ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಚಿತ್ರ 
ದೇಶ

10 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ ದಂಡ: ಪ್ರಶ್ನೆಪತ್ರಿಕೆ ಸೋರಿಕೆ, ಕಠಿಣ ಶಿಕ್ಷೆ ವಿಧಿಸುವ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ!

ಈ ಕಾನೂನು ಜಾರಿಗೆ ಬರುವ ಮುನ್ನಾ ಕೇಂದ್ರ ಸರ್ಕಾರ ಮತ್ತು ಅದರ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮ ಮಾರ್ಗ ಅನುಸರಿಸುವ ಅಥವಾ ಅಪರಾಧವೆಸಗುವ ವಿವಿಧ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ದಿಷ್ಟ ಹಾಗೂ ಸಮಗ್ರ ಕಾನೂನು ಇರಲಿಲ್ಲ.

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರದಲ್ಲಿ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವಂತೆಯೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದೆ.ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ ನೀಡಿದೆ.

2024ರಲ್ಲೂ ಇದೇ ರೀತಿಯ ಹೊಸ ಕಾನೂನನ್ನು ಜಾರಿಗೆ ತಂದಿತ್ತು. ಪಬ್ಲಿಕ್ ಪರೀಕ್ಷೆಗಳ ಅಕ್ರಮಗಳ ತಡೆ ಕಾಯ್ದೆ 2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ ಸುಮಾರು 4 ತಿಂಗಳ ನಂತರ ಅದೇ ವರ್ಷದ ಜೂನ್ ತಿಂಗಳಲ್ಲಿ ಬಿಲ್ ಅಧಿಸೂಚನೆ ಹೊರಡಿಸಲಾಗಿತ್ತು.

ಈ ಕಾನೂನು ಜಾರಿಗೆ ಬರುವ ಮುನ್ನಾ ಕೇಂದ್ರ ಸರ್ಕಾರ ಮತ್ತು ಅದರ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮ ಮಾರ್ಗ ಅನುಸರಿಸುವ ಅಥವಾ ಅಪರಾಧವೆಸಗುವ ವಿವಿಧ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ದಿಷ್ಟ ಹಾಗೂ ಸಮಗ್ರ ಕಾನೂನು ಇರಲಿಲ್ಲ.

ಈ ಕಾಯ್ದೆಯು ಕೇಂದ್ರ ಲೋಕಸೇವಾ ಆಯೋಗ (UPSC), ಸಿಬ್ಬಂದಿ ನೇಮಕಾತಿ ಆಯೋಗ (SSC), ರೈಲ್ವೆ, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮುಂತಾದವು ನಡೆಸುವ ಪಬ್ಲಿಕ್ ಪರೀಕ್ಷೆಗಳಲ್ಲಿ ಅಕ್ರಮ ಮಾರ್ಗಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿದೆ.

ನಕಲು ಮಾಡುವುದನ್ನು ತಡೆಯಲು ಈ ಹಿಂದಿನ ಮಸೂದೆಯಲ್ಲಿ ಕನಿಷ್ಠ ಮೂರರಿಂದ ಐದು ವರ್ಷಗಳ ಜೈಲು ಶಿಕ್ಷೆಯ ಅವಕಾಶವಿತ್ತು. ಆದರೆ, ಸಂಘಟಿತ ಅಪರಾಧದ ಮೂಲಕ ನಕಲು ಮಾಡುವಲ್ಲಿ ಭಾಗಿಯಾದವರಿಗೆ ಐದರಿಂದ 10 ವರ್ಷಗಳ ಜೈಲು ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡ ವಿಧಿಸುವ ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.

ಮಸೂದೆಯು ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡುವುದು, OMR ಹಾಳೆಗಳನ್ನು ತಿರುಚುವುದು, ನಕಲಿ ವೆಬ್‌ಸೈಟ್‌ಗಳನ್ನು ರಚಿಸುವುದು ಮತ್ತು ನಕಲಿ ಪ್ರವೇಶ ಪತ್ರಗಳನ್ನು ನೀಡುವುದು ಸೇರಿದಂತೆ 15 ಕಾನೂನುಬಾಹಿರ ಕೃತ್ಯಗಳನ್ನು ವಿವರಿಸುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET ಪರೀಕ್ಷೆ ನಡೆಸುವ NTA ನಲ್ಲಿ ಮೇಜರ್ ಸರ್ಜರಿ: 47 ಅಧಿಕಾರಿಗಳನ್ನು ವಜಾಗೊಳಿಸಿದ ಕೇಂದ್ರ ಸರ್ಕಾರ!

ಪಾಕಿಸ್ತಾನದಲ್ಲಿ ರಕ್ತದೋಕುಳಿ: ಸೇನಾ ಚೆಕ್‌ಪಾಯಿಂಟ್‌ ಧ್ವಂಸ; 15 Pak ಸೈನಿಕರು ಬಲಿ, 12 ಉಗ್ರರು ಸಾವು!

ಪ್ರಧಾನ್ ರಾಜಿನಾಮೆ ಕುರಿತು ಕೇಂದ್ರ ನಾಳೆ ನಿರ್ಧಾರ; ಮೃತ NEET ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ ಪರಿಹಾರಕ್ಕೆ ತಾತ್ವಿಕ ಒಪ್ಪಿಗೆ: CJP; Video

ಧರ್ಮೇಂದ್ರ ಪ್ರಧಾನ್ ಒಬ್ಬ 'ಕ್ರಿಮಿನಲ್ ಶಿಕ್ಷಣ ಸಚಿವ'; ವಿದ್ಯಾರ್ಥಿಗಳಿಗೆ ಪೆಲೆಟ್ ಗನ್ ಗಾಯ; ಮೋದಿ ಕ್ಷಮೆ ಕೇಳಲಿ: ರಾಹುಲ್ ಆಗ್ರಹ; Video

ಹಿಮಾಚಲದಲ್ಲಿ ಭೀಕರ ಅಪಘಾತ: ಭೂಕುಸಿತದ ವೇಳೆ ಟಾಟಾ ಸುಮೋ ಮೇಲೆ ಬಂಡೆ ಬಿದ್ದು 13 ಮಂದಿ ದುರ್ಮರಣ! Video