತರನ್ನು ಚಂದ್ರಪ್ರಕಾಶ್ ಮತ್ತು ಅವರ ಪುತ್ರರಾದ ರಮೇಶ್ (11), ದೀಪಕ್ (8) ಹಾಗೂ ರತನ್ (10) ಎಂದು ಗುರುತಿಸಲಾಗಿದೆ.

ಜೈಪುರ: ರಾಜಸ್ಥಾನದ ಜೈಪುರದಲ್ಲಿ ಮಂಗಳವಾರ ಬೆಳಗ್ಗೆ ಅತೀ ವೇಗವಾಗಿ ಬಂದ ಟಿಪ್ಪರೊಂದು ಫುಟ್‌ಪಾತ್‌ನಲ್ಲಿ ಕುಳಿತಿದ್ದ ಕುಟುಂಬದ ಮೇಲೆ ಹರಿದಿದ್ದು, ಭೀಕರ ಅಪಘಾತದಲ್ಲಿ ತಂದೆ ಹಾಗೂ ಮೂವರು ಮಕ್ಕಳು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮತ್ತು ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಮಕ್ಕಳ ದೇಹಗಳು ಛಿದ್ರ ಛಿದ್ರವಾಗಿವೆ.

ಇಂದು ಬೆಳಗ್ಗೆ ಶ್ಯಾಮ್ ನಗರ ಪೊಲೀಸ್ ಠಾಣೆ ಪ್ರದೇಶದ 200 ಅಡಿ ಬೈಪಾಸ್‌ನಲ್ಲಿರುವ ಕಮಲಾ ನೆಹರು ನಗರದಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಚಂದ್ರಪ್ರಕಾಶ್ ಮತ್ತು ಅವರ ಪುತ್ರರಾದ ರಮೇಶ್ (11), ದೀಪಕ್ (8) ಹಾಗೂ ರತನ್ (10) ಎಂದು ಗುರುತಿಸಲಾಗಿದೆ.

ಚಂದ್ರಪ್ರಕಾಶ್ ಅವರ ಪತ್ನಿ ಕೈಲಾಶಿ ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಎಸ್‌ಎಂಎಸ್ ಆಸ್ಪತ್ರೆಯ ಆಘಾತ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜೈತ್ಪುರಕ್ಕೆ ಹೋಗುವ ವಾಹನಕ್ಕಾಗಿ ಈ ಕುಟುಂಬ ಕಾಯುತ್ತಿದ್ದಾಗ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರೇಲರ್(ಟಿಪ್ಪರ್) ಚಾಲಕನ ನಿಯಂತ್ರಣ ತಪ್ಪಿ ಐವರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ನಂತರ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ಶ್ಯಾಮ್ ನಗರ ಪೊಲೀಸ್ ಠಾಣೆಯ ಪೊಲೀಸರು, ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!