ರೈಲು ಹಳಿಗಳ ಮೇಲೆ ಮೀನುಗಳ ಈಜಾಟ 
ದೇಶ

ಮುಂಬೈ ಮುಂಗಾರು ಅಬ್ಬರ: ಜಲಾವೃತ ರೈಲು ಹಳಿಗಳಲ್ಲಿ ಮೀನುಗಳ ಸ್ವಚ್ಛಂದ ಈಜಾಟ, Video Viral

ಸ್ಥಳೀಯ ರೈಲು ನಿಲ್ದಾಣದ ಹಳಿಗಳ ಮೇಲೆ ನೀರು ನಿಂತಿದ್ದು, ಆ ನೀರಿನಲ್ಲೇ ಮೀನುಗಳು ಈಜಾಡುತ್ತಿರುವ ಅಪರೂಪದ ದೃಶ್ಯವೊಂದು ಕಂಡುಬಂದಿದೆ.

ಮುಂಬೈ: ನೆರೆಯ ಮಹಾರಾಷ್ಟ್ರದಲ್ಲಿ ಮುಂಗಾರು ಮಾರುತಗಳ ಅಬ್ಬರ ಜೋರಾಗಿಯಾ ಸಾಗಿದ್ದು, ರಾಜ್ಯಾದ್ಯಂತ ಭಾರಿ ಮಳೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿ ಮಾಡಿದೆ.

ಪ್ರಮುಖವಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆ ಜನಜೀವನವನ್ನು ಸಂಪೂರ್ಣ ಅಸ್ತವ್ಯಸ್ಥಗೊಳಿಸಿದ್ದು, ಮುಂಬೈನ ಹಲವು ಪ್ರದೇಶಗಳು ಜಲಾವೃತವಾಗಿವೆ. ಈ ನಡುವೆಯೇ, ಸ್ಥಳೀಯ ರೈಲು ನಿಲ್ದಾಣದ ಹಳಿಗಳ ಮೇಲೆ ನೀರು ನಿಂತಿದ್ದು, ಆ ನೀರಿನಲ್ಲೇ ಮೀನುಗಳು ಈಜಾಡುತ್ತಿರುವ ಅಪರೂಪದ ದೃಶ್ಯವೊಂದು ಕಂಡುಬಂದಿದೆ.

ವೈರಲ್ ಆಗಿರುವ ವಿಡಿಯೊದಲ್ಲಿ, ಮಳೆ ನೀರು ತುಂಬಿಕೊಂಡಿರುವ ರೈಲು ಹಳಿಗಳ ನಡುವೆ ಹಲವು ಮೀನುಗಳು ಈಜಾಡುತ್ತಿರುವುದು ಹಾಗೂ ಅತ್ತಿತ್ತ ಚಲಿಸುತ್ತಿರುವುದು ಕಾಣಿಸುತ್ತದೆ. ಈ ಅಪರೂಪದ ದೃಶ್ಯ ನೆಟ್ಟಿಗರಲ್ಲಿ ಅಚ್ಚರಿ ಹಾಗೂ ಕುತೂಹಲ ಮೂಡಿಸಿದೆ.

ಅಂದಹಾಗೆ ಮುಂಬೈನ ಈ ವರ್ಷದ ಮುಂಗಾರು ಅವಧಿಯ ಅತ್ಯಂತ ಚರ್ಚಿತ ವಿಡಿಯೊಗಳಲ್ಲಿ ಒಂದಾಗಿದೆ. ಮುಂಬೈನಲ್ಲಿ ಸುರಿದ ಭಾರೀ ಮಳೆಯಿಂದ ರಸ್ತೆಗಳು ಹಾಗೂ ಉಪನಗರ ರೈಲು ಹಳಿಗಳು ಜಲಾವೃತಗೊಂಡಿದ್ದವು. ಇದರ ಪರಿಣಾಮ ಸ್ಥಳೀಯ ರೈಲು ಸಂಚಾರ ಅಸ್ತವ್ಯಸ್ತಗೊಂಡು, ಸಾವಿರಾರು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ವಾಂತರದ ನಡುವೆ ನಗೆ ತರಿಸಿದ ದೃಶ್ಯ

ಮಳೆಯ ಅವಾಂತರದ ನಡುವೆಯೇ ರೈಲು ಹಳಿಗಳಲ್ಲಿ ಮೀನುಗಳು ಕಾಣಿಸಿಕೊಂಡ ದೃಶ್ಯ ಜನರಿಗೆ ಅಚ್ಚರಿ ಮೂಡಿಸುವುದರ ಜೊತೆಗೆ ನಗು ತರಿಸಿತು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಹಾಸ್ಯಮಯ ಪ್ರತಿಕ್ರಿಯೆಗಳನ್ನು ನೀಡಲು ಆರಂಭಿಸಿದ್ದಾರೆ.

ಮಳೆಯ ಅಬ್ಬರದಿಂದ ಸಂಚಾರ ಅಸ್ತವ್ಯಸ್ತ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುಂಬೈ, ಠಾಣೆ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಮುಂಗಾರು ಚುರುಕುಗೊಂಡ ಹಿನ್ನೆಲೆಯಲ್ಲಿ ಹವಾಮಾನ ಎಚ್ಚರಿಕೆಯನ್ನೂ ಜಾರಿ ಮಾಡಲಾಗಿತ್ತು.

ನಿರಂತರ ಮಳೆಯಿಂದ ನಗರದ ಹಲವೆಡೆ ನೀರು ನಿಂತು, ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಸ್ಥಳೀಯ ರೈಲುಗಳ ಸಂಚಾರವೂ ವಿಳಂಬಗೊಂಡ ಪರಿಣಾಮ, ಸಾವಿರಾರು ನಿತ್ಯ ಪ್ರಯಾಣಿಕರು ರೈಲು ನಿಲ್ದಾಣಗಳಲ್ಲಿ ಕಾದು ಕುಳಿತುಕೊಳ್ಳುವ ಪರಿಸ್ಥಿತಿ ಎದುರಾಯಿತು.

ವಾರ್ಷಿಕ ಮುಂಗಾರು ಸವಾಲುಗಳಿಗೆ ಮತ್ತೊಂದು ಉದಾಹರಣೆ

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಡುವೆ, ಪ್ರತಿವರ್ಷ ಮುಂಗಾರು ಸಂದರ್ಭದಲ್ಲಿ ಮುಂಬೈ ಎದುರಿಸುವ ಪ್ರವಾಹ ಹಾಗೂ ಜಲಾವೃತ ಸಮಸ್ಯೆಗಳನ್ನು ಇದು ಮತ್ತೊಮ್ಮೆ ನೆನಪಿಸಿದೆ. ಜೊತೆಗೆ, ಮಳೆಯ ಅವಾಂತರದ ನಡುವೆಯೂ ಕೆಲವೊಮ್ಮೆ ಇಂತಹ ಅನಿರೀಕ್ಷಿತ ಹಾಗೂ ಕುತೂಹಲಕಾರಿ ಘಟನೆಗಳು ಜನರ ಗಮನ ಸೆಳೆಯುತ್ತವೆ ಎಂಬುದನ್ನೂ ಈ ಘಟನೆ ತೋರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

'ಯಾವ ಕ್ಷಣದಲ್ಲಾದರೂ ಕುಸಿಯಬಹುದು': Kerala Landslide ಕುರಿತು ಮೊದಲೇ ಎಚ್ಚರಿಕೆ ನೀಡಿದ್ದ ಗುತ್ತಿಗೆದಾರರ ವರದಿ

ರಾಜ್ಯ ಸರ್ಕಾರಕ್ಕೆ ಶಾಶ್ವತ ನಿವಾಸ ಪ್ರಮಾಣ ಪತ್ರ ಕೊಡೋ ಅಧಿಕಾರವೇ ಇಲ್ಲ-ಛಲವಾದಿ ನಾರಾಯಣ ಸ್ವಾಮಿ ಕಿಡಿ!

SIR ಕಂಪ್ಯೂಟರೀಕರಣ, ಚಿಕ್ಕಬಳ್ಳಾಪುರ ಅಪರೂಪದ ಸಾಧನೆ, ರಾಜ್ಯದಲ್ಲೇ ಮೊದಲ ಸ್ಥಾನ!

GBA ಚುನಾವಣೆ‌ ನಡೆಸಲು ಡಿಸೆಂಬರ್‌ವರೆಗೆ ಕಾಲಾವಕಾಶ ಕೊಡಿ: ಸುಪ್ರೀಂ ಕೋರ್ಟ್ ಗೆ ಸರ್ಕಾರದ ಅರ್ಜಿ