ಕಾಕ್ರೋಚ್ 'ಸಂಸತ್ ಚಲೋ' ಪ್ರತಿಭಟನೆ 
ದೇಶ

ಕಾಕ್ರೋಚ್ 'ಸಂಸತ್ ಚಲೋ': ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ವೆಂಟಿಲೇಟರ್‌ನಲ್ಲಿ ಜೀವನ್ಮರಣ ಹೋರಾಟ!

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ​ ಪಾರ್ಟಿ ಸೋಮವಾರ "ಸಂಸತ್ ಚಲೋ" ಪ್ರತಿಭಟನಾ ಮೆರವಣಿಗೆ ನಡೆಸಿತು.

ನವದೆಹಲಿ: ನವದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ)ದ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿಗೆ ರಾಮ್ ಮನೋಹರ್ ಲೋಹಿಯಾ(ಆರ್‌ಎಂಎಲ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೆಂಟಿಲೇಟರ್ ಬೆಂಬಲ ನೀಡಲಾಗಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ​ ಪಾರ್ಟಿ ಸೋಮವಾರ "ಸಂಸತ್ ಚಲೋ" ಪ್ರತಿಭಟನಾ ಮೆರವಣಿಗೆ ನಡೆಸಿತು.

"ಸಿಜೆಪಿ ಪ್ರತಿಭಟನೆಯ ಸಂದರ್ಭದಲ್ಲಿ ಪೊಲೀಸರು ನಡೆಸಿದ ಲಾಠಿ ಚಾರ್ಜ್ ವೇಳೆ ಗಾಯಗೊಂಡಿದ್ದ ಯುವತಿ ಆರ್‌ಎಂಎಲ್‌ ಆಸ್ಪತ್ರೆಯಲ್ಲಿ ವೆಂಟಿಲೇಟರ್‌ನಲ್ಲಿದ್ದಾರೆ" ಎಂದು ಮೂಲಗಳು ಹೆಚ್ಚಿನ ವಿವರಗಳನ್ನು ನೀಡದೆ ತಿಳಿಸಿವೆ.

ಸೋಮವಾರ ದೆಹಲಿ ಪೊಲೀಸರು ಒಂದು ಹೇಳಿಕೆಯಲ್ಲಿ, ಪ್ರತಿಭಟನೆಯ ಸಮಯದಲ್ಲಿ 118ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿಕೊಂಡಿದ್ದರು. ಅಲ್ಲದೆ 60 ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ ಎಂದಿದ್ದರು.

ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಆರೋಪ, ವಿದ್ಯಾರ್ಥಿಗಳ ಆತ್ಮಹತ್ಯೆ ಮತ್ತು ದೇಶದ ಪರೀಕ್ಷಾ ವ್ಯವಸ್ಥೆಗೆ ಸಂಬಂಧಿಸಿದ ತೀವ್ರ ಕಳವಳಗಳ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ, ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ ಸಿಜೆಪಿ ಸಂಸತ್ ಚಲೋ ಮೆರವಣಿಗೆ ಆರಂಭಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Newdelhi: ಪ್ರಧಾನಿ ನಿವಾಸದ ಹೊರಗಡೆ ಪ್ರತಿಭಟನೆ, ರಾಹುಲ್, ಪ್ರಿಯಾಂಕಾ ಗಾಂಧಿ, ಅಖಿಲೇಶ್ ಯಾದವ್ ವಶಕ್ಕೆ ಪಡೆದ ಪೊಲೀಸರು! Video

Delhi protest crackdown: ಪ್ರಧಾನಿ ಮೋದಿ ನಿವಾಸದ ಹೊರಗೆ ಪ್ರತಿಭಟನೆ ನಿಲ್ಲಿಸಲು ರಾಹುಲ್ ನಕಾರ; ಕಾಂಗ್ರೆಸ್ ನ ಆರು ಬೇಡಿಕೆಗಳೇನು?

ಪ್ರಧಾನಿ ನಿವಾಸದ ಮುಂದೆ ರಾಹುಲ್ ನೇತೃತ್ವದಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆ; ಮೋದಿ, ಅಮಿತ್‌ ಶಾ, ಪ್ರಧಾನ್‌ ರಾಜೀನಾಮೆಗೆ ಪಟ್ಟು; Video

CJP Protest LIVE Updates | ಪ್ರತಿಭಟನೆ ಮುಂದುವರಿಯಲಿದೆ; ಭರವಸೆ ಕಳೆದುಕೊಳ್ಳಬೇಡಿ: ಸಿಜೆಪಿಯ ಅಭಿಜೀತ್ ದೀಪ್ಕೆ ವಿನಂತಿ

NEET ಮರು ಪರೀಕ್ಷೆಯಲ್ಲೂ ಗೊಂದಲ: 522 ಅಂಕ ಬರಬೇಕಿದ್ದ ವಿದ್ಯಾರ್ಥಿಗೆ ಬಂದಿದ್ದು ಕೇವಲ 95, ಹೈಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿ!