ನವದೆಹಲಿ: ಜುಲೈ 19ರ ಸಂಜೆ ಉಕ್ರೇನ್ನ ಒಡೆಸ್ಸಾ ಬಂದರಿನಲ್ಲಿ ಹಡಗಿನ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದ್ದು ಭಾರತ ಈ ದಾಳಿಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ದಾಳಿಯ ಸಮಯದಲ್ಲಿ, ಎಂವಿ ಗೋಲ್ಡನ್ ಲಿಯೋ ಐದು ಭಾರತೀಯ ಪ್ರಜೆಗಳು ಸೇರಿದಂತೆ 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು.
ಉಕ್ರೇನ್ನಲ್ಲಿರುವ ನಮ್ಮ ತಂಡವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಸರ್ಕಾರ ಸಂತಾಪ ಸೂಚಿಸುತ್ತಿದ್ದು ಗಾಯಗೊಂಡ ಸಿಬ್ಬಂದಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.
ಭಾರತ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ವಾಣಿಜ್ಯ ಸಾಗಣೆಯನ್ನು ಗುರಿಯಾಗಿಸುವುದು, ನಾಗರಿಕ ಸಿಬ್ಬಂದಿಗೆ ಅಪಾಯವನ್ನುಂಟುಮಾಡುವುದು ಮತ್ತು ವ್ಯಾಪಾರ ಸ್ವಾತಂತ್ರ್ಯವನ್ನು ಅಡ್ಡಿಪಡಿಸುವುದು ಅತ್ಯಂತ ಶೋಚನೀಯ ಮತ್ತು ಅದನ್ನು ತಪ್ಪಿಸಬೇಕು ಎಂದು ಹೇಳಿದೆ.