ಸಿಜೆಪಿಗೆ ಬೆಂಬಲ ಸೂಚಿಸುವ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಶಿವಾಜಿ ಪಾರ್ಕ್ ಬಳಿ ಜಮಾಯಿಸಿರುವ ವಿದ್ಯಾರ್ಥಿಗಳು. Photo | PTI
ದೇಶ

ಡ್ರಗ್ಸ್ ಕೇಸ್‌ನಲ್ಲಿ ಫಿಟ್ ಮಾಡುವುದಾಗಿ ವಿದ್ಯಾರ್ಥಿ ಪ್ರತಿಭಟನಾಕಾರರಿಗೆ ಪೊಲೀಸರಿಂದ ಬೆದರಿಕೆ; ತನಿಖೆಗೆ ಆದೇಶ

ದೆಹಲಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಗೆ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ನೂರಾರು ವಿದ್ಯಾರ್ಥಿಗಳು ಮುಂಬೈನಲ್ಲಿಯೂ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯನ್ನು ಮುಂದುವರಿಸಲು ಮರಳಿದರೆ ಸುಳ್ಳು ಮಾದಕವಸ್ತು ಪ್ರಕರಣಗಳನ್ನು ದಾಖಲಿಸುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ವಿದ್ಯಾರ್ಥಿ ಪ್ರತಿಭಟನಾಕಾರರಿಗೆ ಬೆದರಿಕೆ ಹಾಕುತ್ತಿರುವ ದೃಶ್ಯವಿರುವ ವಿಡಿಯೋಗೆ ಸಂಬಂಧಿಸಿದಂತೆ, ಮುಂಬೈ ಪೊಲೀಸರು ಗುರುವಾರ ತನಿಖೆಗೆ ಆದೇಶಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆನ್‌ಲೈನ್‌ನಲ್ಲಿ ವ್ಯಾಪಕ ವೈರಲ್ ಆಗಿರುವ ವಿಡಿಯೋದಲ್ಲಿ, ಪೊಲೀಸ್ ಚಾಲಕರೊಬ್ಬರು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದು, ಅವರು ಮುಂದಿನ ಪ್ರತಿಭಟನೆಗಳಲ್ಲಿ ಭಾಗವಹಿಸಿದರೆ ಅವರನ್ನು ನಕಲಿ ಮಾದಕವಸ್ತು ಪ್ರಕರಣಗಳಲ್ಲಿ ಸಿಲುಕಿಸಿ, ತಮ್ಮ ಜೀವನದ ಉಳಿದ ಭಾಗವನ್ನು ಜೈಲಿನಲ್ಲಿ ಕಳೆಯುವಂತೆ ಮಾಡಲಾಗುವುದು ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

ಈ ವಿಡಿಯೋವನ್ನು ಎಕ್ಸ್‌ನಲ್ಲಿನ ಪೋಸ್ಟ್‌ವೊಂದರಲ್ಲಿ ಹಂಚಿಕೊಳ್ಳಲಾಗಿದ್ದು, ಇದು ಮುಂಬೈ ಪೊಲೀಸ್ ಮತ್ತು ಎನ್‌ಸಿಬಿಯ ಕಾರ್ಯವೈಖರಿಯೇ? ಎನ್‌ಸಿಬಿ ಪ್ರಕರಣಗಳನ್ನು ಹೀಗೆಯೇ ದಾಖಲಿಸುತ್ತದೆಯೇ? ವಿದ್ಯಾರ್ಥಿಗಳ ಜೇಬಿನಲ್ಲಿ ಮಾದಕ ದ್ರವ್ಯದ ಪುಡಿಯನ್ನು ಇರಿಸುವುದಾಗಿ (ಸಿಕ್ಕಿಹಾಕಿಸುವುದಾಗಿ) ಪೊಲೀಸ್ ಅಧಿಕಾರಿಯೊಬ್ಬರು ಬೆದರಿಕೆ ಹಾಕಿದ್ದಾರೆ! ಎಂದು ಬರೆಯಲಾಗಿದೆ.

ಈ ಘಟನೆಯ ಕುರಿತು ತನಿಖೆಗೆ ಆದೇಶಿಸಲಾಗಿದೆ. 'ವಾಸ್ತವಾಂಶಗಳನ್ನು ಪರಿಶೀಲಿಸಿದ ನಂತರ, ತನಿಖೆ ಪೂರ್ಣಗೊಳ್ಳುವವರೆಗೆ ಸಂಬಂಧಪಟ್ಟ ಚಾಲಕರನ್ನು ಅವರ ಸದ್ಯದ ಹುದ್ದೆಯಿಂದ ಬದಲಾಯಿಸಲಾಗಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿಯಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನೇತೃತ್ವದ ವಿದ್ಯಾರ್ಥಿ ಪ್ರತಿಭಟನೆಗೆ ಒಗ್ಗಟ್ಟು ಪ್ರದರ್ಶಿಸುವ ಸಲುವಾಗಿ ನೂರಾರು ವಿದ್ಯಾರ್ಥಿಗಳು ಮುಂಬೈನಲ್ಲಿಯೂ ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!