ವಿಜಯ್ ಗುಪ್ತಾ Online Desk
ದೇಶ

PMO ಹೆಸರಲ್ಲಿ 4 ಕೋಟಿ ವಂಚನೆ; ನಕಲಿ ಅಧಿಕಾರಿ ವಿಜಯ್ ಗುಪ್ತಾ ಜಾಮೀನು ಅರ್ಜಿ ವಜಾ

ಪ್ರಧಾನ ಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿಯಂತೆ ನಟಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಜಮ್ಮು ಮೂಲದ ವಿಜಯ್ ಗುಪ್ತಾ ಅವರ ಜಾಮೀನು ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ವಜಾ ಮಾಡಿದೆ. ಆ ಕುರಿತ ವರದಿ ಇಲ್ಲಿದೆ.

ನವದೆಹಲಿ: ಪ್ರಧಾನ ಮಂತ್ರಿ ಕಾರ್ಯಾಲಯದ (Prime Minister's Office) ಹಿರಿಯ ಅಧಿಕಾರಿಯಂತೆ ನಟಿಸಿ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣದಲ್ಲಿ ಬಂಧಿತನಾಗಿರುವ ಜಮ್ಮು ಮೂಲದ ವಿಜಯ್ ಗುಪ್ತಾ (Vijay Gupta) ಅವರ ಜಾಮೀನು ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು (Delhi Court) ವಜಾ ಮಾಡಿದೆ. ಆ ಕುರಿತ ವರದಿ ಇಲ್ಲಿದೆ.

ಏನಿದು ಪ್ರಕರಣ?

ಜಮ್ಮು ಮೂಲದ, ಯಂಗ್ ಬೈಟ್ಸ್ ಎಂಬ ಸಂಸ್ಥೆಯ ಮಾಲೀಕನಾದ ವಿಜಯ್ ಗುಪ್ತಾ, 2016 ಮತ್ತು 2026 ರ ನಡುವಿನ ಅವಧಿಯಲ್ಲಿ ಬರೋಬ್ಬರಿ 26 ಬಾರಿ ವಿದೇಶಿ ಪ್ರವಾಸಗಳನ್ನು ಮಾಡಿದ್ದಾನೆ. ವಿಶೇಷವೆಂದರೆ, ದೇಶದ ಪ್ರಧಾನಮಂತ್ರಿಯವರು ವಿದೇಶ ಪ್ರವಾಸ ಕೈಗೊಳ್ಳುವ ಸಮಯದಲ್ಲೇ ಈತನೂ ಆಯಾ ದೇಶಗಳಿಗೆ ಭೇಟಿ ನೀಡುತ್ತಿದ್ದನು. ಅಲ್ಲಿನ ಹಿರಿಯ ರಾಜತಾಂತ್ರಿಕರು ಮತ್ತು ಅಧಿಕಾರಿಗಳೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು, ಭಾರತಕ್ಕೆ ಮರಳಿದ ಬಳಿಕ ಆ ಫೋಟೋಗಳನ್ನು ತೋರಿಸಿ ಜನರನ್ನು ವಂಚಿಸಲು ಅಸ್ತ್ರವಾಗಿ ಬಳಸಿಕೊಳ್ಳುತ್ತಿದ್ದನು ಎನ್ನಲಾಗಿದೆ.

ಹಾಗಾಗಿ, ಕಳೆದ ಮೇ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತು. ಆದರೆ, ಈತ ತನಗಿರುವ ಹೃದಯ ಕಾಯಿಲೆಯ ನೆಪವನ್ನೊಡ್ಡಿ ಜಾಮೀನು ಪಡೆಯಲು ಯತ್ನಿಸಿದ್ದ. ಆದರೆ, ನ್ಯಾಯಾಲಯ ಈಗ ಆತನಿಗೆ ಬಿಗ್ ಶಾಕ್ ನೀಡಿದೆ.

ಮುಂದುವರೆದು, ದೆಹಲಿ ಪೊಲೀಸರು ದಾಖಲಿಸಿದ್ದ FIR ಆಧರಿಸಿ ಜಾರಿ ನಿರ್ದೇಶನಾಲಯವು ಹಣದ ಅಕ್ರಮ ವರ್ಗಾವಣೆ ಕಾಯ್ದೆಯಡಿ ತನಿಖೆ ಕೈಗೆತ್ತಿಕೊಂಡಿತ್ತು. ತನಿಖೆಯ ಪ್ರಕಾರ, ವಿಜಯ್ ಗುಪ್ತಾ ಜಮ್ಮು ಮೂಲದವನಾಗಿದ್ದು, ದೆಹಲಿಯಲ್ಲಿ ತಾನು PMO ಉನ್ನತಾಧಿಕಾರಿ ಎಂದು ಬಿಂಬಿಸಿಕೊಂಡಿದ್ದನು. ಸರ್ಕಾರಿ ಕೆಲಸಗಳು, ವರ್ಗಾವಣೆ ಮತ್ತು ಟೆಂಡರ್‌ಗಳನ್ನು ಕೊಡಿಸುವುದಾಗಿ ನಂಬಿಸಿ ಹಲವರಿನಿಂದ ಬರೋಬ್ಬರಿ 4.06 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಲೂಟಿ ಮಾಡಿದ್ದಾನೆ. ಈ ಅಕ್ರಮ ಹಣವನ್ನು ತನ್ನ ಬ್ಯಾಂಕ್ ಖಾತೆಗಳಿಗೆ ನಗದು ರೂಪದಲ್ಲಿ ಜಮಾ ಮಾಡಿಕೊಂಡಿದ್ದ ಗುಪ್ತಾ, ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ವೇಳೆ ಈ ಆದಾಯವನ್ನು ಮುಚ್ಚಿಟ್ಟಿದ್ದನು ಎನ್ನಲಾಗಿದೆ.

ಏತನ್ಮಧ್ಯೆ, ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದ ನ್ಯಾ. ಧೀರೇಂದ್ರ ರಾಣಾ ನೇತೃತ್ವದ ಪೀಠವು, ತನಿಖೆ ಇನ್ನು ಪ್ರಗತಿಯಲ್ಲಿದ್ದು, ಆರೋಪಿಯು ಸಾಕ್ಷ್ಯ ನಾಶಪಡಿಸುವ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆ ಇರುವುದರಿಂದ ಜಾಮೀನು ನಿರಾಕರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ಜಲಸಂಧಿಯಲ್ಲಿ ಕ್ಷಿಪಣಿ ದಾಳಿ: ಭಾರತೀಯ ನಾವಿಕ ಸಾವು, Iran ರಾಯಭಾರಿಗೆ ಭಾರತ summons..!

New Yorkನಲ್ಲಿ Jaishankar-Guterres ಹೈ-ಲೆವೆಲ್ ಮೀಟಿಂಗ್: ಮಧ್ಯಪ್ರಾಚ್ಯ-ಉಕ್ರೇನ್ ಸಂಘರ್ಷ, ಕಡಲ ಭದ್ರತೆ ಕುರಿತು ಮಹತ್ವದ ಚರ್ಚೆ..!

'Navigation systems' ಸ್ಥಗಿತಗೊಳಿಸಿ ನಿಷೇಧಿತ ಮಾರ್ಗದಲ್ಲಿ ಸಂಚರಿಸಿದ್ದರು', ಎಚ್ಚರಿಕೆ ನೀಡಿದರೂ ನಿರ್ಲಕ್ಷಿಸಿದ್ದರು: UAE ಹಡಗುಗಳ ಮೇಲಿನ ದಾಳಿಗೆ Iran ಸಮರ್ಥನೆ..!

ಗೃಹ ಸಚಿವರ ತವರು ಜಿಲ್ಲೆ ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಸಜಾ ಕೈದಿಗಳು ಪರಾರಿ ‌!

ಕಡಲ ಭದ್ರತೆ, ನಾವಿಕರ ಸುರಕ್ಷತೆಗೆ ಬದ್ಧ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತದ ನಿಲುವು ಸ್ಪಷ್ಟಪಡಿಸಿದ ಜೈಶಂಕರ್