ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು 
ದೇಶ

'ಪ್ರಜಾಪ್ರಭುತ್ವ ಉಳಿಸಿ': CJP Protest ಬೆಂಬಲಿಸಿ ಸಂವಿಧಾನದ ಪ್ರಸ್ತಾವನೆ ಓದಿದ ಸುಪ್ರೀಂ ಕೋರ್ಟ್ ವಕೀಲರು!

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಎಸ್ ಮುರಳೀಧರ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್‌ನ ಆವರಣದಲ್ಲಿ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ" ಘೋಷವಾಕ್ಯದಡಿ ವಕೀಲರು ಸಂವಿಧಾನದ ಪ್ರಸ್ತಾವನೆ ಓದಿ, ರಾಷ್ಟ್ರಗೀತೆ ಹಾಡಿದರು.

ನವದೆಹಲಿ: ನೀಟ್ ಅಕ್ರಮ ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೆಂಬಲಿಸಿ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮವನ್ನು ಖಂಡಿಸಿ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಕೀಲರು ನಮ್ಮ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ" ಅಭಿಯಾನದ ಭಾಗವಾಗಿ ಸಂವಿಧಾನದ ಪ್ರಸ್ತಾವನೆಯನ್ನು ಓದಿದರು.

ಹಿರಿಯ ವಕೀಲರಾದ ಇಂದಿರಾ ಜೈಸಿಂಗ್ ಮತ್ತು ಎಸ್ ಮುರಳೀಧರ್ ಅವರ ನೇತೃತ್ವದಲ್ಲಿ ಸುಪ್ರೀಂ ಕೋರ್ಟ್‌ನ ಆವರಣದಲ್ಲಿ "ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ" ಘೋಷವಾಕ್ಯದಡಿ ವಕೀಲರು ಸಂವಿಧಾನದ ಪ್ರಸ್ತಾವನೆ ಓದಿ, ರಾಷ್ಟ್ರಗೀತೆ ಹಾಡಿದರು.

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ ಅಧ್ಯಕ್ಷ ಮತ್ತು ಹಿರಿಯ ವಕೀಲ ವಿಕಾಸ್ ಸಿಂಗ್ ಕೂಡ ಉಪಸ್ಥಿತರಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಇಂದಿರಾ ಜೈಸಿಂಗ್ ಅವರು, "ನಾವು ವಿದ್ಯಾರ್ಥಿಗಳ ಪರವಾಗಿ ನಿಲ್ಲಲು ಇಲ್ಲಿಗೆ ಬಂದಿದ್ದೇವೆ. ನ್ಯಾಯದ ಪರವಾಗಿ ನಿಲ್ಲಲು ಬಂದಿದ್ದೇವೆ. ವಿದ್ಯಾರ್ಥಿಗಳಿಗೆ ನ್ಯಾಯವನ್ನು ಕೋರಲು ನಾವು ಇಲ್ಲಿದ್ದೇವೆ. ನಾವು ನಮಗಾಗಿ ಆಂದೋಲನ ಮಾಡಲು ಇಲ್ಲಿಗೆ ಬಂದಿಲ್ಲ. ಇದು ನಮ್ಮ ಬಗ್ಗೆ ಅಲ್ಲ" ಎಂದು ಹೇಳಿದರು.

ಈ ವಿಚಾರ ವಿದ್ಯಾರ್ಥಿಗಳಿಗೆ ಸಂಬಂಧಿಸಿದ್ದು, ನಾವು ಸುಪ್ರೀಂ ಕೋರ್ಟ್ ಮುಂದೆ ನಿಂತು ಅವರಿಗೆ ನ್ಯಾಯ ಸಿಗಬೇಕು ಎಂದು ಧ್ವನಿ ಎತ್ತುವುದು ವಕೀಲರ ಕರ್ತವ್ಯವಾಗಿದೆ. ದೇಶದ ಸುಪ್ರೀಂ ಕೋರ್ಟ್ ಕರ್ತವ್ಯವೇ ನ್ಯಾಯ ಕಾಪಾಡುವುದು. ಅದಕ್ಕಾಗಿಯೇ ನಾವು ಬೇಡಿಕೆಗಳೊಂದಿಗೆ ನ್ಯಾಯ ಮಂದಿರಕ್ಕೆ ಬಂದಿದ್ದೇವೆ ಎಂದು ಜೈಸಿಂಗ್ ತಿಳಿಸಿದರು.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಯುವಕರು "ಜಿರಳೆಗಳು" ಇದ್ದಂತೆ ಎಂದು ಟೀಕಿಸಿದ ನಂತರ ಸ್ಥಾಪನೆಯಾದ ಕಾಕ್ರೋಚ್ ಜನತಾ ಪಾರ್ಟಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ವ್ಯವಸ್ಥೆಯಲ್ಲಿನ ಅಕ್ರಮಗಳ ವಿರುದ್ಧ ಜೂನ್ 20 ರಿಂದ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಗಾರು ಅಧಿವೇಶನ: ಪ್ರತಿಪಕ್ಷಗಳ NEET ಬಿಸಿಗೆ ಕೇಂದ್ರ ತಲ್ಲಣ; ಉಭಯ ಸದನ 4ನೇ ದಿನಕ್ಕೆ ಮುಂದೂಡಿಕೆ!

CJP Protest: ಹೊಸ ಮಾತುಕತೆಯ ಪ್ರಸ್ತಾಪ ಮುಂದಿಟ್ಟ ಕೇಂದ್ರ ಸರ್ಕಾರ, ಪ್ರತಿಭಟನಾಕಾರರು ಎಲ್ಲಿ ಹೇಳ್ತಾರೋ ಅಲ್ಲಿಯೇ ಚರ್ಚೆಗೆ ಸಿದ್ಧ- ಜೀತೇಂದ್ರ ಸಿಂಗ್!

CJP ಪ್ರತಿಭಟನೆಗೆ ಅಣ್ಣಾ ಹಜಾರೆ ಎಂಟ್ರಿ: ಕಣ್ಣೀರು ಮೂಲಕ ಮೌನ ಚಳುವಳಿ ಆರಂಭ, Video!

ಅತಿಯಾಗಿ ಕಾಫಿ ಕುಡಿತೀರಾ? ಹುಷಾರ್, ಮುಂದೆ ಈ ಸಮಸ್ಯೆ ಎದುರಾಗಬಹುದು! Neurosurgeon ಸಲಹೆ ಏನು?

ಮೋದಿ ಮನೆ ಬಳಿ ರಾಹುಲ್​ ಗಾಂಧಿ ಪ್ರತಿಭಟನೆ ಪ್ರಶ್ನಿಸಿದ ವಾಂಗ್‌ಚುಕ್ ಪತ್ನಿ; ಅದರಲ್ಲಿ ಪ್ರಾಮಾಣಿಕತೆ ಇರಲಿಲ್ಲ ಎಂದು ಕಿಡಿ!