IB ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ AAP ನಾಯಕ ತಾಹೀರ್ ಹುಸೇನ್ ದೋಷಿ! Online Desk
ದೇಶ

2020 ದೆಹಲಿ ಗಲಭೆ ಕೇಸ್: IB ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣದಲ್ಲಿ AAP ನಾಯಕ ತಾಹೀರ್ ಹುಸೇನ್ ದೋಷಿ!

2020ರ ದೆಹಲಿಗಲಭೆಯ ವೇಳೆ IB ಅಧಿಕಾರಿ ಅಂಕಿತ್ ಶರ್ಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ನ್ಯಾಯಾಲಯವು AAP ನಾಯಕ ತಾಹೀರ್ ಹುಸೇನ್ ಮತ್ತು ಇತರ ನಾಲ್ವರು ಪ್ರಮುಖ ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಆ ಕುರಿತ ವರದಿ ಇಲ್ಲಿದೆ.

ದೆಹಲಿ: 2020ರ ದೆಹಲಿ CAA ಗಲಭೆಯ ವೇಳೆ ಇಂಟೆಲಿಜೆನ್ಸ್ ಬ್ಯೂರೋ (IB) ಅಧಿಕಾರಿ ಅಂಕಿತ್ ಶರ್ಮಾ (Ankit Sharma) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯವು ಆಮ್ ಆದ್ಮಿ ಪಕ್ಷದ (Aam Aadmi Party) ಮಾಜಿ ನಾಯಕ ತಾಹೀರ್ ಹುಸೇನ್ (Tahir Hussain) ಮತ್ತು ಇತರ ನಾಲ್ವರು ಪ್ರಮುಖ ಆರೋಪಿಗಳು ದೋಷಿಗಳು ಎಂದು ನ್ಯಾಯಾಲಯ ಘೋಷಿಸಿದೆ. ಆ ಕುರಿತ ವರದಿ ಇಲ್ಲಿದೆ.

ಏನಿದು ಪ್ರಕರಣ?

ಫೆಬ್ರವರಿ 2020ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರೋಧಿ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಈಶಾನ್ಯ ದೆಹಲಿಯಲ್ಲಿ ಭಾರಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಗಲಭೆಯ ಸಂದರ್ಭದಲ್ಲಿ, ಫೆಬ್ರವರಿ 25 ರಂದು ದಿನಸಿ ಸಾಮಗ್ರಿಗಳನ್ನು ಖರೀದಿಸಿ, ಮನೆಗೆ ಮರಳುತ್ತಿದ್ದ 26 ವರ್ಷದ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಚಾಂದ್ ಬಾಗ್ ಪ್ರದೇಶದಲ್ಲಿ ಉದ್ರಿಕ್ತ ಗಲಭೆಕೋರರ ಗುಂಪು ಅಪಹರಿಸಿ, ಬರ್ಬರವಾಗಿ ಕೊಲೆ ಮಾಡಿ ಶವವನ್ನು ಹತ್ತಿರದ ಚರಂಡಿಗೆ ಎಸೆದಿತ್ತು. ತನಿಖೆಯ ವೇಳೆ ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಮನೆಯನ್ನು ಗಲಭೆಕೋರರು ಕಲ್ಲು ತೂರಾಟ ನಡೆಸಲು ಮತ್ತು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಬಳಸಿದ್ದರು ಎಂಬುದು ಸಾಬೀತಾಗಿತ್ತು.

ಮುಂದುವರೆದು, ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಪ್ರವೀಣ್ ಸಿಂಗ್ ಅವರ ಪೀಠವು, ತಾಹೀರ್ ಹುಸೇನ್‌ನನ್ನು ಕೊಲೆ, ಅಪಹರಣ, ದಂಗೆ ಮತ್ತು ಧರ್ಮಗಳ ನಡುವೆ ದ್ವೇಷ ಸೇರಿದಂತೆ ಹಲವು ಗಂಭೀರ ಕಾಯ್ದೆಗಳ ಅಡಿಯಲ್ಲಿ ದೋಷಿ ಎಂದು ತೀರ್ಪು ನೀಡಿದೆ. ಹುಸೇನ್ ಜೊತೆಗೆ ಇತರ 4 ಆರೋಪಿಗಳಾದ ನಾಜಿಮ್, ಕಾಸಿಮ್, ಅನಾಸ್ ಮತ್ತು ಜಾವೇದ್ ಅವರನ್ನೂ ನ್ಯಾಯಾಲಯ ದೋಷಿಗಳು ಎಂದು ಪರಿಗಣಿಸಿದೆ. ಆದರೆ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪ್ರಕರಣದಲ್ಲಿದ್ದ ಇತರ 6 ಜನರನ್ನು ಖುಲಾಸೆಗೊಳಿಸಲಾಗಿದೆ.

ಏತನ್ಮಧ್ಯೆ, CAA ವಿರೋಧಿ ಗಲಭೆಯ ವೇಳೆ ಒಟ್ಟು 53 ಜನರು ಪ್ರಾಣ ಕಳೆದುಕೊಂಡಿದ್ದರು. ಮತ್ತು ನೂರಾರು ಜನರು ಗಾಯಗೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು; ಕಾರಿನ ಗ್ಲಾಸ್ ಪೀಸ್! Video

ಅರೆಂಜ್ ಮ್ಯಾರೇಜ್‌ ತಪ್ಪಿಸಲು ರಸ್ತೆಯಲ್ಲೇ ತಲೆ ಬೋಳಿಸಿಕೊಂಡ ಯುವತಿ; ವಿಡಿಯೋ ವೈರಲ್​!

ಪ್ಲೀಸ್ ನನ್ನ ಬಿಟ್ಹೋಗ್ಬೇಡ​​...: ರೈಲು ನಿಲ್ದಾಣದಲ್ಲಿ ಯುವತಿ ಕಾಲಿಗೆ ಬಿದ್ದು ಗೋಳಾಡಿದ ಯುವಕ! ಮುಂದೇನಾಯ್ತು, Video ನೋಡಿ

ಮೋದಿಗೆ ಕೊಲೆ ಬೆದರಿಕೆ: ಖಲಿಸ್ತಾನಿ ಉಗ್ರರಿಂದ ಪ್ರಧಾನಿಯ ಹರಿಯಾಣ ರ್ಯಾಲಿ ಟಾರ್ಗೆಟ್!

NatWest ವಿಜಯೋತ್ಸವಕ್ಕೆ 24 ವರ್ಷ: ಕುಟುಂಬದೊಂದಿಗೆ ಐತಿಹಾಸಿಕ ಕ್ಷಣ ಆನಂದಿಸಿದ Sourav Ganguly