ಸಿಎಂ ಡಿಕೆ ಶಿವಕುಮಾರ್,ಸಿಎಂ ವಿಜಯ್ ಸಾಂದರ್ಭಿಕ ಚಿತ್ರ 
ದೇಶ

ಕಾವೇರಿಗೆ ಸಂಧಾನ ಸೂತ್ರ: ಆಗಸ್ಟ್ 3 ರಂದು ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ ಬರುವುದು ಡೌಟು? ಇದೇ ಕಾರಣ...!

ಮುಖ್ಯಮಂತ್ರಿ ವಿಜಯ್ ಅವರ ಬೆಂಗಳೂರು ಪ್ರವಾಸದ ಕುರಿತು ಈ ಹಿಂದೆ ನೀಡಿದ ಹೇಳಿಕೆಯಿಂದ ತಮಿಳುನಾಡು ಕೃಷಿ ಸಚಿವ ವಿನೋತ್ ಹಿಂದೆ ಸರಿದಿದ್ದು, ಅಧಿಕೃತ ಘೋಷಣೆಗಾಗಿ ಕಾಯುವಂತೆ ಪತ್ರಕರ್ತರಿಗೆ ಮನವಿ ಮಾಡಿದ್ದಾರೆ.

ಚೆನ್ನೈ: ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವ ಪ್ರಸ್ತಾವನೆ ಮತ್ತಿತರ ನದಿ ನೀರು ಹಂಚಿಕೆ ವಿಷಯಗಳ ಕುರಿತು ದ್ವಿಪಕ್ಷೀಯ ಮಾತುಕತೆಗಾಗಿ ಕರ್ನಾಟಕ ಸರ್ಕಾರ ನೀಡಿದ ಆಹ್ವಾನವನ್ನು ತಿರಸ್ಕರಿಸುವಂತೆ, ತಮಿಳುನಾಡಿನ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಭಾನುವಾರ ಆಗ್ರಹಿಸಿವೆ.

ಈ ಮಧ್ಯೆ ಮುಖ್ಯಮಂತ್ರಿ ವಿಜಯ್ ಅವರ ಬೆಂಗಳೂರು ಪ್ರವಾಸದ ಕುರಿತು ಈ ಹಿಂದೆ ನೀಡಿದ ಹೇಳಿಕೆಯಿಂದ ತಮಿಳುನಾಡು ಕೃಷಿ ಸಚಿವ ವಿನೋತ್ ಹಿಂದೆ ಸರಿದಿದ್ದು, ಅಧಿಕೃತ ಘೋಷಣೆಗಾಗಿ ಕಾಯುವಂತೆ ಪತ್ರಕರ್ತರಿಗೆ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ, ಆಗಸ್ಟ್ 3 ರಂದು ವಿಜಯ್ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದ್ದರು.

ಮೈಲಾಡುತುರೈನಲ್ಲಿ ನಡೆದ ರೈತ ಸಮನ್ವಯ ಸಮಿತಿಯ ಜಿಲ್ಲಾ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ರೈತ ಮುಖಂಡ ಪಿ.ಆರ್. ಪಾಂಡಿಯನ್, "ತಮಿಳುನಾಡಿನ ಮುಖ್ಯಮಂತ್ರಿಗಳು ಕರ್ನಾಟಕದ ಮುಖ್ಯಮಂತ್ರಿಯ ಆಹ್ವಾನವನ್ನು ತಿರಸ್ಕರಿಸಲೇಬೇಕು ಎಂದು ಹೇಳಿದರು.

ನೇರ ಮಾತುಕತೆಗಳು ಅಶಾಂತಿಗೆ ಕಾರಣವಾಗಬಹುದು ಎಂದು ರೈತರು ಅಭಿಪ್ರಾಯಪಟ್ಟಿದ್ದಾರೆ. "ಹಿಂದೆ ಇಂತಹ ಮಾತುಕತೆಗಳನ್ನು ನಡೆಸಿದಾಗ ಭಿನ್ನಾಭಿಪ್ರಾಯಗಳು ಮತ್ತು ಸಂಘರ್ಷಗಳು ಉಂಟಾಗಿದ್ದವು. ನೀರು ಹಂಚಿಕೆಗೆ ಸಂಬಂಧಿಸಿದ ಎಲ್ಲಾ ಚರ್ಚೆಗಳು ಕಡ್ಡಾಯವಾಗಿ 'ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ'ದ (CWMA) ಮೂಲಕವೇ ನಡೆಯಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.

"ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಯೋಜನೆ ಮತ್ತು ನೀರು ಬಿಡುಗಡೆಯ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿಗಳು ಕರ್ನಾಟಕಕ್ಕೆ ತೆರಳುವುದು ಕಾನೂನುಬಾಹಿರವಾಗಿದೆ. ಇದು ಸುಪ್ರೀಂ ಕೋರ್ಟ್ ಆದೇಶದ ಪ್ರಕಾರವೂ ಅಮಾನ್ಯವಾಗಿದೆ ಮತ್ತು ಸಂವಿಧಾನದ ಪ್ರಕಾರವೂ ಅಮಾನ್ಯವಾಗಿದೆ ಎಂದು ಪಾಂಡಿಯನ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ: ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ; ಪ್ರಧಾನಿ ಮೋದಿ ಘೋಷಣೆ! Video

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z ಪ್ರತಿಭಟನೆ; ಕಲ್ಲು ತೂರಾಟ; BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ