ದೇಶ

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z ಪ್ರತಿಭಟನೆ; ಕಲ್ಲು ತೂರಾಟ; BDO Ritesh ತಲೆಬುರುಡೆಗೆ ತೀವ್ರ ಗಾಯ!

ಮಾರಣಾಂತಿಕ ಹಲ್ಲೆಗೊಳಗಾದ ಅವರ ಆರೋಗ್ಯ ಸ್ಥಿತಿ ಈಗ ಗಂಭೀರವಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಪಾಟ್ನ: ಬಿಹಾರದಲ್ಲಿ Gen-Z ಗಳ ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದುಕೊಂಡಿದ್ದು, ಬಿಡಿಒ ರಿತೇಶ್ ಕುಮಾರ್ ತಲೆಬುರುಡೆಗೆ ತೀವ್ರ ಗಾಯಗಳಾಗಿವೆ.

Gen-Z ಗಳ ಪ್ರತಿಭಟನೆಯಲ್ಲಿ ನಡೆದ ಕಲ್ಲು ತೂರಾಟದಲ್ಲಿ ಚಪ್ರಾದ ಬಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ರಿತೇಶ್ ಕುಮಾರ್ ಸಿಂಗ್ ತಲೆ ಬುರುಡೆಗೆ ಪೆಟ್ಟು ಬಿದ್ದಿದ್ದು, ಮಾರಣಾಂತಿಕ ಹಲ್ಲೆಗೊಳಗಾದ ಅವರ ಆರೋಗ್ಯ ಸ್ಥಿತಿ ಈಗ ಗಂಭೀರವಾಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.

NEET ಪ್ರಶ್ನೆ ಪತ್ರಿಕೆ ಸೋರಿಕೆಯ ವಿಷಯದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಸಿಜೆಪಿ ಕಾರ್ಯಕರ್ತರು ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬಳಿಕವೂ ದೇಶದ ಬೇರೆ ಬೇರೆ ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿವೆ. ಕೇಂದ್ರ ಸರ್ಕಾರ ಮತ್ತು ಎನ್‌ಡಿಎ ಆಡಳಿತವಿರುವ ರಾಜ್ಯಗಳು ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಎಲ್ಲಾ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕೆಂದು ಸಿಜೆಪಿ ಒತ್ತಾಯಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

3rd T20I: ಜಿಂಬಾಬ್ವೆ ವಿರುದ್ಧ 35 ರನ್ ಗಳ ಗೆಲುವು, 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ, ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ