ಕೇಂದ್ರ ಸಚಿವ ನಿತಿನ್ ಗಡ್ಕರಿ 
ದೇಶ

E20 ವಿವಾದ: ಕೇಂದ್ರ ಸಚಿವ ನಿತಿನ್ ಗಡ್ಕರಿ ಟಾರ್ಗೆಟ್ ಮಾಡಿದ್ದಕ್ಕಾಗಿ ಕಂಟೆಂಟ್ ಕ್ರಿಯೇಟರ್​​ಗಳ ವಿರುದ್ಧ FIR ದಾಖಲು!

ಕೇಂದ್ರ ಸರ್ಕಾರದ ಎಥೆನಾಲ್-ಮಿಶ್ರಿತ(E20) ಇಂಧನ ನೀತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಆನ್‌ಲೈನ್ ಪೋಸ್ಟ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ನವದೆಹಲಿ: ಎಥೆನಾಲ್-ಮಿಶ್ರಿತ(E20) ಪೆಟ್ರೋಲ್ ನೀತಿಗೆ ಸಂಬಂಧಿಸಿದಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಗುರಿಯಾಗಿಸಿಕೊಂಡು ಮಾನನಷ್ಟಕರ ಡಿಜಿಟಲ್ ಅಭಿಯಾನ ನಡೆಸಿದ್ದಕ್ಕಾಗಿ ನಾಗಪುರ ಸೈಬರ್ ಪೊಲೀಸರು ಹಲವು ಸಾಮಾಜಿಕ ಮಾಧ್ಯಮ ಕಂಟೆಂಟ್ ಕ್ರಿಯೇಟರ್​​ಗಳ ವಿರುದ್ಧ FIR ದಾಖಲಿಸಿದ್ದಾರೆ.

ಕೇಂದ್ರ ಸರ್ಕಾರದ ಎಥೆನಾಲ್-ಮಿಶ್ರಿತ(E20) ಇಂಧನ ನೀತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಆನ್‌ಲೈನ್ ಪೋಸ್ಟ್‌ಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

"ಸ್ವೀಕರಿಸಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದೆ. ಎಫ್‌ಐಆರ್‌ನಲ್ಲಿ ವ್ಯಕ್ತಿಗಳ ಹೆಸರುಗಳು ಮತ್ತು ಪೋಸ್ಟ್‌ಗಳ ಸ್ವರೂಪ ಹಾಗೂ ಕೆಲವು ಜನರು ಮಾಡಿದ ಅಶ್ಲೀಲ ಅಥವಾ ನಿಂದನೀಯ ಕಾಮೆಂಟ್‌ಗಳನ್ನು ವಿವರಿಸಲಾಗಿದೆ. ಪೊಲೀಸರು ಪ್ರಸ್ತುತ ಈ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ..." ಎಂದು ನಾಗ್ಪುರದ ಜಂಟಿ ಪೊಲೀಸ್ ಆಯುಕ್ತ ನವೀನ್‌ಚಂದ್ರ ರೆಡ್ಡಿ ಅವರು ಹೇಳಿದ್ದಾರೆ.

ಈ ಸಂಬಂಧ ಬಿಜೆಪಿ ನಾಗಪುರ ನಗರ ಸಾಮಾಜಿಕ ಮಾಧ್ಯಮ ಕೋಶದ ಸಂಚಾಲಕ ಶಿಶಿರ್ ಅರುಣ್ ತ್ರಿಪಾಠಿ ಅವರು ದೂರ ದಾಖಲಿಸಿದ್ದಾರೆ. ದೂರಿನ ಪ್ರಕಾರ, ಜುಲೈ 3, 2026 ರಂದು ಕಂಟೆಂಟ್ ಸೃಷ್ಟಿಕರ್ತ ಮನೀಶ್ ಕಶ್ಯಪ್ ಅವರು ಅಪ್‌ಲೋಡ್ ಮಾಡಿದ ಯೂಟ್ಯೂಬ್ ವಿಡಿಯೋದಲ್ಲಿ ಸಾರ್ವಜನಿಕರನ್ನು ದಾರಿ ತಪ್ಪಿಸುವ ಉದ್ದೇಶದಿಂದ ಗಡ್ಕರಿ ಮತ್ತು ಎಥೆನಾಲ್ (E20) ಇಂಧನದ ಕುರಿತು ಸುಳ್ಳು, ಮಾನನಷ್ಟಕರ ಮತ್ತು ದಾರಿತಪ್ಪಿಸುವ ಆರೋಪಗಳಿಗೆ ಎಂದು ಹೇಳಲಾಗಿದೆ.

'ದೇಸಿ ಬಾಯ್ಸ್', 'ಹರ್ಷಿತ್ ರಥಿ' ಮತ್ತು 'ಅಂಕಲೇಶ್ ಇನ್ವತಿ' ಸೇರಿದಂತೆ ಇತರ ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ಇದೇ ರೀತಿಯ ದಾರಿತಪ್ಪಿಸುವ ವೀಡಿಯೊಗಳು ಮತ್ತು ಪೋಸ್ಟ್‌ಗಳನ್ನು ಪ್ರಸಾರ ಮಾಡಲಾಗಿದ್ದು, ದೂರುದಾರರು ಕೇಂದ್ರ ಸಚಿವರ ವಿರುದ್ಧ ಆಧಾರರಹಿತ ಮತ್ತು ಆಕ್ಷೇಪಾರ್ಹ ಆರೋಪಗಳನ್ನು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಷಯವು ಸಾರ್ವಜನಿಕ ಶಾಂತಿಯನ್ನು ಕದಡುವ ಮತ್ತು ನಾಗರಿಕರಲ್ಲಿ ಗೊಂದಲವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ SBI Good News : 12,000 ಸಿಬ್ಬಂದಿ ನೇಮಕ, 250 ಶಾಖೆ ತೆರೆಯುವುದಾಗಿ ಘೋಷಣೆ

ಭಾರತದಲ್ಲಿ ಯೂಟ್ಯೂಬರ್, ಕಂಟೆಂಟ್‌ ಕ್ರಿಯೇಟರ್ಸ್‌ ಹಾವಳಿ: ದೊಡ್ಡ ಪ್ರಮಾಣದಲ್ಲಿ ಆದಾಯ ಬರ್ತಿದೆಯಾ? ಹೇಗೆಲ್ಲಾ ದುಡ್ಡು ಮಾಡಬಹುದು ಗೊತ್ತಾ?

ಡಿಕೆಶಿಗೆ ಟಕ್ಕರ್ ಕೊಡಲು ಹೊಸ ತಂತ್ರ: AHINDA ಮುರಿದು ‘HINDA’ ಕಟ್ಟಲು ಸಿದ್ದು ಮಾಸ್ಟರ್ ಪ್ಲ್ಯಾನ್, ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?