ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ 
ದೇಶ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ವಿಶೇಷ ಯಂತ್ರಗಳು ಸೇರಿದಂತೆ ಸುಮಾರು 15 ಅಗೆಯುವ ಯಂತ್ರಗಳು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್‌ಡಿಆರ್‌ಎಫ್) ಮತ್ತು ಸೇನೆ ಸೇರಿದಂತೆ ಇತರ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಣೆ: ಪುಣೆ ಬಳಿಯ ಮೋಶಿ ತ್ಯಾಜ್ಯ ಸಂಸ್ಕರಣಾ ಘಟಕದ ಮೇಲೆ ತ್ಯಾಜ್ಯದ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ಸಿಲುಕಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿದ್ದು, ಒಳಗೆ ಸಿಲುಕಿಕೊಂಡಿದ್ದ ಅಂದಾಜು 23 ಜನರಲ್ಲಿ 14 ಜನರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ಸಂಜೆ ತಿಳಿಸಿದ್ದಾರೆ.

ಘಟನೆ ನಡೆದು ಮೂರು ದಿನಗಳ ನಂತರವೂ ಇನ್ನೂ ಒಬ್ಬ ವ್ಯಕ್ತಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪಿಂಪ್ರಿ ಚಿಂಚ್‌ವಾಡ್ ಪುರಸಭೆ ಆಯುಕ್ತ ವಿಜಯ್ ಸೂರ್ಯವಂಶಿ ಅವರು ಹೇಳಿದ್ದಾರೆ.

ಬುಧವಾರ, ಪಿಂಪ್ರಿ ಚಿಂಚ್‌ವಾಡ್ ಮಹಾನಗರ ಪಾಲಿಕೆಗೆ ಸೇರಿದ ತ್ಯಾಜ್ಯದಿಂದ ಇಂಧನ(ಡಬ್ಲ್ಯೂಟಿಇ) ಘಟಕದ ಮೂರು ಅಂತಸ್ತಿನ ಆಡಳಿತ ಕಟ್ಟಡದ ಮೇಲೆ ಪಕ್ಕದ ತ್ಯಾಜ್ಯದ ಗುಡ್ಡ ಕುಸಿದು ಬಿದ್ದು ದುರಂತ ಸಂಭವಿಸಿತ್ತು.

ವಿಶೇಷ ಯಂತ್ರಗಳು ಸೇರಿದಂತೆ ಸುಮಾರು 15 ಅಗೆಯುವ ಯಂತ್ರಗಳು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ(ಎನ್‌ಡಿಆರ್‌ಎಫ್) ಮತ್ತು ಸೇನೆ ಸೇರಿದಂತೆ ಇತರ ಸಂಸ್ಥೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸುನೇತ್ರಾ ಪವಾರ್ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಭಾರೀ ಮಳೆ ಮತ್ತು ಕಸದ ರಾಶಿಯಿಂದ ಹೊರಹೊಮ್ಮುವ ವಿಷಕಾರಿ ಅನಿಲಗಳು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಹೇಳಿದ್ದಾರೆ.

"ದುರದೃಷ್ಟಕರ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆಯ ನಂತರ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು" ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!

ಮಸ್ಸೂರಿ ಹೋಂಸ್ಟೇಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೆ ಬಿಗ್ ಟ್ವಿಸ್ಟ್: ದೆಹಲಿಯಲ್ಲಿ ಪತಿಯ ಬಂಧನ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ವಿವಾಹಿತೆ ಬಲಿ?