ಪಾಟ್ನ: ಬಿಹಾರದಲ್ಲಿ Gen-Z ಗಳ ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಬಿಡಿಒ ರಿತೇಶ್ ಕುಮಾರ್ ತಲೆಬುರುಡೆಗೆ ತೀವ್ರ ಗಾಯಗಳಾಗಿವೆ.
Gen-Z ಗಳ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಚಪ್ರಾದ ಬಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ರಿತೇಶ್ ಕುಮಾರ್ ಸಿಂಗ್ ತಲೆ ಬುರುಡೆಗೆ ಪೆಟ್ಟು ಬಿದ್ದಿದ್ದು, ಮಾರಣಾಂತಿಕ ಹಲ್ಲೆಗೊಳಗಾದ ಅವರ ಆರೋಗ್ಯ ಸ್ಥಿತಿ ಈಗ ಗಂಭೀರವಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.
NEET ಪ್ರಶ್ನೆ ಪತ್ರಿಕೆ ಸೋರಿಕೆಯ ವಿಷಯದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಸಿಜೆಪಿ ಕಾರ್ಯಕರ್ತರು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕವೂ ದೇಶದ ಬೇರೆ ಬೇರೆ ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಕೇಂದ್ರ ಸರ್ಕಾರ ಮತ್ತು ಎನ್ಡಿಎ ಆಡಳಿತವಿರುವ ರಾಜ್ಯಗಳು ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಲ್ಲಾ ಎಫ್ಐಆರ್ಗಳನ್ನು ಹಿಂಪಡೆಯಬೇಕೆಂದು ಸಿಜೆಪಿ ಒತ್ತಾಯಿಸಿದೆ.