ಮಹುವಾ ಮೊಯಿತ್ರಾ 
ದೇಶ

ರಾಜಿನಾಮೆ ಪತ್ರ ಬರೆಯುವುದು ಗೊತ್ತಿಲ್ಲವೇ, RSS ನಿಮಗೆ ಹೇಳಿಕೊಟ್ಟಿಲ್ಲವೇ?: ಮಹುವಾ ಮೊಯಿತ್ರಾ ವ್ಯಂಗ್ಯ

ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷವು ಆಯೋಜಿಸಿರುವ ಪ್ರತಿಭಟನೆಗಳ ನಡುವೆ ಈ ಹೇಳಿಕೆ ಬಂದಿದೆ.

ನವದೆಹಲಿ: ಬಹುಶಃ ಶಿಕ್ಷಣ ಸಚಿವರಿಗೆ ರಾಜಿನಾಮೆ ಪತ್ರ ಬರೆಯುವುದೇ ಗೊತ್ತಿಲ್ಲ, ಆರ್ ಎಸ್ ಎಸ್ ಅವರಿಗೆ ರಾಜಿನಾಮೆ ಪತ್ರ ಬರೆಯುವುದನ್ನು ಕಲಿಸಿಲ್ಲ ಎಂದು TMC ಸಂಸದೆ ಮಹುವಾ ಮೊಯಿತ್ರಾ ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,ಆರ್ ಎಸ್ ಎಸ್ ನಿಮಗೆ ಕ್ಷಮಾದಾನ ಅರ್ಜಿಗಳನ್ನು ಬರೆಯುವುದನ್ನಷ್ಟೇ ಕಲಿಸುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷವು ಆಯೋಜಿಸಿರುವ ಪ್ರತಿಭಟನೆಗಳ ನಡುವೆ ಈ ಹೇಳಿಕೆ ಬಂದಿದೆ.

ಇದೇ ವೇಳೆ ನೀಟ್ ಹಾಗೂ ವಿದ್ಯಾರ್ಥಿಗಳ ಇತರೆ ನೈಜ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಸಂಸತ್ತಿನ ಸದನದಲ್ಲಿ ನೀಟ್ ಸೇರಿದಂತೆ ಯುವಕರ ಎಲ್ಲಾ ನೈಜ ಸಮಸ್ಯೆಗಳ ಕುರಿತು ಚರ್ಚಿಸಲು ನಮ್ಮ ಸರ್ಕಾರ ಶೇ.100ರಷ್ಟು ಸಿದ್ಧವಾಗಿದೆ. ಭಾರತದ ವಿದ್ಯಾರ್ಥಿಗಳನ್ನು ರಾಜಕೀಯ ಅಭಿಯಾನದ ವಸ್ತುವಾಗಿ ಬಳಸಬಾರದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿಯಲ್ಲಿ ಮಹಾ ಸಂಘರ್ಷ: Iran 3 ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕಾ ದಾಳಿ; 'ಕಠಿಣ ಪ್ರತೀಕಾರ'ದ ಶಪಥ ಮಾಡಿದ ಟೆಹ್ರಾನ್!

100 ದಿನಗಳ ಹೊಸ್ತಿಲಲ್ಲಿ ಡಿಕೆಶಿ ಸರ್ಕಾರ: ಸಾಧನೆಗಳ ಪಟ್ಟಿ ಹಿಡಿದು ಕಾಂಗ್ರೆಸ್ ಅಖಾಡಕ್ಕೆ, ‘ಯು-ಟರ್ನ್’ ಅಸ್ತ್ರದೊಂದಿಗೆ ವಿಪಕ್ಷಗಳ ಕೌಂಟರ್‌..!

ಭಾರತದಲ್ಲಿ ಯೂಟ್ಯೂಬರ್, ಕಂಟೆಂಟ್‌ ಕ್ರಿಯೇಟರ್ಸ್‌ ಹಾವಳಿ: ದೊಡ್ಡ ಪ್ರಮಾಣದಲ್ಲಿ ಆದಾಯ ಬರ್ತಿದೆಯಾ? ಹೇಗೆಲ್ಲಾ ದುಡ್ಡು ಮಾಡಬಹುದು ಗೊತ್ತಾ?

ಡಿಕೆಶಿಗೆ ಟಕ್ಕರ್ ಕೊಡಲು ಹೊಸ ತಂತ್ರ: AHINDA ಮುರಿದು ‘HINDA’ ಕಟ್ಟಲು ಸಿದ್ದು ಮಾಸ್ಟರ್ ಪ್ಲ್ಯಾನ್, ಮಗನ ಭವಿಷ್ಯಕ್ಕಾಗಿ ಹಳೆಯ ಮಿತ್ರರಿಗೆ ಗೇಟ್‌ಪಾಸ್?

ವಿಶ್ವಕಪ್ 2026: ಶಫಾಲಿ ವರ್ಮಾ ಗೆ ಫೆವಿಲಿಯನ್ ಗೆ ಹೋಗು ಎನ್ನುವಂತೆ ಕೈ ಸನ್ನೆ, ಪಾಕ್ ನಾಯಕಿ ವಿರುದ್ಧ ಭಾರತೀಯರ ಆಕ್ರೋಶ, ಟ್ರೋಲ್! Video