ಬಾಬಾ ರಾಮ್ ದೇವ್ 
ದೇಶ

ಈ ವಯಸ್ಸಿನಲ್ಲಿ ಇದೆಲ್ಲಾ ಬೇಕಿತ್ತಾ? ಆಮಿರ್ ಖಾನ್-ಗೌರಿ ಸ್ಪ್ರಾಟ್ ಮೂರನೇ ಮದುವೆ ಬಗ್ಗೆ ಬಾಬಾ ರಾಮ್ ದೇವ್ ವ್ಯಂಗ್ಯ!

ಈಗ ಬಾಬಾ ರಾಮ್‌ದೇವ್ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಬಹು ವಿವಾಹಗಳ ಕಲ್ಪನೆಯನ್ನು ವಿರೋಧಿಸಿದ್ದು, ಕುಟುಂಬ ಮೌಲ್ಯಗಳ ಬಗ್ಗೆ ಮಾತನಾಡಿದ್ದಾರೆ.

ನವದೆಹಲಿ: ಯೋಗ ಗುರು ಬಾಬಾ ರಾಮದೇವ್ ನಟ ಆಮಿರ್ ಖಾನ್ ಅವರ ಮೂರನೇ ಮದುವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಒಬ್ಬ ವ್ಯಕ್ತಿಯು ಅವರ ಧರ್ಮವನ್ನು ಲೆಕ್ಕಿಸದೆ ಮೂರು ಅಥವಾ ನಾಲ್ಕು ಬಾರಿ ಮದುವೆಯಾಗುವ ಕಲ್ಪನೆಯನ್ನು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಮಿರ್ ಖಾನ್ ಇತ್ತೀಚೆಗೆ ತಮ್ಮ ಗೆಳತಿ ಗೌರಿ ಸ್ಪ್ರಾಟ್ ಅವರನ್ನು 61 ನೇ ವಯಸ್ಸಿನಲ್ಲಿ ವಿವಾಹವಾದರು. ಅವರ ವೈಯಕ್ತಿಕ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಲವಾರು ಪ್ರಮುಖ ವ್ಯಕ್ತಿಗಳು ಇದರ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಈಗ ಬಾಬಾ ರಾಮ್‌ದೇವ್ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಬಹು ವಿವಾಹಗಳ ಕಲ್ಪನೆಯನ್ನು ವಿರೋಧಿಸಿದ್ದು, ಕುಟುಂಬ ಮೌಲ್ಯಗಳ ಬಗ್ಗೆ ಮಾತನಾಡಿದ್ದಾರೆ.

"ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ಕುರಿತ ಪ್ರಶ್ನೆಗೆ ಉತ್ತರಿಸಿದ ಬಾಬಾ ರಾಮದೇವ್, ಜನರು ಒಂದೇ ಮದುವೆ ಮತ್ತು ಸ್ಥಿರವಾದ ಕುಟುಂಬ ನಿರ್ಮಿಸುವತ್ತ ಗಮನಹರಿಸಬೇಕು ಎಂಬುದು ತಮ್ಮ ನಂಬಿಕೆ ಎಂದು ಹೇಳಿದ್ದಾರೆ.

"ಒಬ್ಬರು ಒಂದೇ ಮದುವೆಯಾಗಬೇಕು, ಮಕ್ಕಳನ್ನು ಹೊಂದಿರಬೇಕು ಮತ್ತು ಅವರನ್ನು ಸಮರ್ಥ ಮತ್ತು ಜವಾಬ್ದಾರಿಯುತ ವ್ಯಕ್ತಿಗಳನ್ನಾಗಿ ಮಾಡಬೇಕು ಎಂದು ನಾನು ನಂಬುತ್ತೇನೆ. ಹಿಂದೂ, ಮುಸ್ಲಿಂ ಅಥವಾ ಯಾವುದೇ ಇತರ ಸಮುದಾಯದವರಾಗಿರಲಿ, ಮೂರು ಅಥವಾ ನಾಲ್ಕು ವಿವಾಹಗಳನ್ನು ನಾನು ಬೆಂಬಲಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

"ಈ ವಯಸ್ಸಿನಲ್ಲಿ ಹೊಸ ಸಮಸ್ಯೆಗಳು ಏಕೆ ಬೇಕು? ಹಿಂದಿನ ಪತ್ನಿಯರ ಬಗ್ಗೆ ಇನ್ನೂ ಪ್ರೀತಿ ಮತ್ತು ಗೌರವವಿದ್ದರೆ, ಆ ಸಂಬಂಧಗಳನ್ನು ಕಾಪಾಡಿಕೊಳ್ಳಬೇಕು ಎಂದು ರಾಮದೇವ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ವಿರುದ್ಧ ಅಮೆರಿಕ ಆರೋಪಪಟ್ಟಿ: ಗಡೀಪಾರು ಕುರಿತಂತೆ ವಿದೇಶಾಂಗ ಸಚಿವಾಲಯ ಸ್ಪಷ್ಟನೆ!

ಆದಿಚುಂಚನಗಿರಿ ಮಠಕ್ಕೆ ಸೇರಿದ 100 ಕೋಟಿ ರೂ. ಮೌಲ್ಯದ ಭೂಮಿ ಕಬಳಿಸಲು ನಕಲಿ ದಾಖಲೆ ಸೃಷ್ಟಿ: 6 ಸರ್ಕಾರಿ ಅಧಿಕಾರಿಗಳು ಸೇರಿ 11 ಜನರ ಬಂಧನ!

968 ದಿನಗಳ ಬಳಿಕ ಐತಿಹಾಸಿಕ ತ್ರಿವಳಿ ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ; ಈ ಸಾಧನೆ ಮಾಡಿದ ಜಗತ್ತಿನ 3ನೇ ಬೌಲರ್!

ಸೇಲ್ ಆಗದೇ ಉಳಿದಿದ್ದ ಕೊನೆ ಟಿಕೆಟ್‌ನಿಂದ ಖುಲಾಯಿಸ್ತು ಅದೃಷ್ಟ! ಮೈ ತುಂಬಾ ಸಾಲ ಮಾಡಿಕೊಂಡಿದ್ದ ರೈತನಿಗೆ ಜಾಕ್‌ಪಾಟ್!

ವಾಹನ ಸವಾರರಿಗೆ ಗುಡ್ ನ್ಯೂಸ್: E20 ಪೆಟ್ರೋಲ್‌ನಿಂದ ಎಂಜಿನ್ ಹಾಳಾಗಲ್ಲ, ಮೈಲೇಜೂ​ ಕಮ್ಮಿಯಾಗಲ್ಲ; IIT ಸಂಶೋಧನೆ