ಮಮತಾ ಬ್ಯಾನರ್ಜಿ 
ದೇಶ

ದೀದಿಗೆ ಮತ್ತೊಂದು ಶಾಕ್; ಮಮತಾ ನೇತೃತ್ವದ TMC ಬಣದ 12 ಬ್ಯಾಂಕ್ ಖಾತೆ ಫ್ರೀಜ್ ಮಾಡಿದ ಪೋಲೀಸರು!

ಬಂಗಾಳ ಪೊಲೀಸರು, ಇಂದು ವಿವಿಧ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳಲ್ಲಿರು ಟಿಎಂಸಿಯ 12 ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಪೊಲೀಸರು(WBP) ಶುಕ್ರವಾರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್(AITC) ಬಣದ 12 ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

ಕಲ್ಕತ್ತಾ ಹೈಕೋರ್ಟ್ ಗುರುವಾರ, ಟಿಎಂಸಿ ತನ್ನ ಇತರ ಮೂರು ಸ್ಥಗಿತಗೊಂಡ ಬ್ಯಾಂಕ್ ಖಾತೆಗಳಿಂದ ಹಣವನ್ನು ದೈನಂದಿನ ಆಡಳಿತ ಮತ್ತು ಕಾನೂನು ವೆಚ್ಚಗಳಿಗಾಗಿ ಬಳಸಲು ಅನುಮತಿಸಿದ ಒಂದು ದಿನದ ನಂತರ, ಬಂಗಾಳ ಪೊಲೀಸರು, ಇಂದು ವಿವಿಧ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕುಗಳಲ್ಲಿರು ಟಿಎಂಸಿಯ 12 ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ.

ಮೂಲಗಳ ಪ್ರಕಾರ, ಮಮತಾ ಬ್ಯಾನರ್ಜಿ ಅವರ ಬಣಕ್ಕೆ ಸೇರಿದ AITCಯ 12 ಖಾತೆಗಳನ್ನು ಸ್ಥಗಿತಗೊಳಿಸಲು ಪೊಲೀಸರು ಸಂಬಂಧಪಟ್ಟ ಬ್ಯಾಂಕ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಹಿಂದೆ ಸ್ಥಗಿತಗೊಂಡ ಮೂರು ಖಾತೆಗಳು ಸೇರಿದಂತೆ 15 ಬ್ಯಾಂಕ್ ಖಾತೆಗಳಲ್ಲಿ ಸುಮಾರು 1,000 ಕೋಟಿ ರೂ. ಇದೆ.

ಭಿನ್ನಮತೀಯ ಶಾಸಕರ ಆರೋಪದ ಬಗ್ಗೆ ತನಿಖೆ ಆರಂಭಿಸಿರುವ ಪೊಲೀಸರು, ಋತಬ್ರತ ಮತ್ತು ಸಂದೀಪನ್ ಸೇರಿದಂತೆ ಏಳು ಬಂಡಾಯ ಶಾಸಕರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.

ರಿತಬ್ರತ ಬ್ಯಾನರ್ಜಿ ನೇತೃತ್ವದ ಟಿಎಂಸಿ ಬಂಡಾಯ ಬಣದ ಶಾಸಕ ವಿಶ್ವನಾಥ್ ದಾಸ್ ಹಣ ದುರುಪಯೋಗದ ಬಗ್ಗೆ ಬಿಧಾನ್ ನಗರ ಪೊಲೀಸರಿಗೆ ದೂರು ನೀಡಿದ ಬಳಿಕ, ಜೂನ್ 19ರಂದು ಮೂರು ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಇದನ್ನು ಪ್ರಶ್ನಿಸಿ ಟಿಎಂಸಿ ಹೈಕೋರ್ಟ್ ಮೆಟ್ಟಿಲೇರಿತ್ತು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ತೃಣಮೂಲ ಕಾಂಗ್ರೆಸ್(ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳನ್ನು ಕೇವಲ ದೈನಂದಿನ ವೆಚ್ಚಗಳಿಗಾಗಿ ಬಳಸಲು ಅನುಮತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್

2029ರ ಲೋಕಸಭೆ ಚುನಾವಣೆಯಿಂದಲೇ 'ಒಂದು ರಾಷ್ಟ್ರ–ಒಂದು ಚುನಾವಣೆ' ಜಾರಿ ಸಾಧ್ಯತೆ: JPC ಮುಖ್ಯಸ್ಥ ಪಿ.ಪಿ. ಚೌಧರಿ

ಮೊದಲ ಮಹಿಳಾ ಟೆಸ್ಟ್ ಪಂದ್ಯ: ಲಾರ್ಡ್ಸ್ ನಲ್ಲಿ ಅಪರೂಪದ ದಾಖಲೆ ಬರೆದ ಸ್ಮೃತಿ ಮಂಧಾನಾ! ಆಕರ್ಷಕ ಅರ್ಧಶತಕ

ಸುಪ್ರೀಂಕೋರ್ಟ್ ನಲ್ಲಿ ಹೈಡ್ರಾಮ: ಕೋರ್ಟ್ ಹಾಲ್ ನಲ್ಲಿ ಕಾಗದ ಪತ್ರ ಎಸೆದು, CJI ನಿಂದಿಸಿದ ದೂರುದಾರ!