ಸಂಗ್ರಹ ಚಿತ್ರ 
ದೇಶ

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆಯು 4.5 ರಷ್ಟು ದಾಖಲಾಗಿದ್ದು, ಭೂಮಿಯ ಮೇಲ್ಮೈನಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಈ ಕಂಪನ ಸೃಷ್ಟಿಯಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ವಿಶಾಖಪಟ್ಟಣಂ: ಬಂಗಾಳ ಕೊಲ್ಲಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಆಂಧ್ರಪ್ರದೇಶದ ಕರಾವಳಿ ನಗರವಾದ ವಿಶಾಖಪಟ್ಟಣಂನ ಹಲವು ಭಾಗಗಳಲ್ಲೂ ಭೂಕಂಪನದ ಅನುಭವವಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ರಾಷ್ಟ್ರೀಯ ಭೂಕಂಪನ ಕೇಂದ್ರ (NCS) ನೀಡಿರುವ ಮಾಹಿತಿಯ ಪ್ರಕಾರ, ಇಂದು ಮುಂಜಾನೆ 5:05:46 ಕ್ಕೆ ಈ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ.

ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆಯು 4.5 ರಷ್ಟು ದಾಖಲಾಗಿದ್ದು, ಭೂಮಿಯ ಮೇಲ್ಮೈನಿಂದ ಕೇವಲ 10 ಕಿಲೋಮೀಟರ್ ಆಳದಲ್ಲಿ ಈ ಕಂಪನ ಸೃಷ್ಟಿಯಾಗಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಇದರ ಕೇಂದ್ರಬಿಂದು ಬಂಗಾಳ ಕೊಲ್ಲಿಯಲ್ಲಿ ಕಾಕಿನಾಡ ಕರಾವಳಿಯಿಂದ ಸುಮಾರು 225 ಕಿಲೋಮೀಟರ್ ದೂರದಲ್ಲಿ ದಾಖಲಾಗಿದೆ.

ಭೂಕಂಪದ ಕೇಂದ್ರಬಿಂದುವಿನ ಸ್ಥಾನ 16.805° ಉತ್ತರ ಅಕ್ಷಾಂಶ ಹಾಗೂ 84.381° ಪೂರ್ವ ರೇಖಾಂಶದಲ್ಲಿ ಇತ್ತು ಎಂದು INCOIS ತಿಳಿಸಿದೆ.

ಭೂಕಂಪದ ಪರಿಣಾಮವಾಗಿ ವಿಶಾಖಪಟ್ಟಣಂ ನಗರದ ಹಲವು ಭಾಗಗಳಲ್ಲಿ ಸೌಮ್ಯ ಕಂಪನ ಅನುಭವವಾಗಿದ್ದರೂ, ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿಗೆ ಹಾನಿ ಅಥವಾ ಇತರ ನಷ್ಟ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ವಿಶಾಖಪಟ್ಟಣಂನ ಎಂವಿಪಿ ಕಾಲೋನಿ, ಪೆದವಾಲ್ಟೇರ್, ಗಾಜುಯಾಕ, ಸಾಗರ್ ನಗರ, ಯೆಂದಡ ಮತ್ತು ಅರಿಲೋವಾ ಸೇರಿದಂತೆ ಹತ್ತಿರದ ಹಲವು ಕರಾವಳಿ ಪ್ರದೇಶಗಳಲ್ಲಿ ಸುಮಾರು 2 ರಿಂದ 4 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದೆ.

ಇದರಿಂದ ಮುಂಜಾನೆ ಗಾಢ ನಿದ್ರೆಯಲ್ಲಿದ್ದ ಜನರಿಗೆ ಇದ್ದಕ್ಕಿದ್ದಂತೆ ಮಂಚ, ಪಾತ್ರೆಗಳು ಮತ್ತು ಕಿಟಕಿಗಳು ನಡುಗಿದ ಅನುಭವವಾಗಿದೆ. ಆತಂಕಗೊಂಡ ಜನರು ತಕ್ಷಣ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಸಂಪುಟ ವಿಸ್ತರಣೆಗೆ ಕೌಂಟ್‌ಡೌನ್: ಸಿದ್ದು-ಡಿಕೆಶಿ, ಹರಿಪ್ರಸಾದ್'ಗೆ 'ಕೈ' ಕಮಾಂಡ್ ಬುಲಾವ್, ದೆಹಲಿಯಲ್ಲಿ ನಿರ್ಣಾಯಕ ಸಭೆ..!

ಮೈಸೂರಿನಲ್ಲಿ ಎಸ್. ಜಾನಕಿ ಪಾರ್ಥಿವ ಶರೀರದ ಅಂತಿಮ ದರ್ಶನ; ಮಧ್ಯಾಹ್ನ ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ

ಸಾರಿಗೆ ಸಚಿವ byrati suresh ದಿಢೀರ್ ಸಿಟಿ ರೌಂಡ್ಸ್, ರಾತ್ರೋರಾತ್ರಿ BMTC ಚಾಲಕ, ನಿರ್ವಾಹಕರಿಗೆ ಅಮಾನತು ಶಾಕ್, Video