ದಿಯಾ ಮಿರ್ಜಾ  
ದೇಶ

'ಕಿಂಚಿತ್ತೂ ಸಹಾನುಭೂತಿಯಿಲ್ಲ': ಇದು ಅಷ್ಟೊಂದು ಕಷ್ಟದ ಕೆಲಸವೇ?, ಬಾಯ್ಬಿಡಲು 47 ದಿನ ಬೇಕಾಯಿತೇ?; ಮೋದಿ ವಿರುದ್ಧ ದಿಯಾ ಮಿರ್ಜಾ ಕಿಡಿ!

ಗುರುವಾರ ಬೆಳಿಗ್ಗೆ 'ಎಕ್ಸ್'ನಲ್ಲಿನ ಪೋಸ್ಟ್‌ನಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು 'ಫಾಸ್ಟ್-ಟ್ರ್ಯಾಕ್' ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಮೋದಿ ಘೋಷಿಸಿದರು.

ನವದೆಹಲಿ: ಸದ್ಯ ದೆಹಲಿಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆಯನ್ನು ಪ್ರಶ್ನಿಸಿ ನಟಿ ದಿಯಾ ಮಿರ್ಜಾ ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪ, ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯಿಂದ ಬಾಧಿತರಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ವಿದ್ಯಾರ್ಥಿಗಳು ಜೂನ್ 20 ರಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗುರುವಾರ ಬೆಳಿಗ್ಗೆ 'ಎಕ್ಸ್'ನಲ್ಲಿನ ಪೋಸ್ಟ್‌ನಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು 'ಫಾಸ್ಟ್-ಟ್ರ್ಯಾಕ್' ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಮೋದಿ ಘೋಷಿಸಿದರು.

ಆ ವಿಡಿಯೋಗೆ ಪ್ರತಿಕ್ರಿಯೆಯಾಗಿ ಮಿರ್ಜಾ, 'ತಮ್ಮ ಮಕ್ಕಳನ್ನು ಕಳೆದುಕೊಂಡ ಪೋಷಕರಿಗಾಗಲಿ, ಮೃತಪಟ್ಟ ಮಕ್ಕಳಿಗಾಗಲಿ, ತಮ್ಮ ಹಕ್ಕುಗಳಿಗಾಗಿ ಆಗ್ರಹಿಸುತ್ತಿರುವ ವಿದ್ಯಾರ್ಥಿಗಳ ಅಸಾಧಾರಣ ಛಲಕ್ಕಾಗಲಿ ಅಥವಾ ವಾರಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ ಸೋನಮ್ ಜೀ ಮತ್ತು ವಿದ್ಯಾರ್ಥಿಗಳಿಗಾಗಲಿ... ಇವರಾರ ಬಗ್ಗೆಯೂ ನಿಮ್ಮಲ್ಲಿ ಕಿಂಚಿತ್ತೂ ಸಹಾನುಭೂತಿಯ ಮಾತುಗಳಿಲ್ಲ' ಎಂದು ಅವರು ಬರೆದಿದ್ದಾರೆ.

'ಸರ್, ಇದೇನು ಅಷ್ಟೊಂದು ಕಷ್ಟದ ಕೆಲಸವೇ? ನೀವು ಏನನ್ನಾದರೂ ಹೇಳಲು 47 ದಿನಗಳನ್ನೇ ತೆಗೆದುಕೊಂಡಿರಿ. ಕೊನೆಗೂ ನೀವು ಮಾತನಾಡಿದಾಗಲೂ, ಏನನ್ನೂ ಹೇಳಲಿಲ್ಲ. ಲಕ್ಷಾಂತರ ವಿದ್ಯಾರ್ಥಿಗಳ ಒಡೆದಿರುವ ಹೃದಯಗಳಿಗೆ ಸಾಂತ್ವನ ನೀಡುವಂತಹ ಮಾತುಗಳನ್ನಂತೂ ಖಂಡಿತಾ ಆಡಲಿಲ್ಲ' ಎಂದು ಕಿಡಿಕಾರಿದ್ದಾರೆ.

ಮಿರ್ಜಾ ಈ ಹಿಂದೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸುವ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು.

'ನಾನು ಈ ದೇಶದ ವಿದ್ಯಾರ್ಥಿಗಳ ಪರವಾಗಿದ್ದೇನೆ. ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ನಾನು ಬೆಂಬಲಿಸುತ್ತೇನೆ. ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹೊಣೆಗಾರಿಕೆ, ಪಾರದರ್ಶಕತೆ ಮತ್ತು ಸುಧಾರಣೆಗಳಿಗಾಗಿ ಇರುವ ಬೇಡಿಕೆಗೆ ನಾನು ಬೆಂಬಲ ನೀಡುತ್ತೇನೆ' ಎಂದು ಅವರು ತಮ್ಮ ಹಿಂದಿನ ಪೋಸ್ಟ್‌ನಲ್ಲಿ ಬರೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಲೋಕಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ..!

ಕೆಆರ್ ಎಸ್, ಕಬಿನಿ ಖಾಲಿ ಖಾಲಿ: ಏಷ್ಯಾದ ಮೊದಲ ವಿದ್ಯುತ್ ಉತ್ಪಾದನಾ ಘಟಕ ಸ್ಥಗಿತ; ರಾಜ್ಯದಲ್ಲಿ ಕರೆಂಟ್ ಕೊರತೆ ಸಾಧ್ಯತೆ!

ದಿಟ್ಟಿಸಿ ನೋಡಿದ್ದೇ ತಪ್ಪಾಯಿತೇ? ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು; ಟಂ-ಟಂ ಚಾಲಕನ ಭೀಕರ ಹತ್ಯೆ

ಇಂದೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಮಧ್ಯಾಹ್ನ 12.30 ಕ್ಕೆ CJP, ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ

ಕೇಂದ್ರದ ಭರವಸೆಗೆ ಮಣಿದ Sonam Wangchuk: 26 ದಿನಗಳ ಉಪವಾಸ ಅಂತ್ಯ, Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!