ನವದೆಹಲಿ: ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್ಗೆ (Prakash Raj) ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳಿರುವ ನಟ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ Cockroach Janata Party (CJP) ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು ಅವರು ಅಂದು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಇಂದು ಅದೇ ಅಸ್ತ್ರ ನಮ್ಮ ಬಳಿ ಇದೆ. ಅದೇ ಅಸ್ತ್ರ ಬಳಸಿಕೊಂಡು ನಾವು ಅವರ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದ್ದರು.
ಇನ್ನು ಪ್ರತಿಭಟನೆಯಲ್ಲಿ ಹಿಂದಿಯಲ್ಲೇ ಪ್ರಕಾಶ್ ರಾಜ್ ಭಾಷಣ ಮಾಡಿದ್ದು ಇದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 2020ರಲ್ಲಿ ಕನ್ನಡ ಹಲವು ಸೆಲೆಬ್ರಿಟಿಗಳು ಹಿಂದಿ ಹೇರಿಕೆಯನ್ನು ವಿರೋಧಿಸಿದ್ದರು. ಈ ವೇಳೆ ಪ್ರಕಾಶ್ ರಾಜ್ ನಂಗೆ ಹಿಂದಿ ಬರಲ್ಲ ಹೋಗ್ರಪ್ಪ ಅಂತ ಬರೆದಿದ್ದ ಟೀ ಶರ್ಟ್ ಧರಿಸಿ ಪ್ರತಿಭಟನೆಗೆ ಸಾಥ್ ನೀಡಿದ್ದರು. ಇದೀಗ ನೆಟ್ಟಿಗರು ಇದನ್ನು ಅಸ್ತ್ರವಾಗಿ ಬಳಸಿದ್ದಾರೆ. ನಿಮಗೆ ಬೇಕಾದಾಗ ಬೇಕಂತೆ ಬದಲಾಗುವ ಈಸರವಳ್ಳಿಗಳು ಎಂದು ಕಮೆಂಟ್ ಮಾಡುತ್ತಿದ್ದಾರೆ.
ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಕಾಶ್ ರಾಜ್, ಇದು ಯಾವುದೇ ಒಂದು ಸಂಸ್ಥೆ ಅಥವಾ ನಾಯಕನ ಹೋರಾಟವಲ್ಲ. ಬದಲಾಗಿ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹೋರಾಟ ಎಂದು ಹೇಳಿದರು. 61 ವರ್ಷದ ಪ್ರಕಾಶ್ ರಾಜ್ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ, ಅದನ್ನು ಎಂದಿಗೂ ಯಾವುದಕ್ಕೂ ಹೊಣೆಗಾರರನ್ನಾಗಿ ಮಾಡುವುದಿಲ್ಲ. ಏಕೆಂದರೆ ಇದು ಶತಮಾನಗಳಿಂದ ನಡೆದುಕೊಂಡು ಬಂದಿದೆ. ಪ್ರಕಾಶ್ ರಾಜ್ ವಿದ್ಯಾರ್ಥಿಗಳೊಂದಿಗೆ ದೃಢವಾಗಿ ನಿಲ್ಲುತ್ತೇನೆ ಮತ್ತು ಅದನ್ನು ಮುಂದುವರಿಸುತ್ತೇನೆ ಎಂದು ಹೇಳಿದರು.